AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ರಸ್ತೆಬದಿ ಗೋಲ್​ಗಪ್ಪ ತಿನ್ನುತ್ತಿದ್ದ ಅಕ್ಕತಂಗಿಯರ ಮೇಲೆ ಕಾರು ಹತ್ತಿಸಿದ ಕುಡುಕ; ಬಾಲಕಿ ಸಾವು

ಮೂವರು ಅಕ್ಕ-ತಂಗಿಯರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹಾಗೇ, ಕಾರು ಡಿಕ್ಕಿ ಹೊಡೆದಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ 6 ವರ್ಷದ ರಿಯಾ ಸೋಮವಾರ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾಳೆ.

Crime News: ರಸ್ತೆಬದಿ ಗೋಲ್​ಗಪ್ಪ ತಿನ್ನುತ್ತಿದ್ದ ಅಕ್ಕತಂಗಿಯರ ಮೇಲೆ ಕಾರು ಹತ್ತಿಸಿದ ಕುಡುಕ; ಬಾಲಕಿ ಸಾವು
ನೊಯ್ಡಾದಲ್ಲಿ ಕಾರು ಅಪಘಾತ
TV9 Web
| Edited By: |

Updated on: Nov 29, 2022 | 8:44 AM

Share

ನೊಯ್ಡಾ: ಉತ್ತರ ಪ್ರದೇಶದ ನೊಯ್ಡಾದಲ್ಲಿ (Noida) ಕಂಠಪೂರ್ತಿ ಕುಡಿದಿದ್ದ ಚಾಲಕನೊಬ್ಬ ರಸ್ತೆ ಬದಿಯ ವ್ಯಾಪಾರಿಯ ಬಳಿ ಗೋಲ್​ಗಪ್ಪ (Golgappa) ತಿನ್ನುತ್ತಾ ನಿಂತಿದ್ದ ಮೂವರು ಅಕ್ಕ-ತಂಗಿಯರ ಮೇಲೆ ತನ್ನ ಕಾರನ್ನು ಹತ್ತಿಸಿದ್ದಾನೆ. ಬಳಿಕ ಆ ಕಾರು ಮುಂದಕ್ಕೆ ಹೋಗಿ ಗೋಡೆಗೆ ಡಿಕ್ಕಿ (Car Accident) ಹೊಡೆದಿದೆ. ಈ ವೇಳೆ ಕಾರಿಗೆ ಸಿಕ್ಕಿ 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.

ನೊಯ್ಡಾದ ಸೆಕ್ಟರ್-45ರ ಸದರ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗೋಲ್ಗಪ್ಪ ತಿನ್ನುತ್ತಿದ್ದ ಮೂವರು ಸಹೋದರಿಯರಾದ ರಿಯಾ, ಅನು ಮತ್ತು ಅಂಕಿತಾ ಅವರ ಬಳಿ ಅತಿವೇಗದಲ್ಲಿ ಬಂದ ಕಾರು ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿ: ವಿಐಪಿ ನೋಂದಣಿ ಫಲಕ ಹೊಂದಿದ್ದ ಬಿಎಂಡಬ್ಲ್ಯು ಕಾರು ಡಿಕ್ಕಿ ಹೊಡೆದು ಸೈಕ್ಲಿಸ್ಟ್ ಸಾವು

ಈ ವೇಳೆ ಆ ಮೂವರು ಅಕ್ಕ-ತಂಗಿಯರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹಾಗೇ, ಕಾರು ಡಿಕ್ಕಿ ಹೊಡೆದಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ 6 ವರ್ಷದ ರಿಯಾ ಸೋಮವಾರ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾಳೆ ಎಂದು ಪೊಲೀಸ್ ಅಧಿಕಾರಿ ರಾಜೀವ್ ಬಲ್ಯಾನ್ ತಿಳಿಸಿದ್ದಾರೆ.

15 ವರ್ಷದ ಅನುಗೆ ಬೆನ್ನುಮೂಳೆಯಲ್ಲಿ ಗಾಯಗಳಾಗಿವೆ. 18 ವರ್ಷದ ಅಂಕಿತಾಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೂವರು ಮಕ್ಕಳ ಜೊತೆ ನಿಂತು ಗೋಲ್​ಗಪ್ಪ ಕೊಡಿಸುತ್ತಿದ್ದ ಅವರ ತಾಯಿ ಕಾರು ನುಗ್ಗಿದ ರಭಸದಿಂದ ಗಾಬರಿಯಾಗಿ ಪಕ್ಕಕ್ಕೆ ಜಿಗಿದಿದ್ದಾರೆ. ಇದರಿಂದ ಅವರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Attibele: ಅಪಘಾತದಿಂದ ಧರೆಗುರುಳಿದ ಕನ್ನಡದ ಗಡಿ ಗೋಪುರ- ನಾಲ್ವಡಿ ಕೃಷ್ಣರಾಜರ ಕಾಲದಲ್ಲಿ ಕಟ್ಟಲಾಗಿದ್ದ ಏಕೈಕ ಮೈಲಿಗಲ್ಲು ಇದು!

4 ಮಂದಿ ಪ್ರಯಾಣಿಕರಿದ್ದ ಆ ಕಾರು ಗೋಡೆಗೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದಿದ್ದರಿಂದ ಗೋಲ್​ಗಪ್ಪ ಮಾರಾಟ ಮಾಡುತ್ತಿದ್ದ ಗಾಡಿ ಕೂಡ ಪಲ್ಟಿಯಾಗಿದೆ. ತಕ್ಷಣ ಸ್ಥಳದಲ್ಲಿ ಜಮಾಯಿಸಿದ ಜನರು ಕಾರು ಚಾಲಕನನ್ನು ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಚಾಲಕನನ್ನು ಬಂಧಿಸಿದ್ದು, ಕಾರನ್ನು ವಶಪಡಿಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ