AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ರಸ್ತೆಬದಿ ಗೋಲ್​ಗಪ್ಪ ತಿನ್ನುತ್ತಿದ್ದ ಅಕ್ಕತಂಗಿಯರ ಮೇಲೆ ಕಾರು ಹತ್ತಿಸಿದ ಕುಡುಕ; ಬಾಲಕಿ ಸಾವು

ಮೂವರು ಅಕ್ಕ-ತಂಗಿಯರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹಾಗೇ, ಕಾರು ಡಿಕ್ಕಿ ಹೊಡೆದಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ 6 ವರ್ಷದ ರಿಯಾ ಸೋಮವಾರ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾಳೆ.

Crime News: ರಸ್ತೆಬದಿ ಗೋಲ್​ಗಪ್ಪ ತಿನ್ನುತ್ತಿದ್ದ ಅಕ್ಕತಂಗಿಯರ ಮೇಲೆ ಕಾರು ಹತ್ತಿಸಿದ ಕುಡುಕ; ಬಾಲಕಿ ಸಾವು
ನೊಯ್ಡಾದಲ್ಲಿ ಕಾರು ಅಪಘಾತ
TV9 Web
| Edited By: |

Updated on: Nov 29, 2022 | 8:44 AM

Share

ನೊಯ್ಡಾ: ಉತ್ತರ ಪ್ರದೇಶದ ನೊಯ್ಡಾದಲ್ಲಿ (Noida) ಕಂಠಪೂರ್ತಿ ಕುಡಿದಿದ್ದ ಚಾಲಕನೊಬ್ಬ ರಸ್ತೆ ಬದಿಯ ವ್ಯಾಪಾರಿಯ ಬಳಿ ಗೋಲ್​ಗಪ್ಪ (Golgappa) ತಿನ್ನುತ್ತಾ ನಿಂತಿದ್ದ ಮೂವರು ಅಕ್ಕ-ತಂಗಿಯರ ಮೇಲೆ ತನ್ನ ಕಾರನ್ನು ಹತ್ತಿಸಿದ್ದಾನೆ. ಬಳಿಕ ಆ ಕಾರು ಮುಂದಕ್ಕೆ ಹೋಗಿ ಗೋಡೆಗೆ ಡಿಕ್ಕಿ (Car Accident) ಹೊಡೆದಿದೆ. ಈ ವೇಳೆ ಕಾರಿಗೆ ಸಿಕ್ಕಿ 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.

ನೊಯ್ಡಾದ ಸೆಕ್ಟರ್-45ರ ಸದರ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗೋಲ್ಗಪ್ಪ ತಿನ್ನುತ್ತಿದ್ದ ಮೂವರು ಸಹೋದರಿಯರಾದ ರಿಯಾ, ಅನು ಮತ್ತು ಅಂಕಿತಾ ಅವರ ಬಳಿ ಅತಿವೇಗದಲ್ಲಿ ಬಂದ ಕಾರು ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿ: ವಿಐಪಿ ನೋಂದಣಿ ಫಲಕ ಹೊಂದಿದ್ದ ಬಿಎಂಡಬ್ಲ್ಯು ಕಾರು ಡಿಕ್ಕಿ ಹೊಡೆದು ಸೈಕ್ಲಿಸ್ಟ್ ಸಾವು

ಈ ವೇಳೆ ಆ ಮೂವರು ಅಕ್ಕ-ತಂಗಿಯರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹಾಗೇ, ಕಾರು ಡಿಕ್ಕಿ ಹೊಡೆದಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ 6 ವರ್ಷದ ರಿಯಾ ಸೋಮವಾರ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾಳೆ ಎಂದು ಪೊಲೀಸ್ ಅಧಿಕಾರಿ ರಾಜೀವ್ ಬಲ್ಯಾನ್ ತಿಳಿಸಿದ್ದಾರೆ.

15 ವರ್ಷದ ಅನುಗೆ ಬೆನ್ನುಮೂಳೆಯಲ್ಲಿ ಗಾಯಗಳಾಗಿವೆ. 18 ವರ್ಷದ ಅಂಕಿತಾಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೂವರು ಮಕ್ಕಳ ಜೊತೆ ನಿಂತು ಗೋಲ್​ಗಪ್ಪ ಕೊಡಿಸುತ್ತಿದ್ದ ಅವರ ತಾಯಿ ಕಾರು ನುಗ್ಗಿದ ರಭಸದಿಂದ ಗಾಬರಿಯಾಗಿ ಪಕ್ಕಕ್ಕೆ ಜಿಗಿದಿದ್ದಾರೆ. ಇದರಿಂದ ಅವರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Attibele: ಅಪಘಾತದಿಂದ ಧರೆಗುರುಳಿದ ಕನ್ನಡದ ಗಡಿ ಗೋಪುರ- ನಾಲ್ವಡಿ ಕೃಷ್ಣರಾಜರ ಕಾಲದಲ್ಲಿ ಕಟ್ಟಲಾಗಿದ್ದ ಏಕೈಕ ಮೈಲಿಗಲ್ಲು ಇದು!

4 ಮಂದಿ ಪ್ರಯಾಣಿಕರಿದ್ದ ಆ ಕಾರು ಗೋಡೆಗೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದಿದ್ದರಿಂದ ಗೋಲ್​ಗಪ್ಪ ಮಾರಾಟ ಮಾಡುತ್ತಿದ್ದ ಗಾಡಿ ಕೂಡ ಪಲ್ಟಿಯಾಗಿದೆ. ತಕ್ಷಣ ಸ್ಥಳದಲ್ಲಿ ಜಮಾಯಿಸಿದ ಜನರು ಕಾರು ಚಾಲಕನನ್ನು ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಚಾಲಕನನ್ನು ಬಂಧಿಸಿದ್ದು, ಕಾರನ್ನು ವಶಪಡಿಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು