ಆರೋಪಿಗಳ ಬಳಿ ಇದ್ದ ಎಲ್ಲ ಮಾರಕಾಸ್ತ್ರಗಳನ್ನೂ ವಶಪಡಿಸಿಕೊಳ್ಳಲಾಗಿದೆ. ಸದ್ಯ ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು: ಪೊಲೀಸರು ಮತ್ತು ಕೊಲೆ ಪ್ರಕರಣದ ಆರೋಪಿಗಳ ನಡುವೆ ಗುಂಡಿನ ಚಕಮಕಿ ನಡೆದ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೆ.ಜಿ.ಹಳ್ಳಿ ಸುಲ್ತಾನ್ನನ್ನು ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸಲು ಕೆ.ಜಿ.ಹಳ್ಳಿ ಪೊಲೀಸರು ತೆರಳಿದ್ದಾಗ ಘಟನೆ ನಡೆದಿದೆ.
ಅಪಾರ್ಟ್ಮೆಂಟ್ವೊಂದರಲ್ಲಿ ಆರೋಪಿಗಳಾದ ಮೆಹರಜ್ ಮತ್ತು ಅಬ್ರಹಾರ್ ಇದ್ದ ಬಗ್ಗೆ ಮಾಹಿತಿ ಪಡೆದಿದ್ದ ಪೊಲೀಸರು, ಅವರನ್ನು ಬಂಧಿಸಲು ತೆರಳಿದ್ದರು. ಆದರೆ ಆರೋಪಿಗಳು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಪೊಲೀಸರೂ ಫೈರಿಂಗ್ ಮಾಡಿದ್ದಾರೆ.
ಈ ವೇಳೆ ಎಎಸ್ಐ ದಿನೇಶ್ ಪಾಟೀಲ್ ಹೊಡೆದ ಗುಂಡು, ಮೆಹರಜ್ ಮುಖಕ್ಕೆ ತಗುಲಿದೆ. ಇವರಿಬ್ಬರ ವಿರುದ್ಧ ಒಟ್ಟು 36 ವಿವಿಧ ಕೇಸ್ಗಳು ಇದ್ದವು. ಆರೋಪಿಗಳ ಬಳಿ ಇದ್ದ ಎಲ್ಲ ಮಾರಕಾಸ್ತ್ರಗಳನ್ನೂ ವಶಪಡಿಸಿಕೊಳ್ಳಲಾಗಿದೆ. ಸದ್ಯ ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾಂಪೌಂಡ್ ಒಳಗಿದ್ದ 8 ಬೈಕ್ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಖದೀಮನ ದುಷ್ಕೃತ್ಯ CCTVಯಲ್ಲಿ ಸೆರೆ