Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಕೇವಲ 500 ರೂ.ಗೆ ಹೆಂಡತಿಯನ್ನೇ ಮಾರಿದ ಪತಿರಾಯ; ಆಮೇಲಾಗಿದ್ದು ದುರಂತ

Rape Case: ಊಟ ಕೊಡಿಸುತ್ತೇನೆಂದು ಹೇಳಿ ಹೆಂಡತಿಯನ್ನು ಹೋಟೆಲ್‌ಗೆ ಕರೆದುಕೊಂಡು ಹೋಗಿದ್ದ ಗಂಡ ಅಲ್ಲಿ ಸೋನು ಶರ್ಮ ಎಂಬಾತನಿಗೆ 500 ರೂ.ಗೆ ತನ್ನ ಹೆಂಡತಿಯನ್ನು ಮಾರಾಟ ಮಾಡಿದ್ದಾನೆ.

Crime News: ಕೇವಲ 500 ರೂ.ಗೆ ಹೆಂಡತಿಯನ್ನೇ ಮಾರಿದ ಪತಿರಾಯ; ಆಮೇಲಾಗಿದ್ದು ದುರಂತ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 04, 2021 | 3:04 PM

ಅಹಮದಾಬಾದ್: ಹಣದಾಸೆಗೆ ಏನು ಬೇಕಾದರೂ ಮಾಡುವವರಿದ್ದಾರೆ. ಆದರೆ, ಅಗ್ನಿಸಾಕ್ಷಿಯಾಗಿ ಮದುವೆಯಾದ ಹೆಂಡಿತಿಯನ್ನೇ ಕೇವಲ 500 ರೂ. ಆಸೆಗೆ ಮಾರಾಟ ಮಾಡಿರುವ ಹೀನ ಕೃತ್ಯವೊಂದು ಗುಜರಾತ್​ನಲ್ಲಿ ನಡೆದಿದೆ. 500 ರೂ. ನೀಡಿ ಆ ಮಹಿಳೆಯನ್ನು ಖರೀದಿಸಿದ ವ್ಯಕ್ತಿ ಆಕೆಯನ್ನು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾನೆ. ನಂತರ ಆಕೆಯನ್ನು ಅಲ್ಲೇ ಬಿಟ್ಟು ಹೋಗಿದ್ದಾನೆ.

ಊಟ ಕೊಡಿಸುತ್ತೇನೆಂದು ಹೇಳಿ ಹೆಂಡತಿಯನ್ನು ಹೋಟೆಲ್‌ಗೆ ಕರೆದುಕೊಂಡು ಹೋಗಿದ್ದ ಗಂಡ ಅಲ್ಲಿ ಸೋನು ಶರ್ಮ ಎಂಬಾತನಿಗೆ 500 ರೂ.ಗೆ ತನ್ನ ಹೆಂಡತಿಯನ್ನು ಮಾರಾಟ ಮಾಡಿದ್ದಾನೆ. ಆತನ ಹೆಂಡತಿಯನ್ನು ಖರೀದಿಸಿದ ವ್ಯಕ್ತಿ ನಿರ್ಜನ ಪ್ರದೇಶಕ್ಕೆ ಆಕೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾನೆ. ಅತ್ಯಾಚಾರ ನಡೆದ ಬಳಿಕ ಆ 21 ವರ್ಷದ ಮಹಿಳೆ ಪೊಲೀಸ್ ಠಾಣೆಗೆ ಬಂದು ತನ್ನ ಗಂಡನ ವಿರುದ್ಧ ದೂರು ನೀಡಿದ್ದಾಳೆ. ಆ ದೂರಿನ ಆಧಾರದಲ್ಲಿ ಸೋನು ಶರ್ಮ ಹಾಗೂ ಆ ಮಹಿಳೆಯ ಗಂಡನನ್ನು ಬಂಧಿಸಲಾಗಿದೆ.

ಹೋಟೆಲ್​ಗೆ ಬಂದಿದ್ದ ವ್ಯಕ್ತಿಯ ಜೊತೆಗಿದ್ದ ಆತನ ಹೆಂಡತಿಯನ್ನು ನೋಡಿದ ಸೋನು ಶರ್ಮ ಆಕೆಯನ್ನು ತನಗೆ ಕೊಡಬೇಕೆಂದು ಕೇಳಿದ್ದ. ಅದಕ್ಕೆ ಒಪ್ಪಿದ ಆತ ಸೋನು ಶರ್ಮನಿಂದ 500 ರೂ. ಪಡೆದು ತನ್ನ ಹೆಂಡತಿಯನ್ನು ಆತನಿಗೆ ಮಾರಾಟ ಮಾಡಿದ್ದ. ಈ ಘಟನೆ ನಡೆದು 24 ಗಂಟೆಯೊಳಗೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಇದನ್ನೂ ಓದಿ: Crime News: ಎಕ್ಸಾಂ ಬರೆದು ಬಂದ ಯುವತಿಯ ಕುತ್ತಿಗೆ ಸೀಳಿದ ಭಗ್ನ ಪ್ರೇಮಿ; ಕಾಲೇಜಿನಲ್ಲೇ ಕಗ್ಗೊಲೆ

Murder: ಲೇಡಿ ಪೊಲೀಸ್​ಗಾಗಿ ಹೆಂಡತಿ, ಮಕ್ಕಳನ್ನೇ ಕೊಂದ ಗಂಡ; ಸತ್ತು ಹೋಗಿದ್ದ ಕೊಲೆಗಾರ ಎದ್ದು ಬಂದ ಕತೆಯಿದು!

ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
‘ಅಪ್ಪು’ ಅದ್ದೂರಿ ಮರು ಬಿಡುಗಡೆ; ಫ್ಯಾನ್ಸ್ ಸಂಭ್ರಮ ಕಣ್ತುಂಬಿಕೊಂಡ ಯುವ
‘ಅಪ್ಪು’ ಅದ್ದೂರಿ ಮರು ಬಿಡುಗಡೆ; ಫ್ಯಾನ್ಸ್ ಸಂಭ್ರಮ ಕಣ್ತುಂಬಿಕೊಂಡ ಯುವ
ಮಗಳಿಗೆ ಹೊಟ್ಟೆನೋವಿನ ಸಮಸ್ಯೆ ಇತ್ತೆಂದ ತಂದೆ ಶಿವಕುಮಾರ್
ಮಗಳಿಗೆ ಹೊಟ್ಟೆನೋವಿನ ಸಮಸ್ಯೆ ಇತ್ತೆಂದ ತಂದೆ ಶಿವಕುಮಾರ್
ಅಮೆರಿಕದ ಏರ್​ಪೋರ್ಟ್​ನಲ್ಲಿ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ
ಅಮೆರಿಕದ ಏರ್​ಪೋರ್ಟ್​ನಲ್ಲಿ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ
‘ಅಪ್ಪು’ ಸಿನಿಮಾಗೆ ದರ್ಶನ್ ಅಭಿಮಾನಿ ಬೆಂಬಲ; ವಿಶೇಷ ಕಲಾಕೃತಿ ತಂದ ಫ್ಯಾನ್
‘ಅಪ್ಪು’ ಸಿನಿಮಾಗೆ ದರ್ಶನ್ ಅಭಿಮಾನಿ ಬೆಂಬಲ; ವಿಶೇಷ ಕಲಾಕೃತಿ ತಂದ ಫ್ಯಾನ್
ಪುನೀತ್ ಪೋಸ್ಟರ್​ಗೆ ಹಾಲಿನ ಅಭಿಷೇಕ; ‘ಅಪ್ಪು’ ಸಿನಿಮಾ ಭರ್ಜರಿ ಪ್ರದರ್ಶನ
ಪುನೀತ್ ಪೋಸ್ಟರ್​ಗೆ ಹಾಲಿನ ಅಭಿಷೇಕ; ‘ಅಪ್ಪು’ ಸಿನಿಮಾ ಭರ್ಜರಿ ಪ್ರದರ್ಶನ