AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ರಸ್ತೆಬದಿ ಗೋಲ್​ಗಪ್ಪ ತಿನ್ನುತ್ತಿದ್ದ ಅಕ್ಕತಂಗಿಯರ ಮೇಲೆ ಕಾರು ಹತ್ತಿಸಿದ ಕುಡುಕ; ಬಾಲಕಿ ಸಾವು

ಮೂವರು ಅಕ್ಕ-ತಂಗಿಯರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹಾಗೇ, ಕಾರು ಡಿಕ್ಕಿ ಹೊಡೆದಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ 6 ವರ್ಷದ ರಿಯಾ ಸೋಮವಾರ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾಳೆ.

Crime News: ರಸ್ತೆಬದಿ ಗೋಲ್​ಗಪ್ಪ ತಿನ್ನುತ್ತಿದ್ದ ಅಕ್ಕತಂಗಿಯರ ಮೇಲೆ ಕಾರು ಹತ್ತಿಸಿದ ಕುಡುಕ; ಬಾಲಕಿ ಸಾವು
ನೊಯ್ಡಾದಲ್ಲಿ ಕಾರು ಅಪಘಾತ
TV9 Web
| Edited By: |

Updated on: Nov 29, 2022 | 8:44 AM

Share

ನೊಯ್ಡಾ: ಉತ್ತರ ಪ್ರದೇಶದ ನೊಯ್ಡಾದಲ್ಲಿ (Noida) ಕಂಠಪೂರ್ತಿ ಕುಡಿದಿದ್ದ ಚಾಲಕನೊಬ್ಬ ರಸ್ತೆ ಬದಿಯ ವ್ಯಾಪಾರಿಯ ಬಳಿ ಗೋಲ್​ಗಪ್ಪ (Golgappa) ತಿನ್ನುತ್ತಾ ನಿಂತಿದ್ದ ಮೂವರು ಅಕ್ಕ-ತಂಗಿಯರ ಮೇಲೆ ತನ್ನ ಕಾರನ್ನು ಹತ್ತಿಸಿದ್ದಾನೆ. ಬಳಿಕ ಆ ಕಾರು ಮುಂದಕ್ಕೆ ಹೋಗಿ ಗೋಡೆಗೆ ಡಿಕ್ಕಿ (Car Accident) ಹೊಡೆದಿದೆ. ಈ ವೇಳೆ ಕಾರಿಗೆ ಸಿಕ್ಕಿ 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.

ನೊಯ್ಡಾದ ಸೆಕ್ಟರ್-45ರ ಸದರ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗೋಲ್ಗಪ್ಪ ತಿನ್ನುತ್ತಿದ್ದ ಮೂವರು ಸಹೋದರಿಯರಾದ ರಿಯಾ, ಅನು ಮತ್ತು ಅಂಕಿತಾ ಅವರ ಬಳಿ ಅತಿವೇಗದಲ್ಲಿ ಬಂದ ಕಾರು ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿ: ವಿಐಪಿ ನೋಂದಣಿ ಫಲಕ ಹೊಂದಿದ್ದ ಬಿಎಂಡಬ್ಲ್ಯು ಕಾರು ಡಿಕ್ಕಿ ಹೊಡೆದು ಸೈಕ್ಲಿಸ್ಟ್ ಸಾವು

ಈ ವೇಳೆ ಆ ಮೂವರು ಅಕ್ಕ-ತಂಗಿಯರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹಾಗೇ, ಕಾರು ಡಿಕ್ಕಿ ಹೊಡೆದಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ 6 ವರ್ಷದ ರಿಯಾ ಸೋಮವಾರ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾಳೆ ಎಂದು ಪೊಲೀಸ್ ಅಧಿಕಾರಿ ರಾಜೀವ್ ಬಲ್ಯಾನ್ ತಿಳಿಸಿದ್ದಾರೆ.

15 ವರ್ಷದ ಅನುಗೆ ಬೆನ್ನುಮೂಳೆಯಲ್ಲಿ ಗಾಯಗಳಾಗಿವೆ. 18 ವರ್ಷದ ಅಂಕಿತಾಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೂವರು ಮಕ್ಕಳ ಜೊತೆ ನಿಂತು ಗೋಲ್​ಗಪ್ಪ ಕೊಡಿಸುತ್ತಿದ್ದ ಅವರ ತಾಯಿ ಕಾರು ನುಗ್ಗಿದ ರಭಸದಿಂದ ಗಾಬರಿಯಾಗಿ ಪಕ್ಕಕ್ಕೆ ಜಿಗಿದಿದ್ದಾರೆ. ಇದರಿಂದ ಅವರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Attibele: ಅಪಘಾತದಿಂದ ಧರೆಗುರುಳಿದ ಕನ್ನಡದ ಗಡಿ ಗೋಪುರ- ನಾಲ್ವಡಿ ಕೃಷ್ಣರಾಜರ ಕಾಲದಲ್ಲಿ ಕಟ್ಟಲಾಗಿದ್ದ ಏಕೈಕ ಮೈಲಿಗಲ್ಲು ಇದು!

4 ಮಂದಿ ಪ್ರಯಾಣಿಕರಿದ್ದ ಆ ಕಾರು ಗೋಡೆಗೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದಿದ್ದರಿಂದ ಗೋಲ್​ಗಪ್ಪ ಮಾರಾಟ ಮಾಡುತ್ತಿದ್ದ ಗಾಡಿ ಕೂಡ ಪಲ್ಟಿಯಾಗಿದೆ. ತಕ್ಷಣ ಸ್ಥಳದಲ್ಲಿ ಜಮಾಯಿಸಿದ ಜನರು ಕಾರು ಚಾಲಕನನ್ನು ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಚಾಲಕನನ್ನು ಬಂಧಿಸಿದ್ದು, ಕಾರನ್ನು ವಶಪಡಿಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್