AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕಿಯನ್ನು ಕೊಂದು ಕೈ-ಕಾಲು ಕಟ್ಟಿ ಬ್ಯಾಗ್​ನಲ್ಲಿ ತುಂಬಿದ ಹಂತಕರು

ಬ್ಯಾಗ್​ನೊಳಗಿದ್ದ ಬಾಲಕಿಯ ಮೃತದೇಹದ ಕೈ ಮತ್ತು ಕಾಲುಗಳನ್ನು ಕಟ್ಟಲಾಗಿದ್ದು, ಆಕೆಯನ್ನು ಕೊಲೆ ಮಾಡಿರುವುದು ಸ್ಪಷ್ಟವಾಗಿದೆ. ಬಾಲಕಿಯನ್ನು ಕೊಲೆ ಮಾಡಿದ್ದಷ್ಟೇ ಅಲ್ಲದೆ ಸಾಕ್ಷ್ಯಗಳನ್ನು ನಾಶಪಡಿಸಲು ಪ್ರಯತ್ನಿಸಿದ್ದಾರೆ. ಆ ಬಾಲಕಿ ಯಾರೆಂಬ ಬಗ್ಗೆ ಇನ್ನೂ ಸುಳಿವು ಸಿಕ್ಕಿಲ್ಲ.

ಬಾಲಕಿಯನ್ನು ಕೊಂದು ಕೈ-ಕಾಲು ಕಟ್ಟಿ ಬ್ಯಾಗ್​ನಲ್ಲಿ ತುಂಬಿದ ಹಂತಕರು
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Sep 14, 2023 | 6:18 PM

Share

ಪುರಿ: ಒಡಿಶಾದ ಕನಾಸ್ ಪ್ರದೇಶದಲ್ಲಿ ಬಾಲಕಿಯೊಬ್ಬಳನ್ನು ಕೊಂದು, ಆಕೆಯ ಮೃತದೇಹವನ್ನು ಬ್ಯಾಗ್‌ನಲ್ಲಿ ತುಂಬಿ ಎಸೆದಿರುವ ಆಘಾತಕಾರಿ ಘಟನೆ ನಡೆದಿದೆ. ಬ್ಯಾಗ್​ನೊಳಗಿದ್ದ ಬಾಲಕಿಯ ಮೃತದೇಹದ ಕೈ ಮತ್ತು ಕಾಲುಗಳನ್ನು ಕಟ್ಟಲಾಗಿದ್ದು, ಆಕೆಯನ್ನು ಕೊಲೆ ಮಾಡಿರುವುದು ಸ್ಪಷ್ಟವಾಗಿದೆ. ಆದರೆ, ಆಕೆ ಯಾರು, ಯಾರು ಕೊಲೆ ಮಾಡಿದ್ದಾರೆಂಬ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಪುರಿ ಪೊಲೀಸರು ತಿಳಿಸಿದ್ದಾರೆ.

ಬಾಲಕಿಯನ್ನು ಕೊಲೆ ಮಾಡಿದ್ದಷ್ಟೇ ಅಲ್ಲದೆ ಸಾಕ್ಷ್ಯಗಳನ್ನು ನಾಶಪಡಿಸಲು ಪ್ರಯತ್ನಿಸಿದ್ದಾರೆ. ಗಡಿಸಗಡ ಪೊಲೀಸ್ ವ್ಯಾಪ್ತಿಯ ದಯಾ ನದಿಯ ದಡದಲ್ಲಿ ಆ ಬಾಲಕಿಯ ಶವ ಪತ್ತೆಯಾಗಿದೆ. ಆ ಬಾಲಕಿ ಯಾರೆಂಬ ಬಗ್ಗೆ ಇನ್ನೂ ಸುಳಿವು ಸಿಕ್ಕಿಲ್ಲ. ಮೃತಳನ್ನು ಗುರುತಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ. ಇದಕ್ಕಾಗಿ ವಿಶೇಷ ಪೊಲೀಸ್ ತಂಡಗಳು ಪುರಿ ಮತ್ತು ಹತ್ತಿರದ ಜಿಲ್ಲೆಗಳ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕಾಣೆಯಾದ ಪ್ರಕರಣಗಳನ್ನು ಪರಿಶೀಲಿಸುತ್ತಿವೆ ಎಂದು ಪುರಿ ಎಸ್​ಪಿ ಕನ್ವರ್ ವಿಶಾಲ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ತನ್ನ ಮಗಳನ್ನು ಪ್ರೀತಿಸುತ್ತಿದ್ದ ಬಾಲಕನನ್ನು ಹೊಡೆದು ಕೊಲೆ ಮಾಡಿದ ತಂದೆ ಅರೆಸ್ಟ್

ಈ ಪ್ರಕರಣದ ತನಿಖೆಗೆ ಈಗಾಗಲೇ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ. ಹೆಚ್ಚಿನ ತನಿಖೆಯನ್ನು ಪ್ರಾರಂಭಿಸಲಾಗಿದೆ. ಗುರುತು ಪತ್ತೆಯಾದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಫೋರೆನ್ಸಿಕ್ ತಜ್ಞರ ಸಮ್ಮುಖದಲ್ಲಿ ತಜ್ಞರ ತಂಡವು ಮರಣೋತ್ತರ ಪರೀಕ್ಷೆಯನ್ನು ನಡೆಸಲಿದೆ. ಈ ಸಂಪೂರ್ಣ ಪ್ರಕ್ರಿಯೆಯನ್ನು ವೀಡಿಯೊಗ್ರಾಫ್ ಮಾಡಲಾಗುವುದು ಎಂದು ಸಿಂಗ್ ಹೇಳಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ