AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತೆ-ಮಾವನ ಕಾಟ ತಾಳಲಾರದೆ 3 ತಿಂಗಳ ಹೆಣ್ಣು ಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಂದ ತಾಯಿ!

ಆಗಸ್ಟ್‌ನಲ್ಲಿ ಮುಂಬೈನ ಮಹಿಳೆ ಎರಡನೇ ಬಾರಿಗೆ ಹೆಣ್ಣುಮಗುವಿಗೆ ಜನ್ಮ ನೀಡಿದ್ದು, ಇದರಿಂದ ಮನೆಯವರೆಲ್ಲರೂ ಆಕೆಯ ಮೇಲೆ ಕೋಪಗೊಂಡಿದ್ದರು. ಹೆಣ್ಣು ಮಗುವನ್ನು ಹೆತ್ತಿದ್ದಕ್ಕೆ ಆಕೆಯನ್ನು ಮನೆಯಿಂದ ಹೊರಗೆ ಹಾಕಿದ್ದರು.

ಅತ್ತೆ-ಮಾವನ ಕಾಟ ತಾಳಲಾರದೆ 3 ತಿಂಗಳ ಹೆಣ್ಣು ಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಂದ ತಾಯಿ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 03, 2021 | 1:41 PM

Share

ಮುಂಬೈ: ಹೆಣ್ಣು ಮಗುವನ್ನು ಹೆತ್ತಿದ್ದೇಕೆ? ಎಂದು ದಿನವೂ ಮನೆಯಲ್ಲಿ ಗಂಡ, ಅತ್ತೆ-ಮಾವ ಕಿರುಕುಳ ನೀಡುತ್ತಿದ್ದುದರಿಂದ ಬೇಸತ್ತ ಮಹಿಳೆಯೊಬ್ಬರು ತಮ್ಮ 3 ತಿಂಗಳ ಹೆಣ್ಣು ಮಗುವನ್ನು ನೀರಿನ ಟ್ಯಾಂಕ್​ನಲ್ಲಿ ಮುಳುಗಿಸಿ ಕೊಂದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಇಲ್ಲಿನ ಮುಂಬೈನ ಕಲಾಚೌಕಿ ಪ್ರದೇಶದಲ್ಲಿ ವಾಸವಾಗಿದ್ದ ಮಹಿಳೆಯೊಬ್ಬರು ಮನೆಯವರ ಕಿರುಕುಳ ತಾಳಲಾರದೆ ತಾನು ಹೆತ್ತ ಹೆಣ್ಣು ಮಗುವನ್ನು ತಾನೇ ಕೊಲೆ ಮಾಡಿದ್ದಾರೆ.

ಆರಂಭದಲ್ಲಿ ತನ್ನ 3 ತಿಂಗಳ ಮಗುವನ್ನು ಯಾರೋ ಮಹಿಳೆ ಅಪಹರಿಸಿದ್ದಾರೆ ಎಂದು 36 ವರ್ಷದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು. ನನಗೆ ನಿದ್ರೆ ಬರುವ ಔಷಧಿ ನೀಡಿ ಮಹಿಳೆಯೊಬ್ಬರು ನನ್ನ ಮಗುವನ್ನು ಅಪಹರಿಸಿದ್ದಾರೆ ಎಂದು ಆಕೆ ಆರೋಪಿಸಿದ್ದರು. ಆ ತಾಯಿಯ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ಶಂಕಿತ ರೇಖಾಚಿತ್ರವನ್ನು ತಾಯಿಗೆ ನೀಡಿದ್ದರು.

ಅಪಹರಣ ನಡೆದಿದೆ ಎನ್ನಲಾದ ಸ್ಥಳದಲ್ಲೇ ತಂಡಗಳನ್ನು ರಚಿಸಿ ತಪಾಸಣೆಗಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಆದರೆ, ಹೆಚ್ಚಿನ ವಿಚಾರಣೆ ವೇಳೆ ಆ ಮಹಿಳೆ ತನ್ನ ಮಗುವನ್ನು ತಾನೇ ಕೊಂದಿರುವುದಾಗಿ ಒಪ್ಪಿಕೊಂಡಿದ್ದು, ಮಗುವನ್ನು ಮನೆಯ ಮೇಲಿನ ನೀರಿನ ಟ್ಯಾಂಕ್​ನಲ್ಲಿ ಮುಳುಗಿಸಿರುವುದಾಗಿ ಹೇಳಿದ್ದಾರೆ.

ಆ ಮಹಿಳೆ 2011ರಲ್ಲಿ ಮದುವೆಯಾಗಿದ್ದು, 2013ರಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ಕಳೆದ ವರ್ಷ ಆಕೆ ಎರಡನೇ ಬಾರಿಗೆ ಗರ್ಭಿಣಿಯಾದಾಗ ಆಕೆಯ ಅತ್ತೆ ಮಾವಂದಿರು ಮಗುವಿನ ಲಿಂಗವನ್ನು ಪತ್ತೆ ಹಚ್ಚಲು ಮಾಟ-ಮಂತ್ರ ಮಾಡಿದ್ದರು. ಆಕೆಯ ಹೊಟ್ಟೆಯಲ್ಲಿ ಮತ್ತೆ ಹೆಣ್ಣು ಮಗುವೇ ಇದೆ ಎಂಬುದು ಗೊತ್ತಾಗುತ್ತಿದ್ದಂತೆ ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸಿದ್ದರು. ಈ ಹಿಂದೆಯೂ ಆಕೆಗೆ ಇದೇ ಕಾರಣಕ್ಕೆ ಗರ್ಭಪಾತ ಮಾಡಿಸಲಾಗಿತ್ತು.

ಆದರೆ, ಈ ಬಾರಿ ಆಕೆ ಗರ್ಭಪಾತ ಮಾಡಿಸಿಕೊಳ್ಳದೆ ಮಗುವಿಗೆ ಜನ್ಮ ನೀಡಿದ್ದರು. ಆಗಸ್ಟ್‌ನಲ್ಲಿ ಆಕೆ ಮತ್ತೆ ಹೆಣ್ಣುಮಗುವಿಗೆ ಜನ್ಮ ನೀಡಿದ್ದು, ಇದರಿಂದ ಮನೆಯವರೆಲ್ಲರೂ ಆಕೆಯ ಮೇಲೆ ಕೋಪಗೊಂಡಿದ್ದರು. ಹೆಣ್ಣು ಮಗುವನ್ನು ಹೆತ್ತಿದ್ದಕ್ಕೆ ಆಕೆಯನ್ನು ಮನೆಯಿಂದ ಹೊರಗೆ ಹಾಕಿದ್ದರು. ತನ್ನ ತಂದೆ-ತಾಯಿಯ ಜೊತೆ ವಾಸ ಮಾಡುತ್ತಿದ್ದ ಆಕೆ ತನ್ನ ಮನೆಯವರ ಕಿರುಕುಳದಿಂದ ಬೇಸತ್ತಿದ್ದರು. ಗಂಡನ ಮನೆಯವರ ಕಾಟ ತಾಳಲಾರದೆ ಆಕೆ 3 ತಿಂಗಳ ಹೆಣ್ಣು ಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾರೆ.

ಇದನ್ನೂ ಓದಿ: ಗುಬ್ಬಿ: ಪ್ರೀತಿಸಿ ಮದುವೆಯಾದಗಿದ್ದ ಪತ್ನಿಯನ್ನೆ ಕೊಲೆ ಮಾಡಿದವನಿಗೆ ಜೀವಾವಧಿ ಶಿಕ್ಷೆ

Murder: ರಾಡ್‌ನಿಂದ ಪತಿ ಹತ್ಯೆಗೈದು ಪೊಲೀಸರ ಮುಂದೆ ಶರಣಾದ 2ನೇ ಪತ್ನಿ, ಕೊಲೆಯ ಹಿಂದೆ ಆಸ್ತಿ ಕಬಳಿಕೆ ಆರೋಪ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ