Crime News: ಜೈಲಿನಲ್ಲಿ 14 ವರ್ಷದ ಬಾಲಕಿ, ಆತನ ಗಂಡ ಸಾವು; ಕೋಪದಿಂದ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಜನ

ಬಿಹಾರದ ಅರಾರಿಯಾ ಜಿಲ್ಲೆಯಲ್ಲಿರುವ ತಾರಾಬರಿ ಗ್ರಾಮದ ಪೊಲೀಸ್ ಠಾಣೆಯಲ್ಲಿ 14 ವರ್ಷದ ಬಾಲಕಿ ಮತ್ತು ಆಕೆಯನ್ನು ಮದುವೆಯಾಗಿದ್ದ ವ್ಯಕ್ತಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಪೊಲೀಸ್ ಠಾಣೆಯನ್ನು ಧ್ವಂಸಗೊಳಿಸಿ, ಬೆಂಕಿ ಹಚ್ಚಿದ್ದಾರೆ.

Crime News: ಜೈಲಿನಲ್ಲಿ 14 ವರ್ಷದ ಬಾಲಕಿ, ಆತನ ಗಂಡ ಸಾವು; ಕೋಪದಿಂದ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಜನ
ಬಿಹಾರದ ಪೊಲೀಸ್ ಸ್ಟೇಷನ್​ಗೆ ಬೆಂಕಿ ಹಚ್ಚಿದ ಜನರು

Updated on: May 18, 2024 | 7:25 PM

ಪಾಟ್ನಾ: ಬಿಹಾರದ (Bihar) ಅರಾರಿಯಾ ಜಿಲ್ಲೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಒಬ್ಬ ವ್ಯಕ್ತಿ ಮತ್ತು ಆತನ ಅಪ್ರಾಪ್ತ ‘ಪತ್ನಿ’ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಆಂಗ್ರಿ ಗ್ರಾಮಸ್ಥರು ಪೊಲೀಸ್ ಅಧಿಕಾರಿಗಳ ಮೇಲೆ ಕಲ್ಲುಗಳನ್ನು ಎಸೆದಿದ್ದಾರೆ. ಬಳಿಕ ಪೊಲೀಸ್ ಠಾಣೆಯನ್ನು (Police Station) ಧ್ವಂಸಗೊಳಿಸಿ, ಬೆಂಕಿ ಹಚ್ಚಿದ್ದಾರೆ. ಇದರಿಂದ ಆ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದಾಗ ಉಂಟಾದ ತಳ್ಳಾಟದಲ್ಲಿ ಇಬ್ಬರು ಗ್ರಾಮಸ್ಥರು ಗಾಯಗೊಂಡಿದ್ದಾರೆ.

ಮಾಹಿತಿಯ ಪ್ರಕಾರ, ಈ ಊರಿನ ವ್ಯಕ್ತಿಯ ಹೆಂಡತಿ ತೀರಿಹೋಗಿದ್ದಳು. ಹೀಗಾಗಿ, 2 ದಿನಗಳ ಹಿಂದೆ ತನ್ನ ಹೆಂಡತಿಯ 14 ವರ್ಷದ ತಂಗಿಯನ್ನು ಮದುವೆಯಾಗಿದ್ದನು. ಗುರುವಾರ (ಮೇ 16) ಮಧ್ಯಾಹ್ನ ತಾನು ಮದುವೆಯಾಗಿದ್ದ 14 ವರ್ಷದ ಬಾಲಕಿಯನ್ನು ಆತ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ತಿಳಿದ ನಂತರ ಅವರನ್ನು ಠಾಣೆಗೆ ಕರೆತರಲಾಯಿತು.

ಇದನ್ನೂ ಓದಿ: Crime News: ಹೆಂಡತಿಗೆ ಹೊಡೆದ ಸೈನಿಕನನ್ನು ಶೂಟ್ ಮಾಡಿ ಕೊಂದ ಮಾವ

18 ವರ್ಷದೊಳಗೆ ಹೆಣ್ಣುಮಕ್ಕಳು ಮದುವೆಯಾಗುವಂತಿಲ್ಲ ಎಂಬ ಕಾನೂನು ಇರುವುದರಿಂದ ಅವರಿಬ್ಬರನ್ನೂ ವಶಕ್ಕೆ ಪಡೆಯಲಾಗಿತ್ತು. ಈ ಪ್ರಕರಣದಲ್ಲಿ ಪ್ರಾಥಮಿಕ ಎಫ್‌ಐಆರ್ ದಾಖಲಾಗಿದ್ದು, ಮದುವೆಯಾದ ಯುವಕ ಮತ್ತು ಆ ಬಾಲಕಿಯನ್ನು ವಿಚಾರಣೆಗಾಗಿ ಕರೆತರಲಾಗಿತ್ತು. ಇಬ್ಬರನ್ನು ಬಂಧಿಸಿದ ಕೂಡಲೇ ಕೋಪಗೊಂಡ ಸ್ಥಳೀಯರು ಪೊಲೀಸರ ವಿರುದ್ಧ ಪ್ರತಿಭಟನೆ ಮತ್ತು ಘೋಷಣೆಗಳನ್ನು ಪ್ರಾರಂಭಿಸಿದರು.

ಇದಾದ ನಂತರ ಪೊಲೀಸ್ ಕಸ್ಟಡಿಯಲ್ಲಿ ಇದ್ದಾಗಲೇ ಆ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದರು. ದಂಪತಿಗಳ ಸಾವಿನ ಬಗ್ಗೆ ತಿಳಿದ ಗ್ರಾಮಸ್ಥರು, ಪೊಲೀಸರೇ ಅವರಿಬ್ಬರನ್ನೂ ಥಳಿಸಿ ಕೊಲೆ ಮಾಡಿದ್ದಾರೆ ಎಂದು ಊರಿನವರು ಆರೋಪಿಸಿದ್ದಾರೆ. ಕೋಪಗೊಂಡ ಗ್ರಾಮಸ್ಥರು ಮೊದಲು ಪೊಲೀಸರಿಗೆ ಕಲ್ಲು ಎಸೆದರು. ನಂತರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದರು.

ಇದನ್ನೂ ಓದಿ: Crime News: ಪಾಟ್ನಾ ಶಾಲೆಯ ಚರಂಡಿಯಲ್ಲಿ 3 ವರ್ಷದ ಬಾಲಕ ಶವವಾಗಿ ಪತ್ತೆ; ಕಟ್ಟಡಕ್ಕೆ ಬೆಂಕಿ ಹಚ್ಚಿದ ಪೋಷಕರು

ಪೊಲೀಸ್ ಠಾಣೆಯಲ್ಲಿರುವ ಸಿಸಿಟಿವಿ ವೀಡಿಯೋದಲ್ಲಿ ಜೈಲಿನ ಸೆಲ್‌ನ ಒಳಗಿನ ದೃಶ್ಯ ಸೆರೆಯಾಗಿದ್ದು, ವ್ಯಕ್ತಿಯೊಬ್ಬ ಲಾಕಪ್ ಬಾಗಿಲಿಗೆ ಹತ್ತುವುದು ಮತ್ತು ಬಟ್ಟೆಯನ್ನು ಬಳಸಿ ನೇಣು ಹಾಕಿಕೊಳ್ಳುವುದನ್ನು ನೋಡಬಹುದು. ಗ್ರಾಮಸ್ಥರ ಆಕ್ರೋಶದ ಮಾಹಿತಿ ತಿಳಿದ ನಂತರ ವಿವಿಧ ಠಾಣೆಗಳ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.

ಈ ಗೊಂದಲದಲ್ಲಿ 5-6 ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದು, ಅವರಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಇದಕ್ಕೆ ಪ್ರತಿಯಾಗಿ ಪೊಲೀಸರು ಸುಮಾರು 6 ಸುತ್ತು ಗುಂಡು ಹಾರಿಸಿದರು. ಇದರಲ್ಲಿ ಇಬ್ಬರ ಕಾಲು ಮತ್ತು ಕೈಗೆ ಗುಂಡು ತಗುಲಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಅವ್ಯವಸ್ಥೆಗೆ ಕಾರಣರಾದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ ಪ್ರಕರಣದ ಬಗ್ಗೆಯೂ ತನಿಖೆ ನಡೆಯುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us