AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಕೇವಲ 500 ರೂ.ಗೆ ಹೆಂಡತಿಯನ್ನೇ ಮಾರಿದ ಪತಿರಾಯ; ಆಮೇಲಾಗಿದ್ದು ದುರಂತ

Rape Case: ಊಟ ಕೊಡಿಸುತ್ತೇನೆಂದು ಹೇಳಿ ಹೆಂಡತಿಯನ್ನು ಹೋಟೆಲ್‌ಗೆ ಕರೆದುಕೊಂಡು ಹೋಗಿದ್ದ ಗಂಡ ಅಲ್ಲಿ ಸೋನು ಶರ್ಮ ಎಂಬಾತನಿಗೆ 500 ರೂ.ಗೆ ತನ್ನ ಹೆಂಡತಿಯನ್ನು ಮಾರಾಟ ಮಾಡಿದ್ದಾನೆ.

Crime News: ಕೇವಲ 500 ರೂ.ಗೆ ಹೆಂಡತಿಯನ್ನೇ ಮಾರಿದ ಪತಿರಾಯ; ಆಮೇಲಾಗಿದ್ದು ದುರಂತ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 04, 2021 | 3:04 PM

Share

ಅಹಮದಾಬಾದ್: ಹಣದಾಸೆಗೆ ಏನು ಬೇಕಾದರೂ ಮಾಡುವವರಿದ್ದಾರೆ. ಆದರೆ, ಅಗ್ನಿಸಾಕ್ಷಿಯಾಗಿ ಮದುವೆಯಾದ ಹೆಂಡಿತಿಯನ್ನೇ ಕೇವಲ 500 ರೂ. ಆಸೆಗೆ ಮಾರಾಟ ಮಾಡಿರುವ ಹೀನ ಕೃತ್ಯವೊಂದು ಗುಜರಾತ್​ನಲ್ಲಿ ನಡೆದಿದೆ. 500 ರೂ. ನೀಡಿ ಆ ಮಹಿಳೆಯನ್ನು ಖರೀದಿಸಿದ ವ್ಯಕ್ತಿ ಆಕೆಯನ್ನು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾನೆ. ನಂತರ ಆಕೆಯನ್ನು ಅಲ್ಲೇ ಬಿಟ್ಟು ಹೋಗಿದ್ದಾನೆ.

ಊಟ ಕೊಡಿಸುತ್ತೇನೆಂದು ಹೇಳಿ ಹೆಂಡತಿಯನ್ನು ಹೋಟೆಲ್‌ಗೆ ಕರೆದುಕೊಂಡು ಹೋಗಿದ್ದ ಗಂಡ ಅಲ್ಲಿ ಸೋನು ಶರ್ಮ ಎಂಬಾತನಿಗೆ 500 ರೂ.ಗೆ ತನ್ನ ಹೆಂಡತಿಯನ್ನು ಮಾರಾಟ ಮಾಡಿದ್ದಾನೆ. ಆತನ ಹೆಂಡತಿಯನ್ನು ಖರೀದಿಸಿದ ವ್ಯಕ್ತಿ ನಿರ್ಜನ ಪ್ರದೇಶಕ್ಕೆ ಆಕೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾನೆ. ಅತ್ಯಾಚಾರ ನಡೆದ ಬಳಿಕ ಆ 21 ವರ್ಷದ ಮಹಿಳೆ ಪೊಲೀಸ್ ಠಾಣೆಗೆ ಬಂದು ತನ್ನ ಗಂಡನ ವಿರುದ್ಧ ದೂರು ನೀಡಿದ್ದಾಳೆ. ಆ ದೂರಿನ ಆಧಾರದಲ್ಲಿ ಸೋನು ಶರ್ಮ ಹಾಗೂ ಆ ಮಹಿಳೆಯ ಗಂಡನನ್ನು ಬಂಧಿಸಲಾಗಿದೆ.

ಹೋಟೆಲ್​ಗೆ ಬಂದಿದ್ದ ವ್ಯಕ್ತಿಯ ಜೊತೆಗಿದ್ದ ಆತನ ಹೆಂಡತಿಯನ್ನು ನೋಡಿದ ಸೋನು ಶರ್ಮ ಆಕೆಯನ್ನು ತನಗೆ ಕೊಡಬೇಕೆಂದು ಕೇಳಿದ್ದ. ಅದಕ್ಕೆ ಒಪ್ಪಿದ ಆತ ಸೋನು ಶರ್ಮನಿಂದ 500 ರೂ. ಪಡೆದು ತನ್ನ ಹೆಂಡತಿಯನ್ನು ಆತನಿಗೆ ಮಾರಾಟ ಮಾಡಿದ್ದ. ಈ ಘಟನೆ ನಡೆದು 24 ಗಂಟೆಯೊಳಗೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಇದನ್ನೂ ಓದಿ: Crime News: ಎಕ್ಸಾಂ ಬರೆದು ಬಂದ ಯುವತಿಯ ಕುತ್ತಿಗೆ ಸೀಳಿದ ಭಗ್ನ ಪ್ರೇಮಿ; ಕಾಲೇಜಿನಲ್ಲೇ ಕಗ್ಗೊಲೆ

Murder: ಲೇಡಿ ಪೊಲೀಸ್​ಗಾಗಿ ಹೆಂಡತಿ, ಮಕ್ಕಳನ್ನೇ ಕೊಂದ ಗಂಡ; ಸತ್ತು ಹೋಗಿದ್ದ ಕೊಲೆಗಾರ ಎದ್ದು ಬಂದ ಕತೆಯಿದು!

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ