AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಯ ಬರ್ಬರ ಹತ್ಯೆ; ಹರಿಯಾಣದ ಇಬ್ಬರ ಬಂಧನ

ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಟ್ರೇಲಿಯಾದಲ್ಲಿ ವಾಸವಾಗಿದ್ದ ಹರಿಯಾಣ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

Crime News: ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಯ ಬರ್ಬರ ಹತ್ಯೆ; ಹರಿಯಾಣದ ಇಬ್ಬರ ಬಂಧನ
ನವಜೀತ್ ಸಂಧು
ಸುಷ್ಮಾ ಚಕ್ರೆ
|

Updated on: May 08, 2024 | 9:07 PM

Share

ನವದೆಹಲಿ: ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ (Melbourne) ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಈ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣ (Haryana) ಮೂಲದ ಕರ್ನಾಲ್‌ನ ಇಬ್ಬರು ಸಹೋದರರನ್ನು ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್‌ನಲ್ಲಿ ಬಂಧಿಸಲಾಗಿದೆ. ಹತ್ಯೆಗೀಡಾದ ಕರ್ನಾಲ್ ಮೂಲದ ವಿದ್ಯಾರ್ಥಿ ಆಸ್ಟ್ರೇಲಿಯಾದಲ್ಲಿ ಎಂಟೆಕ್ ಪದವಿ ಓದುತ್ತಿದ್ದರು.

ವಿಕ್ಟೋರಿಯಾ ಪೊಲೀಸರು ನಡೆಸಿದ ಶೋಧ ಕಾರ್ಯಾಚರಣೆಯ ನಂತರ ಮಂಗಳವಾರ ಬೆಳಿಗ್ಗೆ ಗೌಲ್ಬರ್ನ್‌ನಲ್ಲಿ ಅಭಿಜಿತ್ (26) ಮತ್ತು ರಾಬಿನ್ ಗಾರ್ಟನ್ (27) ಎಂಬ ಇಬ್ಬರನ್ನು ಬಂಧಿಸಲಾಗಿದೆ. ದಿ ಟೈಮ್ಸ್ ಆಫ್ ಇಂಡಿಯಾದ ಪ್ರಕಾರ, ಕೊಲೆ ಮಾಡಿರುವ ಸಹೋದರರು ಕರ್ನಾಲ್‌ನ ಬಸ್ತಾರಾ ಗ್ರಾಮದ ನಿವಾಸಿಗಳಾಗಿದ್ದು, ಅವರನ್ನು ನ್ಯಾಯಾಲಯಕ್ಕೆ ವಿಚಾರಣೆಗೆ ಕರೆದೊಯ್ಯಲಾಗಿದೆ. ಬಳಿಕ ಪೊಲೀಸರು ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆಯಿದೆ.

ಇದನ್ನೂ ಓದಿ: ಗಂಡ-ಹೆಂಡತಿ ಜಗಳ: ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಪತ್ನಿಯ ಭೀಕರ ಕೊಲೆ

ಮೆಲ್ಬೋರ್ನ್‌ನ ಆಗ್ನೇಯದಲ್ಲಿರುವ ಓರ್ಮಂಡ್ ಮನೆಯಲ್ಲಿ 22 ವರ್ಷದ ನವಜೀತ್ ಸಂಧು ಮತ್ತು 30 ವರ್ಷದ ಶರ್ವನ್ ಕುಮಾರ್‌ ಇಬ್ಬರೂ ವಾಸವಾಗಿದ್ದರು. ಅವರ ಮೇಲೆ ದಾಳಿ ಮಾಡಿದ ಸಹೋದರರಿಬ್ಬರು ಅಲ್ಲಿಂದ ಪರಾರಿಯಾಗಿದ್ದರು. ಭಾನುವಾರದಿಂದ ಅವರು ನಾಪತ್ತೆಯಾಗಿದ್ದರು. ಈ ದಾಳಿಯಲ್ಲಿ ಒಬ್ಬಾತ ಮೃತಪಟ್ಟಿದ್ದು, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.

ಕರ್ನಾಲ್‌ನ ಗಗ್ಸಿನಾ ಗ್ರಾಮದ ನವಜೀತ್ ಸಂಧು ಅವರ ಎದೆಗೆ ಭಾನುವಾರ ರಾತ್ರಿ ಮಾರಣಾಂತಿಕವಾಗಿ ಇರಿದಿದ್ದರು. ಕರ್ನಾಲ್‌ನ ನಿವಾಸಿಯಾದ ಅವರ ಚಿಕ್ಕಪ್ಪ ಯಶವೀರ್ ಪ್ರಕಾರ, ಸಂಧು ಅವರು ಕೆಲವು ಬಾಡಿಗೆ ವಿಚಾರದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗಳ ನಡುವಿನ ಜಗಳದಲ್ಲಿ ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ ಆತನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿತ್ತು.

ಇದನ್ನೂ ಓದಿ: ವಿಜಯಪುರ: ಗರ್ಭಿಣಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದವರಿಗೆ ಗಲ್ಲು ಶಿಕ್ಷೆ; ಏನಿದು ಪ್ರಕರಣ?

ನವಜೀತ್ ನವೆಂಬರ್ 2022ರಲ್ಲಿ ಅಧ್ಯಯನ ವೀಸಾದಲ್ಲಿ ಆಸ್ಟ್ರೇಲಿಯಾಕ್ಕೆ ಆಗಮಿಸಿದರು. ಅವರು ಮೆಲ್ಬೋರ್ನ್‌ನಲ್ಲಿ MTech ಪದವಿಯನ್ನು ಪಡೆಯುತ್ತಿದ್ದರು. ಆರೋಪಿಗಳು ಕೂಡ ಮೆಲ್ಬೋರ್ನ್‌ನಲ್ಲಿ ವಾಸಿಸುತ್ತಿದ್ದರು ಎಂದು ವರದಿ ತಿಳಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ