AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆ ಬೇಕೆಂದು ಪತ್ನಿ ಕೈಗೆ ಹಗ್ಗ ಕಟ್ಟಿ ಬಾವಿಗೆ ಇಳಿಬಿಟ್ಟ ಪತಿ

ಪತ್ನಿ ವರದಕ್ಷಿಣೆ ನೀಡಲಿಲ್ಲ ಎಂದು ಪತಿಯೊಬ್ಬ ಆಕೆಯ ಕೈಗೆ ಹಗ್ಗ ಕಟ್ಟಿ ಬಾವಿಗೆ ಇಳಿಬಿಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ತವರುಮನೆಯಿಂದ ಐದು ಲಕ್ಷ ರೂ. ವರದಕ್ಷಿಣೆ ತರುತ್ತೇನೆ ಎಂದು ಹೇಳುವವರೆಗೂ ಮೇಲಕ್ಕೆತ್ತುವುದಿಲ್ಲ ಎಂದು ಚಿತ್ರಹಿಂಸೆ ನೀಡಿದ್ದಾನೆ. ಈ ಘಟನೆ ಆಗಸ್ಟ್ 20 ರಂದು ನೀಮಚ್‌ನಲ್ಲಿ ಸಂಭವಿಸಿದೆ.

ವರದಕ್ಷಿಣೆ ಬೇಕೆಂದು ಪತ್ನಿ ಕೈಗೆ ಹಗ್ಗ ಕಟ್ಟಿ ಬಾವಿಗೆ  ಇಳಿಬಿಟ್ಟ ಪತಿ
ಮಹಿಳೆImage Credit source: India Today
ನಯನಾ ರಾಜೀವ್
|

Updated on:Sep 06, 2023 | 9:53 AM

Share

ಪತ್ನಿ ವರದಕ್ಷಿಣೆ ನೀಡಲಿಲ್ಲ ಎಂದು ಪತಿಯೊಬ್ಬ ಆಕೆಯ ಕೈಗೆ ಹಗ್ಗ ಕಟ್ಟಿ ಬಾವಿಗೆ ಇಳಿಬಿಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ತವರುಮನೆಯಿಂದ ಐದು ಲಕ್ಷ ರೂ. ವರದಕ್ಷಿಣೆ ತರುತ್ತೇನೆ ಎಂದು ಹೇಳುವವರೆಗೂ ಮೇಲಕ್ಕೆತ್ತುವುದಿಲ್ಲ ಎಂದು ಚಿತ್ರಹಿಂಸೆ ನೀಡಿದ್ದಾನೆ. ಈ ಘಟನೆ ಆಗಸ್ಟ್ 20 ರಂದು ನೀಮಚ್‌ನಲ್ಲಿ ಸಂಭವಿಸಿದೆ.

ವಿವರಗಳ ಪ್ರಕಾರ, ರಾಕೇಶ್ ಕಿರ್ ಎಂದು ಗುರುತಿಸಲಾದ ವ್ಯಕ್ತಿ ತನ್ನ ಪತ್ನಿ ಉಷಾಳ ಕೈಗಳನ್ನು ಕಟ್ಟಿ ಬಾವಿಯಲ್ಲಿ ತೂಗುಹಾಕಿದ್ದ. ಬಳಿಕ ವಿಡಿಯೋವನ್ನು ಪತ್ನಿಯ ಸಂಬಂಧಿಕರಿಗೆ ಕಳುಹಿಸಿದ್ದು, ಬಳಿಕ ಗ್ರಾಮದ ಕೆಲವರನ್ನು ಸಂಪರ್ಕಿಸಿ ಮಗಳನ್ನು ರಕ್ಷಿಸುವಂತೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು, ರಾಕೇಶ್‌ನನ್ನು ಬಂಧಿಸಲಾಗಿದೆ. ಘಟನೆಯ ಕುರಿತು ಪ್ರತಿಕ್ರಿಯಿಸಿದ ಪೊಲೀಸರು, ಆರೋಪಿ ವರದಕ್ಷಿಣೆಗಾಗಿ 3 ರಿಂದ 5 ಲಕ್ಷ ರೂ. ಸದಾ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಮತ್ತಷ್ಟು ಓದಿ: Viral: ಈ ಬಂಧನ ವರದಕ್ಷಿಣೆ ಕೇಳಿದ ವರನಿಗೆ ಹಗ್ಗದ ಅನುಬಂಧನ

ಉಷಾ ಅವರಿಗೆ 3 ವರ್ಷಗಳ ಹಿಂದೆ ಮಧ್ಯಪ್ರದೇಶದ ಜಾವಾದ್‌ನ ಕಿರ್ಪುರ ನಿವಾಸಿ ರಾಕೇಶ್ ಕೀರ್ ಎಂಬುವವರೊಂದಿಗೆ ವಿವಾಹವಾಗಿತ್ತು. ಅಂದಿನಿಂದ ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಆಗುತ್ತಿರುವ ಈ 40 ಸೆಕೆಂಡ್​ಗಳ ವಿಡಿಯೋದಲ್ಲಿ ಮಹಿಳೆ ತನ್ನನ್ನು ರಕ್ಷಿಸುವಂತೆ ಮನವಿ ಮಾಡಿದ್ದಾಳೆ.

ಕ್ರೈಂ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Published On - 9:53 am, Wed, 6 September 23

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!