Crime News: ಗಂಡ ಬ್ಲೌಸ್ ಹೊಲಿದಿದ್ದು ಸರಿಯಾಗಿಲ್ಲವೆಂದು ಹೆಂಡತಿ ಆತ್ಮಹತ್ಯೆ!

35 ವರ್ಷದ ವಿಜಯಲಕ್ಷ್ಮಿ ಎಂಬ ಮಹಿಳೆಗೆ ತನ್ನ ಗಂಡ ತನಗಾಗಿ ಹೊಲಿದು ತಂದ ಬ್ಲೌಸ್​ ಡಿಸೈನ್ ಇಷ್ಟವಾಗಲಿಲ್ಲ. ಇದರಿಂದ ಕೋಪಗೊಂಡ ಆಕೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾಳೆ.

Crime News: ಗಂಡ ಬ್ಲೌಸ್ ಹೊಲಿದಿದ್ದು ಸರಿಯಾಗಿಲ್ಲವೆಂದು ಹೆಂಡತಿ ಆತ್ಮಹತ್ಯೆ!
ಸಾಂದರ್ಭಿಕ ಚಿತ್ರ
Follow us
| Updated By: ಸುಷ್ಮಾ ಚಕ್ರೆ

Updated on:Dec 06, 2021 | 8:42 PM

ಹೈದರಾಬಾದ್: ಗಂಡ-ಹೆಂಡತಿ ನಡುವೆ ಜಗಳಗಳು ಸಾಮಾನ್ಯ. ಆದರೆ, ಕೆಲವು ಬಾರಿ ಸಣ್ಣಪುಟ್ಟ ಜಗಳಗಳೇ ಪ್ರಾಣಕ್ಕೆ ಹಾನಿ ಉಂಟುಮಾಡಿದ ಘಟನೆಗಳೂ ನಡೆದಿವೆ. ಹೈದರಾಬಾದ್‌ನಲ್ಲಿ ಟೈಲರ್ ಆಗಿರುವ ತನ್ನ ಗಂಡನೊಂದಿಗೆ ಬ್ಲೌಸ್​ ವಿಚಾರದಲ್ಲಿ ಜಗಳ ನಡೆದಿದ್ದು, ಬೇಸತ್ತ ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 35 ವರ್ಷದ ವಿಜಯಲಕ್ಷ್ಮಿ ಎಂಬ ಮಹಿಳೆಗೆ ತನ್ನ ಗಂಡ ತನಗಾಗಿ ಹೊಲಿದು ತಂದ ಬ್ಲೌಸ್​ ಡಿಸೈನ್ ಇಷ್ಟವಾಗಲಿಲ್ಲ. ಇದರಿಂದ ಕೋಪಗೊಂಡ ಆಕೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾಳೆ.

ಆ ಮಹಿಳೆ ತನ್ನ ಪತಿ ಶ್ರೀನಿವಾಸ್ ಜೊತೆ ಜಗಳವಾಡಿದ್ದಳು. ಇದರಿಂದ ಬೇಸತ್ತ ಶ್ರೀನಿವಾಸ್ ಮನೆಯಿಂದ ಹೊರಗೆ ಹೋಗಿದ್ದರು. ಗಂಡನ ಜೊತೆ ಜಗಳವಾಡಿದ ನಂತರ ವಿಜಯಲಕ್ಷ್ಮಿ ತನ್ನ ರೂಮಿಗೆ ಬೀಗ ಹಾಕಿ ಮಲಗಿದ್ದಳು. ನಂತರ, ಆಕೆಯ ಮಕ್ಕಳು ಶಾಲೆಯಿಂದ ಮನೆಗೆ ಹಿಂದಿರುಗಿದಾಗ, ಬೆಡ್ ರೂಮಿನ ಬಾಗಿಲಿಗೆ ಬೀಗ ಹಾಕಿರುವುದನ್ನು ಕಂಡು ಅದನ್ನು ತೆಗೆಯಲು ಪ್ರಯತ್ನಿಸಿದರು. ಆದರೆ, ಯಾವ ಪ್ರತಿಕ್ರಿಯೆಯೂ ಬಾರದ ಕಾರಣ ಆ ಮಕ್ಕಳು ಅಪ್ಪನಿಗೆ ಫೋನ್ ಮಾಡಿ ವಿಷಯ ತಿಳಿಸಿದರು. ಬಳಿಕ ಆ ಮಹಿಳೆಯ ಗಂಡ ಶ್ರೀನಿವಾಸ್ ಮನೆಗೆ ಹಿಂತಿರುಗಿ ರೂಮಿನ ಬಾಗಿಲು ಒಡೆದಾಗ ವಿಜಯಲಕ್ಷ್ಮೀ ನೆಲದ ಮೇಲೆ ಬಿದ್ದಿರುವುದು ಕಾಣಿಸಿತು.

ಹೈದರಾಬಾದ್​ನ ಅಂಬರ್‌ಪೇಟ್ ಪ್ರದೇಶದ ಗೋಲ್ನಾಕ ತಿರುಮಲ ನಗರದಲ್ಲಿ ದಂಪತಿಗಳು ಒಟ್ಟಿಗೆ ವಾಸಿಸುತ್ತಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು. ಗಂಡ ತನಗೆ ಚೆನ್ನಾಗಿರುವ ಡಿಸೈನ್​ನ ಬ್ಲೌಸ್​ ಹೊಲಿದು ಕೊಟ್ಟಿಲ್ಲ ಎಂಬ ಕಾರಣಕ್ಕೆ ಜಗಳವಾಡಿದ ಹೆಂಡತಿ ತನ್ನ ರೂಮಿನಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Viral Video: ಕುಕ್ಕರ್​ನಲ್ಲಿ ಕಾಫಿ ಮಾಡೋದನ್ನು ನೋಡಿದ್ದೀರಾ?; ಬೀದಿ ವ್ಯಾಪಾರಿಯ ವಿಡಿಯೋ ವೈರಲ್

ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆಗೆ ಯತ್ನಿಸಿದ ಪತ್ನಿ, ಪತ್ನಿ-ಪ್ರಿಯಕರ ಅರೆಸ್ಟ್

Published On - 8:40 pm, Mon, 6 December 21

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ