AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಹಣಕ್ಕಾಗಿ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ತಂದೆ-ತಾಯಿ; ಹೆತ್ತವರೇ ವಿಲನ್ ಆದ ಕತೆಯಿದು

ಹಿಮಾಚಲ ಪ್ರದೇಶದಲ್ಲಿ ಈ ಪ್ರಕರಣ ನಡೆದಿದ್ದು, ಹಣಕ್ಕಾಗಿ ಅಪ್ಪ, ಅಮ್ಮ, ಅಣ್ಣ ಸೇರಿ ಯುವತಿಯನ್ನು ವೇಶ್ಯಾವಾಟಿಕೆಗೆ ದೂಡಿದ್ದಾರೆ.

Crime News: ಹಣಕ್ಕಾಗಿ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ತಂದೆ-ತಾಯಿ; ಹೆತ್ತವರೇ ವಿಲನ್ ಆದ ಕತೆಯಿದು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 19, 2021 | 7:17 PM

Share

ನವದೆಹಲಿ: ಕೆಟ್ಟ ಮಕ್ಕಳಿರಬಹುದು ಆದರೆ ಕೆಟ್ಟ ತಂದೆ-ತಾಯಿ ಇರಲಾರರು ಎಂಬ ಮಾತೊಂದಿದೆ. ಈ ಮಾತು ಸುಳ್ಳು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ದುಡ್ಡಿಗಾಗಿ ಹೆತ್ತವರೇ ತಮ್ಮ ಮಗಳನ್ನು ವೇಶ್ಯಾವಾಟಿಕೆಗೆ ತಳ್ಳಿದ ನೀಚ ಕೃತ್ಯ ಬೆಳಕಿಗೆ ಬಂದಿದೆ. ಹಿಮಾಚಲ ಪ್ರದೇಶದಲ್ಲಿ ಈ ಪ್ರಕರಣ ನಡೆದಿದ್ದು, ಹಣಕ್ಕಾಗಿ ಅಪ್ಪ, ಅಮ್ಮ, ಅಣ್ಣ ಸೇರಿ ಯುವತಿಯನ್ನು ವೇಶ್ಯಾವಾಟಿಕೆಗೆ ದೂಡಿದ್ದಾರೆ. ತನಗೆ ಗೌರವದಿಂದ ಬದುಕಲು ಬಿಡಿ ಎಂದು ಬೇಡಿಕೊಂಡರೂ ಕೇಳದ ಅವರು ಆಕೆಗೆ ಹೊಡೆದು, ಈ ದಂಧೆಯಲ್ಲಿ ತೊಡಗುವಂತೆ ಮಾಡಿದ್ದಾರೆ.

ಕೆಲವು ಸಮಯವಾದ ಬಳಿಕ ಆ ಯುವತಿಗೆ ಅನಾರೋಗ್ಯ ಉಂಟಾಗಿದ್ದು, ಆಕೆಯಿಂದ ಇನ್ನು ತಮಗೆ ಉಪಯೋಗ ಇಲ್ಲವೆಂದು ತಿಳಿದ ಪೋಷಕರು ಆಕೆಗೆ ಚಿಕಿತ್ಸೆ ಕೂಡ ಕೊಡಿಸದೆ ದೂರದ ಸಂಬಂಧಿಯ ಮನೆಯಲ್ಲಿ ಬಿಟ್ಟು ಹೋಗಿದ್ದಾರೆ. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಆಕೆಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

20 ವರ್ಷದ ಯುವತಿ ತನ್ನ ಹೆತ್ತವರಿಂದ ತನಗೆ ಆಗಿರುವ ಅನ್ಯಾಯದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾಳೆ. ಆಸ್ಪತ್ರೆಯಲ್ಲೇ ಆಕೆಯ ಹೇಳಿಕೆಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ಆಕೆಯ ಅಪ್ಪ-ಅಮ್ಮನ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದಾರೆ. ನನ್ನ ಅಪ್ಪ, ಅಮ್ಮ, ಅಣ್ಣ ನನ್ನನ್ನು ಲೈಂಗಿಕ ಕಾರ್ಯಕರ್ತೆಯಾಗುವಂತೆ ಒತ್ತಾಯಿಸಿದರು. ನನ್ನ ಇಬ್ಬರು ಅಕ್ಕಂದಿರು ಕೂಡ ಇದಕ್ಕೆ ಬೆಂಬಲ ನೀಡಿದ್ದರು. ನಾನು ಅತ್ತು, ಜಗಳವಾಡಿದರೂ ಕೇಳದೆ ವೇಶ್ಯಾವಾಟಿಕೆಗೆ ತಳ್ಳಿದರು. ಅವರಿಂದ ನನ್ನ ಜೀವನವೇ ಹಾಳಾಯಿತು ಎಂದು ಆಕೆ ದೂರು ನೀಡಿದ್ದಾಳೆ.

ಇದನ್ನೂ ಓದಿ: Crime News: ಸುಪ್ರೀಂ ಕೋರ್ಟ್ ಎದುರೇ ಬೆಂಕಿ ಹಚ್ಚಿಕೊಂಡ ದಂಪತಿ; ಪ್ರಾಣಾಪಾಯದಿಂದ ಪಾರು

Crime News: ಪ್ರೀತಿಗಾಗಿ ಗೆಳೆಯನ ತಲೆಯನ್ನೇ ಕತ್ತರಿಸಿದ 17 ವರ್ಷದ ಯುವಕ; ತ್ರಿಕೋನ ಪ್ರೇಮಕತೆಯ ದುರಂತ ಅಂತ್ಯ

(Crime News: Himachal Girl Forced Into Prostitution By Parents and Elder Brother Shocking Story )

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ