AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ನಂಬಿಸಿ ಸೆಕ್ಸ್​ ದಂಧೆ; ನಿರ್ಮಾಪಕ ಸೇರಿ ಮೂವರ ಬಂಧನ

ಸಿನಿಮಾಗಳಲ್ಲಿ ನಟಿಸುವ ಅವಕಾಶ ನೀಡುತ್ತೇನೆಂದು ನಂಬಿಸುತ್ತಿದ್ದ ನಿರ್ಮಾಪಕ ಆಡಿಷನ್​ಗೆ ಬಂದ ಯುವತಿಯರನ್ನು ಸೆಕ್ಸ್​ ದಂಧೆಗೆ ಬಳಸಿಕೊಳ್ಳುತ್ತಿದ್ದ ಎಂಬ ಆತಂಕಕಾರಿ ವಿಷಯ ಮಹಾರಾಷ್ಟ್ರದ ಥಾಣೆಯಲ್ಲಿ ಬೆಳಕಿಗೆ ಬಂದಿದೆ.

Crime News: ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ನಂಬಿಸಿ ಸೆಕ್ಸ್​ ದಂಧೆ; ನಿರ್ಮಾಪಕ ಸೇರಿ ಮೂವರ ಬಂಧನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 21, 2021 | 6:23 PM

Share

ಥಾಣೆ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯ ಗಂಡ ರಾಜ್ ಕುಂದ್ರಾ (Shilpa Shetty Husband Raj Kundra) ಅವರನ್ನು ಪೋರ್ನೋಗ್ರಫಿ ಕೇಸ್​ನಲ್ಲಿ ಬಂಧಿಸಿದ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಮತ್ತೊಂದು ಸೆಕ್ಸ್​ ದಂಧೆ (Sex Racket) ಪ್ರಕರಣ ಬೆಳಕಿಗೆ ಬಂದಿದೆ. ಥಾಣೆ ಜಿಲ್ಲೆಯ ಮಿರಾ ಪ್ರದೇಶದಲ್ಲಿ ಸೆಕ್ಸ್​ ರಾಕೆಟ್ ನಡೆಸುತ್ತಿದ್ದ ಆರೋಪದಲ್ಲಿ ಸಿನಿಮಾ ನಿರ್ಮಾಪಕ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಸಿನಿಮಾಗಳಲ್ಲಿ ನಟಿಸುವ ಅವಕಾಶ ನೀಡುತ್ತೇನೆಂದು ನಂಬಿಸುತ್ತಿದ್ದ ನಿರ್ಮಾಪಕ (Film Producer) ಆಡಿಷನ್​ಗೆ ಬಂದ ಯುವತಿಯರನ್ನು ಸೆಕ್ಸ್​ ದಂಧೆಗೆ ಬಳಸಿಕೊಳ್ಳುತ್ತಿದ್ದ ಎಂಬ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ.

ಮಿರಾ ರಸ್ತೆಯಲ್ಲಿರುವ ಹೌಸಿಂಗ್ ಕಾಂಪ್ಲೆಕ್ಸ್​ನಲ್ಲಿ ಹಲವು ವರ್ಷಗಳಿಂದ ಈ ಸೆಕ್ಸ್​ ದಂಧೆ ನಡೆಸಲಾಗುತ್ತಿತ್ತು. ಸಿನಿಮಾಗಳಲ್ಲಿ ನಟಿಸಲು ಅವಕಾಶ ಕೇಳಿಕೊಂಡು ಬರುವ ಯುವತಿಯರನ್ನು ಈ ದಂಧೆಗೆ ಬಳಸಿಕೊಳ್ಳಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಕನ್ನಯ್ಯಲಾಲ್ ಬಾಲಚಂದಾನಿ ಎಂಬ ನಿರ್ಮಾಪಕನಿಗೆ ವನಿತಾ ಇಂಗ್ಲೆ ಎಂಬ ಮಹಿಳೆ ಯುವತಿಯರನ್ನು ಪೂರೈಕೆ ಮಾಡುತ್ತಿದ್ದಳು. ಆ ಯುವತಿಯರನ್ನು ಸೆಕ್ಸ್​ ದಂಧೆಗೆ ಬಳಸಿಕೊಳ್ಳಲಾಗುತ್ತಿತ್ತು.

ಸೆಕ್ಸ್​ ದಂಧೆ ಬಯಲಾಗಿದ್ದು ಹೇಗೆ?: ಮಿರಾ ರಸ್ತೆಯ ಸುತ್ತಮುತ್ತ ಸೆಕ್ಸ್​ ದಂಧೆ ನಡೆಸಲಾಗುತ್ತಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಆರೋಪಿಗಳನ್ನು ಹಿಡಿಯಲು ಬಲೆ ಬೀಸಿದ್ದರು. ತಾವೇ ಒಬ್ಬ ವ್ಯಕ್ತಿಯನ್ನು ಗ್ರಾಹಕನ ರೀತಿಯಲ್ಲಿ ಆ ದಂಧೆ ನಡೆಯುವ ಸ್ಥಳಕ್ಕೆ ಕಳುಹಿಸಿದ್ದರು. ಬಳಿಕ ರೇಡ್ ಮಾಡಿ ಅಲ್ಲಿದ್ದ ಮೂವರು ಕಿಂಗ್​ಪಿನ್​ಗಳನ್ನು ಬಂಧಿಸಿದ್ದಾರೆ. ಹಾಗೇ, ಅಲ್ಲಿದ್ದ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ.

ಆ ನಿರ್ಮಾಪಕ ಯಾರೆಂಬ ಬಗ್ಗೆ ಇನ್ನೂ ಸಂಪೂರ್ಣ ಮಾಹಿತಿಯನ್ನು ಪೊಲೀಸರು ನೀಡಿಲ್ಲ. ಈ ಸೆಕ್ಸ್​ ದಂಧೆಯಲ್ಲಿ ಇನ್ನೂ ಯಾವೆಲ್ಲ ಪ್ರಭಾವಿಗಳ ಕೈವಾಡವಿದೆ ಎಂಬ ಬಗ್ಗೆ ತನಿಖೆಯನ್ನು ಮುಂದುವರೆಸಲಾಗಿದೆ.

ಇದನ್ನೂ ಓದಿ: Raj Kundra: ರಾಜಕಾರಣಿಗಳು ಅಶ್ಲೀಲ ವಿಡಿಯೋ ನೋಡುತ್ತಿದ್ದಾರೆ; ಬಂಧನದ ಬೆನ್ನಲ್ಲೇ ರಾಜ್ ಕುಂದ್ರಾ ಹಳೇ ಟ್ವೀಟ್​ಗಳು ವೈರಲ್

Raj Kundra: ಪತಿ ರಾಜ್​ ಕುಂದ್ರಾರ ನೀಲಿ ಚಿತ್ರ ದಂಧೆಯಲ್ಲಿ ಶಿಲ್ಪಾ ಶೆಟ್ಟಿಯೂ ಭಾಗಿ?!-ಮೌನ ಮುರಿದ ಮುಂಬೈ ಪೊಲೀಸರು

(Film Producer and Two Others Held for Running Sex Racket in Thane near Mumbai)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ