AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತೆ-ಮಾವನ ಕಾಟ ತಾಳಲಾರದೆ 3 ತಿಂಗಳ ಹೆಣ್ಣು ಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಂದ ತಾಯಿ!

ಆಗಸ್ಟ್‌ನಲ್ಲಿ ಮುಂಬೈನ ಮಹಿಳೆ ಎರಡನೇ ಬಾರಿಗೆ ಹೆಣ್ಣುಮಗುವಿಗೆ ಜನ್ಮ ನೀಡಿದ್ದು, ಇದರಿಂದ ಮನೆಯವರೆಲ್ಲರೂ ಆಕೆಯ ಮೇಲೆ ಕೋಪಗೊಂಡಿದ್ದರು. ಹೆಣ್ಣು ಮಗುವನ್ನು ಹೆತ್ತಿದ್ದಕ್ಕೆ ಆಕೆಯನ್ನು ಮನೆಯಿಂದ ಹೊರಗೆ ಹಾಕಿದ್ದರು.

ಅತ್ತೆ-ಮಾವನ ಕಾಟ ತಾಳಲಾರದೆ 3 ತಿಂಗಳ ಹೆಣ್ಣು ಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಂದ ತಾಯಿ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 03, 2021 | 1:41 PM

Share

ಮುಂಬೈ: ಹೆಣ್ಣು ಮಗುವನ್ನು ಹೆತ್ತಿದ್ದೇಕೆ? ಎಂದು ದಿನವೂ ಮನೆಯಲ್ಲಿ ಗಂಡ, ಅತ್ತೆ-ಮಾವ ಕಿರುಕುಳ ನೀಡುತ್ತಿದ್ದುದರಿಂದ ಬೇಸತ್ತ ಮಹಿಳೆಯೊಬ್ಬರು ತಮ್ಮ 3 ತಿಂಗಳ ಹೆಣ್ಣು ಮಗುವನ್ನು ನೀರಿನ ಟ್ಯಾಂಕ್​ನಲ್ಲಿ ಮುಳುಗಿಸಿ ಕೊಂದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಇಲ್ಲಿನ ಮುಂಬೈನ ಕಲಾಚೌಕಿ ಪ್ರದೇಶದಲ್ಲಿ ವಾಸವಾಗಿದ್ದ ಮಹಿಳೆಯೊಬ್ಬರು ಮನೆಯವರ ಕಿರುಕುಳ ತಾಳಲಾರದೆ ತಾನು ಹೆತ್ತ ಹೆಣ್ಣು ಮಗುವನ್ನು ತಾನೇ ಕೊಲೆ ಮಾಡಿದ್ದಾರೆ.

ಆರಂಭದಲ್ಲಿ ತನ್ನ 3 ತಿಂಗಳ ಮಗುವನ್ನು ಯಾರೋ ಮಹಿಳೆ ಅಪಹರಿಸಿದ್ದಾರೆ ಎಂದು 36 ವರ್ಷದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು. ನನಗೆ ನಿದ್ರೆ ಬರುವ ಔಷಧಿ ನೀಡಿ ಮಹಿಳೆಯೊಬ್ಬರು ನನ್ನ ಮಗುವನ್ನು ಅಪಹರಿಸಿದ್ದಾರೆ ಎಂದು ಆಕೆ ಆರೋಪಿಸಿದ್ದರು. ಆ ತಾಯಿಯ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ಶಂಕಿತ ರೇಖಾಚಿತ್ರವನ್ನು ತಾಯಿಗೆ ನೀಡಿದ್ದರು.

ಅಪಹರಣ ನಡೆದಿದೆ ಎನ್ನಲಾದ ಸ್ಥಳದಲ್ಲೇ ತಂಡಗಳನ್ನು ರಚಿಸಿ ತಪಾಸಣೆಗಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಆದರೆ, ಹೆಚ್ಚಿನ ವಿಚಾರಣೆ ವೇಳೆ ಆ ಮಹಿಳೆ ತನ್ನ ಮಗುವನ್ನು ತಾನೇ ಕೊಂದಿರುವುದಾಗಿ ಒಪ್ಪಿಕೊಂಡಿದ್ದು, ಮಗುವನ್ನು ಮನೆಯ ಮೇಲಿನ ನೀರಿನ ಟ್ಯಾಂಕ್​ನಲ್ಲಿ ಮುಳುಗಿಸಿರುವುದಾಗಿ ಹೇಳಿದ್ದಾರೆ.

ಆ ಮಹಿಳೆ 2011ರಲ್ಲಿ ಮದುವೆಯಾಗಿದ್ದು, 2013ರಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ಕಳೆದ ವರ್ಷ ಆಕೆ ಎರಡನೇ ಬಾರಿಗೆ ಗರ್ಭಿಣಿಯಾದಾಗ ಆಕೆಯ ಅತ್ತೆ ಮಾವಂದಿರು ಮಗುವಿನ ಲಿಂಗವನ್ನು ಪತ್ತೆ ಹಚ್ಚಲು ಮಾಟ-ಮಂತ್ರ ಮಾಡಿದ್ದರು. ಆಕೆಯ ಹೊಟ್ಟೆಯಲ್ಲಿ ಮತ್ತೆ ಹೆಣ್ಣು ಮಗುವೇ ಇದೆ ಎಂಬುದು ಗೊತ್ತಾಗುತ್ತಿದ್ದಂತೆ ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸಿದ್ದರು. ಈ ಹಿಂದೆಯೂ ಆಕೆಗೆ ಇದೇ ಕಾರಣಕ್ಕೆ ಗರ್ಭಪಾತ ಮಾಡಿಸಲಾಗಿತ್ತು.

ಆದರೆ, ಈ ಬಾರಿ ಆಕೆ ಗರ್ಭಪಾತ ಮಾಡಿಸಿಕೊಳ್ಳದೆ ಮಗುವಿಗೆ ಜನ್ಮ ನೀಡಿದ್ದರು. ಆಗಸ್ಟ್‌ನಲ್ಲಿ ಆಕೆ ಮತ್ತೆ ಹೆಣ್ಣುಮಗುವಿಗೆ ಜನ್ಮ ನೀಡಿದ್ದು, ಇದರಿಂದ ಮನೆಯವರೆಲ್ಲರೂ ಆಕೆಯ ಮೇಲೆ ಕೋಪಗೊಂಡಿದ್ದರು. ಹೆಣ್ಣು ಮಗುವನ್ನು ಹೆತ್ತಿದ್ದಕ್ಕೆ ಆಕೆಯನ್ನು ಮನೆಯಿಂದ ಹೊರಗೆ ಹಾಕಿದ್ದರು. ತನ್ನ ತಂದೆ-ತಾಯಿಯ ಜೊತೆ ವಾಸ ಮಾಡುತ್ತಿದ್ದ ಆಕೆ ತನ್ನ ಮನೆಯವರ ಕಿರುಕುಳದಿಂದ ಬೇಸತ್ತಿದ್ದರು. ಗಂಡನ ಮನೆಯವರ ಕಾಟ ತಾಳಲಾರದೆ ಆಕೆ 3 ತಿಂಗಳ ಹೆಣ್ಣು ಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾರೆ.

ಇದನ್ನೂ ಓದಿ: ಗುಬ್ಬಿ: ಪ್ರೀತಿಸಿ ಮದುವೆಯಾದಗಿದ್ದ ಪತ್ನಿಯನ್ನೆ ಕೊಲೆ ಮಾಡಿದವನಿಗೆ ಜೀವಾವಧಿ ಶಿಕ್ಷೆ

Murder: ರಾಡ್‌ನಿಂದ ಪತಿ ಹತ್ಯೆಗೈದು ಪೊಲೀಸರ ಮುಂದೆ ಶರಣಾದ 2ನೇ ಪತ್ನಿ, ಕೊಲೆಯ ಹಿಂದೆ ಆಸ್ತಿ ಕಬಳಿಕೆ ಆರೋಪ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ