AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಸಾಫ್ಟ್​ವೇರ್​ ಇಂಜಿನಿಯರ್​ನನ್ನು ಕೊಂದು ಹೂತಿಟ್ಟ ಗೆಳೆಯರು!

ಗೆಳೆಯರ ನಡುವಿನ ಜಗಳ ಒಬ್ಬನ ಪ್ರಾಣವನ್ನೇ ಬಲಿ ತೆಗೆದುಕೊಂಡಿದೆ. ಕುಡಿದ ಅಮಲಿನಲ್ಲಿ ಜಗಳವಾಡಿಕೊಂಡ ಸಾಫ್ಟ್​ವೇರ್ ಇಂಜಿನಿಯರ್​​ನನ್ನು ಕೊಲೆ ಮಾಡಿದ ಸ್ನೇಹಿತರು ಬಳಿಕ ಆತನನ್ನು ಹೂತಿಟ್ಟು, ತಮ್ಮ ಕೃತ್ಯವನ್ನು ಮುಚ್ಚಿಡಲು ಪ್ರಯತ್ನಿಸಿದ್ದಾರೆ. ಅಷ್ಟಕ್ಕೂ ಅವರ ನಡುವೆ ಜಗಳವಾಗಿದ್ದು ಏಕೆ? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

Crime News: ಸಾಫ್ಟ್​ವೇರ್​ ಇಂಜಿನಿಯರ್​ನನ್ನು ಕೊಂದು ಹೂತಿಟ್ಟ ಗೆಳೆಯರು!
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Jun 27, 2024 | 5:43 PM

Share

ಚೆನ್ನೈ: ಕುಡಿದ ಮತ್ತಿನಲ್ಲಿ ಜಗಳವಾಡಿ ಗೆಳೆಯನನ್ನು ಕೊಂದ ಇಬ್ಬರು ಯುವಕರನ್ನು ಚೆನ್ನೈನಲ್ಲಿ ಬಂಧಿಸಲಾಗಿದೆ. ಐಟಿ ಉದ್ಯೋಗಿಯಾಗಿದ್ದ ಚೆನ್ನೈನ ಮರೈಮಲೈ ನಗರದ ನಿವಾಸಿ 26 ವರ್ಷದ ಟಿ. ವಿಘ್ನೇಶ್ ಎಂಬಾತನನ್ನು ಕೊಲೆ ಮಾಡಿದ್ದ ಬಿಹಾರ ಮೂಲದ ವಿಶ್ವನಾಥನ್ (23) ಮತ್ತು ದಿಲ್ಕುಶ್ ಕುಮಾರ್ (22) ಎಂಬುವರನ್ನು ಬಂಧಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಅಪ್ರಾಪ್ತನನ್ನು ಕೂಡ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಶೋಲಿಂಗನಲ್ಲೂರಿನ ಐಟಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ವಿಘ್ನೇಶ್ ಕಳೆದ ಒಂದು ವಾರಕ್ಕೂ ಹೆಚ್ಚು ಕಾಲದಿಂದ ನಾಪತ್ತೆಯಾಗಿದ್ದರು. ಆತನ ಕುಟುಂಬದವರು ನೀಡಿದ ದೂರಿನ ಮೇರೆಗೆ ಮರೈಮಲೈ ನಗರ ಪೊಲೀಸರು ನಡೆಸಿದ ತನಿಖೆಯಲ್ಲಿ ಆತನ ಸ್ನೇಹಿತ ವಿಶ್ವನಾಥನನ್ನು ಬಂಧಿಸಲಾಗಿದೆ. ಆತನ ವಿಚಾರಣೆ ವೇಳೆ ವಿಘ್ನೇಶ್‌ನ ಮೊಬೈಲ್‌ಗೆ ಕೊನೆಯ ಕರೆ ವಿಶ್ವನಾಥನ್‌ನಿಂದ ಎಂದು ತಿಳಿದುಬಂದಿದೆ. ಅವರು ಆರಂಭದಲ್ಲಿ ತಾವು ಕೊಲೆ ಮಾಡಿಲ್ಲ ಎಂದು ನಿರಾಕರಿಸಿದರು. ಆದರೆ, ನಂತರ ಅದನ್ನು ಒಪ್ಪಿಕೊಂಡರು.

ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರ ನಡೆಸಿ 13 ವರ್ಷದ ಬಾಲಕಿಯ ಕೊಲೆ; ಹರಿದ್ವಾರ ಹೆದ್ದಾರಿಯಲ್ಲಿ ಶವ ಪತ್ತೆ

ಪೊಲೀಸರ ಪ್ರಕಾರ ವಿಘ್ನೇಶ್, ವಿಶ್ವನಾಥನ್ ಮತ್ತು ದಿಲ್ಕುಶ್ ಕುಮಾರ್ ಇತ್ತೀಚೆಗೆ ಒಟ್ಟಿಗೆ ಮದ್ಯ ಸೇವಿಸಿದ್ದರು. ಆಗ ವಿಘ್ನೇಶ್ ಮತ್ತು ದಿಲ್ಕುಶ್​ ಕುಮಾರ್ ನಡುವೆ ವಾಗ್ವಾದ ನಡೆದಿತ್ತು. ಇದೇ ವೇಳೆ ವಿಘ್ನೇಶ್ ದಿಲ್ಕುಶ್ ಕುಮಾರ್​ಗೆ ಥಳಿಸಿದ್ದಾನೆ. ಅವನ ಮೇಲೆ ಸೇಡು ತೀರಿಸಿಕೊಳ್ಳಲು ವಿಶ್ವನಾಥನ್ ಮತ್ತು ದಿಲ್ಕುಶ್ ಕುಮಾರ್ ವಿಘ್ನೇಶ್‌ನನ್ನು ಕೊಲ್ಲಲು ಪ್ಲಾನ್ ಮಾಡಿದ್ದರು. ಆಗ ಕುಡಿತಕ್ಕೆ ಕರೆದೊಯ್ದು ಚಾಕುವಿನಿಂದ ಇರಿದು ಹತ್ಯೆಗೈದಿದ್ದಾರೆ.

ನಂತರ ಮೃತದೇಹವನ್ನು ಮರೈಮಲೈ ನಗರದ ಕೆರೆಯ ದಡದಲ್ಲಿ ಹೂತು ಹಾಕಿದ್ದಾರೆ. ನಂತರ ದಿಲ್ಕುಶ್ ಕುಮಾರ್ ಅವರನ್ನು ಕೂಡ ಬಂಧಿಸಲಾಗಿದ್ದು, ಅವರೊಂದಿಗಿದ್ದ ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್