AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಅಮ್ಮನಿಗೆ ಔಷಧ ತರಲು ಹೋದ ಬಾಲಕಿ ಮೇಲೆ ಪಕ್ಕದ ಮನೆಯವನಿಂದ ಅತ್ಯಾಚಾರ

Rape Case: ಅಮ್ಮನೊಂದಿಗೆ ನಾನು ಮನೆಯಲ್ಲಿ ಒಬ್ಬಳೇ ಇದ್ದೆ. ತಾಯಿಯ ಆರೋಗ್ಯ ಹದಗೆಟ್ಟಿದ್ದರಿಂದ ಪಕ್ಕದ ಮನೆಯವರ ಬಳಿ ಸಹಾಯ ಕೇಳಿದ್ದೆ. ಆದರೆ, ಪಕ್ಕದ ಮನೆಯ ವ್ಯಕ್ತಿ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ. 

Crime News: ಅಮ್ಮನಿಗೆ ಔಷಧ ತರಲು ಹೋದ ಬಾಲಕಿ ಮೇಲೆ ಪಕ್ಕದ ಮನೆಯವನಿಂದ ಅತ್ಯಾಚಾರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 26, 2022 | 2:40 PM

Share

ನವದೆಹಲಿ: ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ತಾಯಿಗೆ ಔಷಧ ತರಲು ಹೊರಟಿದ್ದ ಮಗಳು ಪಕ್ಕದ ಮನೆಯ ಅಂಕಲ್ ಬಳಿ ಸಹಾಯ ಕೋರಿದ್ದಳು. ಆದರೆ, ಆಕೆಗೆ ಸಹಾಯ ಮಾಡಲು ಬಂದ ಅಂಕಲ್ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ದೆಹಲಿಯಲ್ಲಿ ಈ ಘಟನೆ ನಡೆದಿದೆ. ಅಪ್ರಾಪ್ತ ಬಾಲಕಿ ತನ್ನ ಅಸ್ವಸ್ಥ ತಾಯಿಗೆ ಸಹಾಯ ಕೇಳಿ ಪಕ್ಕದ ಮನೆಗೆ ಹೋಗಿದ್ದರು. ಆಗ ಅಲ್ಲಿ ಪಕ್ಕದ ಮನೆಯ ಅಂಕಲ್ ಆಕೆಯ ಮೇಲೆ ಅತ್ಯಾಚಾರ (Rape) ನಡೆಸಿದ್ದಾರೆ. ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ಜನವರಿ 22ರಂದು ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ಮರುದಿನ ಪ್ರಕರಣ ದಾಖಲಾಗಿದೆ. ದೆಹಲಿಯ ಪಾಂಡವ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಬಾಲಕಿ, ನನ್ನ ತಂದೆ ಊರಿಗೆ ಹೋಗಿದ್ದರು. ನನ್ನ ತಾಯಿಗೆ ಹುಷಾರಿರಲಿಲ್ಲ. ಅಮ್ಮನೊಂದಿಗೆ ನಾನು ಮನೆಯಲ್ಲಿ ಒಬ್ಬಳೇ ಇದ್ದೆ. ತಾಯಿಯ ಆರೋಗ್ಯ ಹದಗೆಟ್ಟಿದ್ದರಿಂದ ಪಕ್ಕದ ಮನೆಯವರ ಬಳಿ ಸಹಾಯ ಕೇಳಿದ್ದೆ. ಆದರೆ, ಪಕ್ಕದ ಮನೆಯ ವ್ಯಕ್ತಿ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಆಕೆ ದೂರಿನಲ್ಲಿ ತಿಳಿಸಿದ್ದಾಳೆ.

ಬಾಲಕಿಯ ಪಕ್ಕದ ಮನೆಯ ಅರುಣ್ ಎಂಬ ವ್ಯಕ್ತಿ ಔಷಧಿ ಕೊಡಿಸುವ ನೆಪದಲ್ಲಿ ಬಾಲಕಿಯನ್ನು ತಮ್ಮ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಇದಲ್ಲದೆ, ಆಕೆಗೆ ಕೊಲೆ ಬೆದರಿಕೆ ಹಾಕಿ ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ. ಬಾಲಕಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಆರೋಪಿಯ ಪತ್ತೆಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ಇದನ್ನೂ ಓದಿ: Gang Rape: ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಗುಪ್ತಾಂಗಕ್ಕೆ ಚೂಪಾದ ವಸ್ತು ಹಾಕಿದ ಕಾಮುಕರು!

Rape Case: ಆಟವಾಡುತ್ತಿದ್ದ 6 ವರ್ಷದ ಮಗುವಿನ ಮೇಲೆ ಕಾಮುಕನಿಂದ ಅತ್ಯಾಚಾರ; ಬಾಲಕಿ ಸ್ಥಿತಿ ಗಂಭೀರ

Published On - 2:40 pm, Wed, 26 January 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ