AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಇನ್‌ಸ್ಟಾಗ್ರಾಮ್‌ನಲ್ಲಿ ತನ್ನ ಗೆಳತಿಯೊಂದಿಗೆ ಚಾಟ್ ಮಾಡಿದ್ದಕ್ಕೆ 16 ವರ್ಷದ ಹುಡುಗನನ್ನು ಕೊಂದ ಅಪ್ರಾಪ್ತ ಬಾಲಕ

ಗುರುಗ್ರಾಮದಲ್ಲಿ ಸುಮಾರು ಒಂದೂವರೆ ವರ್ಷಗಳ ಹಿಂದೆ ಇನ್‌ಸ್ಟಾಗ್ರಾಮ್‌ನಲ್ಲಿ ಹುಡುಗಿಯೊಂದಿಗೆ ಸ್ನೇಹ ಬೆಳೆಸಿದ್ದ ಯುವಕನ ಜೊತೆ ಕಳೆದ ಕೆಲ ದಿನಗಳಿಂದ ಆ ಬಾಲಕಿಯೂ ಮಾತನಾಡಲು ಆರಂಭಿಸಿದ್ದಳು. ನಂತರ ಆರೋಪಿಗೆ ತಾನು ಮಾತನಾಡಿದ್ದ ಹುಡುಗಿ ಕೂಡ ಸಂತ್ರಸ್ತೆಯ ಸ್ನೇಹಿತೆ ಎಂದು ತಿಳಿದು ಬಂದಿದೆ.

Crime News: ಇನ್‌ಸ್ಟಾಗ್ರಾಮ್‌ನಲ್ಲಿ ತನ್ನ ಗೆಳತಿಯೊಂದಿಗೆ ಚಾಟ್ ಮಾಡಿದ್ದಕ್ಕೆ 16 ವರ್ಷದ ಹುಡುಗನನ್ನು ಕೊಂದ ಅಪ್ರಾಪ್ತ ಬಾಲಕ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Jul 12, 2024 | 8:45 PM

Share

ಗುರುಗ್ರಾಮ: ತನ್ನ ಮಹಿಳಾ ಸ್ನೇಹಿತನೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಚಾಟ್ ಮಾಡಿದ್ದಕ್ಕಾಗಿ 16 ವರ್ಷದ ಇನ್‌ಸ್ಟಾಗ್ರಾಮ್ ಸ್ನೇಹಿತನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 15 ವರ್ಷದ ಹುಡುಗನನ್ನು ಗುರುವಾರ (ಜುಲೈ 11) ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುಗ್ರಾಮ್ ಪೊಲೀಸರ ಕ್ರೈಂ ವಿಭಾಗದ ತಂಡವು ರೇವಾರಿಯಿಂದ ಅಪ್ರಾಪ್ತನನ್ನು ಬಂಧಿಸಿದೆ.

ಸೆಕ್ಟರ್ 40 ಪ್ರದೇಶದಲ್ಲಿ ಬಾಲಕನೊಬ್ಬ ರಕ್ತದ ಮಡುವಿನಲ್ಲಿ ಬಿದ್ದಿದ್ದಾನೆ ಎಂದು ಬುಧವಾರ ಮಧ್ಯರಾತ್ರಿ ತಮಗೆ ಮಾಹಿತಿ ಲಭಿಸಿದ್ದು, ನಂತರ ಅವರು ಸ್ಥಳಕ್ಕೆ ತಲುಪಿ ಆತನನ್ನು ಆಸ್ಪತ್ರೆಗೆ ಸಾಗಿಸಿದರು. ಆದರೆ, ಅಲ್ಲಿ ಅವರು ಬರುವಾಗಲೇ ಆತ ಮೃತಪಟ್ಟಿದ್ದಾನೆ ಎಂದು ಘೋಷಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: 9ನೇ ಕ್ಲಾಸ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್: ಶಿಕ್ಷಕ ಆರೀಫ್​ವುಲ್ಲಾ ಪತ್ನಿ ಕಿರುಕುಳಕ್ಕೆ ಅರ್ಚನಾ ಬಲಿ

ತನಿಖೆಯ ವೇಳೆ ಪೊಲೀಸರು ಆರೋಪಿ ಅಪ್ರಾಪ್ತನನ್ನು ಬಂಧಿಸಿದ್ದಾರೆ. ತಾನು ಮತ್ತು ಮೃತಪಟ್ಟ ಯುವಕ ಝಾರ್ಸಾ ಗ್ರಾಮದಲ್ಲಿ ವಾಸಿಸುತ್ತಿದ್ದು, ಇನ್‌ಸ್ಟಾಗ್ರಾಮ್‌ನಲ್ಲಿ ಸ್ನೇಹಿತರಾಗಿದ್ದೇವೆ ಎಂದು ಆರೋಪಿ ಪೊಲೀಸರ ಮುಂದೆ ಬಹಿರಂಗಪಡಿಸಿದ್ದಾನೆ. ಆ ಯುವಕ ಸುಮಾರು ಒಂದೂವರೆ ವರ್ಷದ ಹಿಂದೆ ಇನ್‌ಸ್ಟಾಗ್ರಾಮ್‌ನಲ್ಲಿ ಹುಡುಗಿಯೊಂದಿಗೆ ಸ್ನೇಹ ಬೆಳೆಸಿದ್ದರು. ಕಳೆದ ಕೆಲ ದಿನಗಳಿಂದ ಆ ಬಾಲಕಿಯೂ ಆರೋಪಿಯೊಂದಿಗೆ ಮಾತನಾಡಲು ಆರಂಭಿಸಿದ್ದಳು. ನಂತರ ಆರೋಪಿಗೆ ತಾನು ಮಾತನಾಡಿದ್ದ ಹುಡುಗಿ ಕೂಡ ಆತನ ಸ್ನೇಹಿತೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Crime News: ಪ್ರೇಮಿಯ ಮೇಲಿನ ಕೋಪಕ್ಕೆ 7 ವರ್ಷದ ಮಗುವನ್ನು ಗೋಡೆಗೆ ಬಡಿದು ಕೊಲೆ

ಆರೋಪಿಯು ಇದರಿಂದಾಗಿ ಆ ಯುವಕನ ವಿರುದ್ಧ ದ್ವೇಷವನ್ನು ಬೆಳೆಸಿಕೊಂಡನು. ಅವನು ತನ್ನ ಇನ್​ಸ್ಟಾಗ್ರಾಂ ಸ್ನೇಹಿತನನ್ನು ಕೊಲ್ಲಲು ಪ್ಲಾನ್ ಮಾಡಿದನು. ಕೊಲೆಯ ಪ್ಲಾನ್ ಕಾರ್ಯಗತಗೊಳಿಸಲು ಆರೋಪಿ ಬುಧವಾರ ಮಧ್ಯರಾತ್ರಿ 150 ರೂ.ಗೆ ಚಾಕು ಖರೀದಿಸಿ, ಬಿಯರ್ ಕುಡಿಯುವ ನೆಪದಲ್ಲಿ ಮೃತಪಟ್ಟ ಯುವಕನಿಗೆ ಕರೆ ಮಾಡಿ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ