AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕಿಯನ್ನು ಕೊಂದು ಕೈ-ಕಾಲು ಕಟ್ಟಿ ಬ್ಯಾಗ್​ನಲ್ಲಿ ತುಂಬಿದ ಹಂತಕರು

ಬ್ಯಾಗ್​ನೊಳಗಿದ್ದ ಬಾಲಕಿಯ ಮೃತದೇಹದ ಕೈ ಮತ್ತು ಕಾಲುಗಳನ್ನು ಕಟ್ಟಲಾಗಿದ್ದು, ಆಕೆಯನ್ನು ಕೊಲೆ ಮಾಡಿರುವುದು ಸ್ಪಷ್ಟವಾಗಿದೆ. ಬಾಲಕಿಯನ್ನು ಕೊಲೆ ಮಾಡಿದ್ದಷ್ಟೇ ಅಲ್ಲದೆ ಸಾಕ್ಷ್ಯಗಳನ್ನು ನಾಶಪಡಿಸಲು ಪ್ರಯತ್ನಿಸಿದ್ದಾರೆ. ಆ ಬಾಲಕಿ ಯಾರೆಂಬ ಬಗ್ಗೆ ಇನ್ನೂ ಸುಳಿವು ಸಿಕ್ಕಿಲ್ಲ.

ಬಾಲಕಿಯನ್ನು ಕೊಂದು ಕೈ-ಕಾಲು ಕಟ್ಟಿ ಬ್ಯಾಗ್​ನಲ್ಲಿ ತುಂಬಿದ ಹಂತಕರು
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Sep 14, 2023 | 6:18 PM

Share

ಪುರಿ: ಒಡಿಶಾದ ಕನಾಸ್ ಪ್ರದೇಶದಲ್ಲಿ ಬಾಲಕಿಯೊಬ್ಬಳನ್ನು ಕೊಂದು, ಆಕೆಯ ಮೃತದೇಹವನ್ನು ಬ್ಯಾಗ್‌ನಲ್ಲಿ ತುಂಬಿ ಎಸೆದಿರುವ ಆಘಾತಕಾರಿ ಘಟನೆ ನಡೆದಿದೆ. ಬ್ಯಾಗ್​ನೊಳಗಿದ್ದ ಬಾಲಕಿಯ ಮೃತದೇಹದ ಕೈ ಮತ್ತು ಕಾಲುಗಳನ್ನು ಕಟ್ಟಲಾಗಿದ್ದು, ಆಕೆಯನ್ನು ಕೊಲೆ ಮಾಡಿರುವುದು ಸ್ಪಷ್ಟವಾಗಿದೆ. ಆದರೆ, ಆಕೆ ಯಾರು, ಯಾರು ಕೊಲೆ ಮಾಡಿದ್ದಾರೆಂಬ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಪುರಿ ಪೊಲೀಸರು ತಿಳಿಸಿದ್ದಾರೆ.

ಬಾಲಕಿಯನ್ನು ಕೊಲೆ ಮಾಡಿದ್ದಷ್ಟೇ ಅಲ್ಲದೆ ಸಾಕ್ಷ್ಯಗಳನ್ನು ನಾಶಪಡಿಸಲು ಪ್ರಯತ್ನಿಸಿದ್ದಾರೆ. ಗಡಿಸಗಡ ಪೊಲೀಸ್ ವ್ಯಾಪ್ತಿಯ ದಯಾ ನದಿಯ ದಡದಲ್ಲಿ ಆ ಬಾಲಕಿಯ ಶವ ಪತ್ತೆಯಾಗಿದೆ. ಆ ಬಾಲಕಿ ಯಾರೆಂಬ ಬಗ್ಗೆ ಇನ್ನೂ ಸುಳಿವು ಸಿಕ್ಕಿಲ್ಲ. ಮೃತಳನ್ನು ಗುರುತಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ. ಇದಕ್ಕಾಗಿ ವಿಶೇಷ ಪೊಲೀಸ್ ತಂಡಗಳು ಪುರಿ ಮತ್ತು ಹತ್ತಿರದ ಜಿಲ್ಲೆಗಳ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕಾಣೆಯಾದ ಪ್ರಕರಣಗಳನ್ನು ಪರಿಶೀಲಿಸುತ್ತಿವೆ ಎಂದು ಪುರಿ ಎಸ್​ಪಿ ಕನ್ವರ್ ವಿಶಾಲ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ತನ್ನ ಮಗಳನ್ನು ಪ್ರೀತಿಸುತ್ತಿದ್ದ ಬಾಲಕನನ್ನು ಹೊಡೆದು ಕೊಲೆ ಮಾಡಿದ ತಂದೆ ಅರೆಸ್ಟ್

ಈ ಪ್ರಕರಣದ ತನಿಖೆಗೆ ಈಗಾಗಲೇ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ. ಹೆಚ್ಚಿನ ತನಿಖೆಯನ್ನು ಪ್ರಾರಂಭಿಸಲಾಗಿದೆ. ಗುರುತು ಪತ್ತೆಯಾದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಫೋರೆನ್ಸಿಕ್ ತಜ್ಞರ ಸಮ್ಮುಖದಲ್ಲಿ ತಜ್ಞರ ತಂಡವು ಮರಣೋತ್ತರ ಪರೀಕ್ಷೆಯನ್ನು ನಡೆಸಲಿದೆ. ಈ ಸಂಪೂರ್ಣ ಪ್ರಕ್ರಿಯೆಯನ್ನು ವೀಡಿಯೊಗ್ರಾಫ್ ಮಾಡಲಾಗುವುದು ಎಂದು ಸಿಂಗ್ ಹೇಳಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ