AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಹೈದರಾಬಾದ್ ಶಾಲೆಯಲ್ಲಿ 4 ವರ್ಷದ ಬಾಲಕಿ ಮೇಲೆ ಪ್ರಿನ್ಸಿಪಾಲ್ ಚಾಲಕನಿಂದ ಅತ್ಯಾಚಾರ!

ಹೈದರಾಬಾದ್​ನ ಖಾಸಗಿ ಶಾಲೆಯೊಂದರ ಕೊಠಡಿಯಲ್ಲೇ ಈ ಘಟನೆ ನಡೆದಿದ್ದು, ಆ 4 ವರ್ಷದ ಬಾಲಕಿ ಯುಕೆಜಿ ವಿದ್ಯಾರ್ಥಿನಿಯಾಗಿದ್ದಳು.

Crime News: ಹೈದರಾಬಾದ್ ಶಾಲೆಯಲ್ಲಿ 4 ವರ್ಷದ ಬಾಲಕಿ ಮೇಲೆ ಪ್ರಿನ್ಸಿಪಾಲ್ ಚಾಲಕನಿಂದ ಅತ್ಯಾಚಾರ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 19, 2022 | 10:31 AM

Share

ಹೈದರಾಬಾದ್: ಭಾರತದಲ್ಲಿ ಚಿಕ್ಕ ಮಕ್ಕಳ ಮೇಲೆ ಅತ್ಯಾಚಾರ (Rape) ಪ್ರಕರಣಗಳು ಕಡಿಮೆಯಾಗಿಲ್ಲ. ಪಕ್ಕದ ಹೈದರಾಬಾದ್‌ನ (Hyderabad) ಬಂಜಾರ ಹಿಲ್ಸ್ ಪ್ರದೇಶದಲ್ಲಿ ಕೇವಲ 4 ವರ್ಷದ ಬಾಲಕಿಯ ಮೇಲೆ ಆಕೆಯ ಶಾಲೆಯ ಪ್ರಿನ್ಸಿಪಾಲ್ ಅವರ ಚಾಲಕ ಅತ್ಯಾಚಾರ ಎಸಗಿರುವ ವಿಷಯ ಬೆಳಕಿಗೆ ಬಂದಿದ್ದು, ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಹೈದರಾಬಾದ್​ನ ಖಾಸಗಿ ಶಾಲೆಯೊಂದರ ಕೊಠಡಿಯಲ್ಲೇ ಈ ಘಟನೆ ನಡೆದಿದ್ದು, ಆ 4 ವರ್ಷದ ಬಾಲಕಿ ಯುಕೆಜಿ ವಿದ್ಯಾರ್ಥಿನಿಯಾಗಿದ್ದಳು.

ಆ ಶಾಲೆಯ ಪ್ರಿನ್ಸಿಪಾಲ್ ಕಾರಿನ ಚಾಲಕನಾಗಿದ್ದ ರಜಿನಿಕುಮಾರ್ ಎಂಬಾತ ಕಳೆದ 2 ತಿಂಗಳಿನಿಂದ ಆ ಪುಟ್ಟ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಎನ್ನಲಾಗಿದೆ. ಆಕೆಯ ಪೋಷಕರು ತಮ್ಮ ಮಗಳ ವರ್ತನೆಯಲ್ಲಿ ಬದಲಾವಣೆಯಾಗಿದ್ದನ್ನು ಕಂಡು ಅನುಮಾನ ಪಟ್ಟಿದ್ದರು. ಅಲ್ಲದೆ, ಸದಾ ಆಟವಾಡಿಕೊಂಡು ಇರುತ್ತಿದ್ದ ಆ ಬಾಲಕಿ ಇತ್ತೀಚೆಗೆ ಬಹಳ ಖಿನ್ನತೆಗೆ ಒಳಗಾಗಿದ್ದಳು, ಆಗಾಗ ಸುಮ್ಮನೆ ಅಳುತ್ತಿದ್ದಳು.

ಈ ಬಗ್ಗೆ ಅವರು ತಮ್ಮ ಮಗಳನ್ನು ವಿಚಾರಿಸಿದಾಗ ಆಕೆ ಆ ಚಾಲಕನ ಬಗ್ಗೆ ಹೇಳಿದ್ದಾಳೆ. ಆ ಪ್ರಿನ್ಸಿಪಾಲ್ ಕಾರಿನ ಚಾಲಕ ಸದಾ ಕ್ಲಾಸ್ ರೂಮ್‌ಗೆ ಬರುತ್ತಲೇ ಇರುತ್ತಿದ್ದ ಮತ್ತು ಮಕ್ಕಳಿಗೆ ತೊಂದರೆ ನೀಡುತ್ತಿದ್ದ. ಅನೇಕ ಮಕ್ಕಳು ಅವನನ್ನು ಕಂಡರೆ ಹೆದರುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: Crime News: ಮಹಿಳೆ ಕುತ್ತಿಗೆಗೆ ಚಾಕು ಇಟ್ಟು ಅತ್ಯಾಚಾರಕ್ಕೆ ಯತ್ನಿಸಿದ್ದ ವಿಕೃತ ಕಾಮಿಯ ಬಂಧನ

ಹಿರಿಯ ಪೊಲೀಸ್ ಅಧಿಕಾರಿ ಜೋಯಲ್ ಡೇವಿಸ್ ಪ್ರಕಾರ, ಈ ಪ್ರಕರಣದಲ್ಲಿ ಕಾರು ಚಾಲಕನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಆರೋಪಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಮಾತನಾಡಿರುವ ಅತ್ಯಾಚಾರಕ್ಕೊಳಗಾದ ಬಾಲಕಿಯ ತಾಯಿ, ನನ್ನ ಮಗಳು ಖಿನ್ನತೆಗೆ ಒಳಗಾಗಿದ್ದಳು. ಅವಳು ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ. ಆಕೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಕುಸಿದುಹೋಗಿದ್ದಳು. ನನ್ನ ಮಗಳ ಮೇಲೆ ಅತ್ಯಾಚಾರ ನಡೆಸಿದವನನ್ನು ಸಾರ್ವಜನಿಕವಾಗಿ ಬೆತ್ತಲೆಯಾಗಿ ಹೊಡೆಯಬೇಕು. ಕೂಡಲೇ ಪ್ರಾಂಶುಪಾಲರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ನಾವು ಶಾಲೆಗೆ ಪಾವತಿಸಿದ ದೇಣಿಗೆಯನ್ನು ಹಿಂತಿರುಗಿಸಬೇಕು. ನಾವು ನಮ್ಮ ಮಗಳನ್ನು ಮತ್ತೆ ಆ ಶಾಲೆಗೆ ಕಳುಹಿಸುವುದಿಲ್ಲ. ಇದು ಪ್ರತಿಷ್ಠಿತ ಶಾಲೆಯಾಗಿರಬಹುದು, ಆದರೆ ಪ್ರಿನ್ಸಿಪಾಲ್ ಸರಿಯಿಲ್ಲ. ಅವರ ಸುತ್ತಲೂ ಇರುವವರ ನಡತೆ ಸರಿಯಿಲ್ಲ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?