AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಹೆಂಡ್ತಿಯ ರೀಲ್ಸ್​ ಹುಚ್ಚಿಗೆ ಗಂಡ ಬಲಿಯಾದ..!

Crime News In Kannada: ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಏನಾಗ್ತಿದೆ ಎಂದು ನೋಡುವಷ್ಟರಲ್ಲಿ ಸುಮಾರು 200 ಮೀಟರ್‌ ವರೆಗೆ ಇಬ್ಬರನ್ನು ಕಾರು ಎಳೆದೊಯ್ದಿದೆ.

Crime News: ಹೆಂಡ್ತಿಯ ರೀಲ್ಸ್​ ಹುಚ್ಚಿಗೆ ಗಂಡ ಬಲಿಯಾದ..!
ರಮೇಶ್-ಪ್ರೇಮಿಕಾ
TV9 Web
| Edited By: |

Updated on: Jul 24, 2022 | 6:24 PM

Share

ಇತಿ-ಮಿತಿಯಲ್ಲಿ ಇಲ್ಲದಿದ್ದರೆ ಸೋಷಿಯಲ್ ಮೀಡಿಯಾ ಕೂಡ ಅಪಾಯಕಾರಿ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಏಕೆಂದರೆ ಹೆಂಡತಿಯು ತನ್ನ ಇನ್​ಸ್ಟಾಗ್ರಾಮ್ ರೀಲ್ಸ್​ ಹುಚ್ಚಿಗೆ ಗಂಡನನ್ನು ಬಲಿಕೊಟ್ಟಿದ್ದಾಳೆ. ರಾಜಸ್ಥಾನದ ಜೋಧ್​ಪುರದ ಲುನಿ ಎಂಬಲ್ಲಿ ಇಂತಹದೊಂದು ಆಘಾತಕಾರಿ ಘಟನೆ ನಡೆದೆ. ದಿನಗಳ ಹಿಂದೆಯಷ್ಟೇ ಜೋಧಪುರದ ಪ್ರಮುಖ ರಸ್ತೆಯಲ್ಲಿ ಆ್ಯಕ್ಸಿಡೆಂಟ್ ಮೂಲಕ ಡಬಲ್ ಮರ್ಡರ್ ನಡೆದಿತ್ತು. ಈ ಕೊಲೆಯನ್ನು ನೋಡಿದ ಪ್ರತಿಯೊಬ್ಬರೂ ಪ್ರೀ ಪ್ಲ್ಯಾನ್ ಮರ್ಡರ್ ಎಂದೇ ಉದ್ದರಿಸಿದ್ದರು. ಆದರೆ ಯಾಕಾಗಿ ಈ ಕೊಲೆ ನಡೆದಿದೆ ಎಂಬುದೇ ಎಲ್ಲರನ್ನು ಕಾಡಿದ ಪ್ರಶ್ನೆಯಾಗಿತ್ತು. ಈ ಎಲ್ಲಾ ಪ್ರಶ್ನೆಗಳಿಗೆ ಇದೀಗ ಉತ್ತರ ಸಿಕ್ಕಿದೆ.

ಈ ಘಟನೆಯಲ್ಲಿ ಮೃತಪಟ್ಟಿರುವ ರಮೇಶ್ ಪಟೇಲ್ ಅವರ ಪತ್ನಿ ಪ್ರೇಮಿಕಾ ಗುಡ್ಡಿ ಫೇಸ್ ಬುಕ್ ಮತ್ತು ಇನ್​ಸ್ಟಾಗ್ರಾಂನಲ್ಲಿ ರೀಲ್ಸ್​ ಮಾಡುತ್ತಿದ್ದರು. ಆದರೆ ಸದಾ ಸೋಷಿಯಲ್ ಮೀಡಿಯಾದಲ್ಲಿ ಕಾಲ ಕಳೆಯುತ್ತಿದ್ದ ಹೆಂಡತಿಯ ನಡೆಯಿಂದ ರಮೇಶ್ ಪಟೇಲ್ ಬೆಸೆತ್ತಿದ್ದರು. ಹಲವು ಬಾರಿ ಬುದ್ದಿವಾದ ಹೇಳಿದರೂ ಕೇಳುವ ಜಾಯಮಾನ ಹೆಂಡತಿಯದ್ದಾಗಿರಲಿಲ್ಲ. ಹೀಗಾಗಿ ಪದೇ ಪದೇ ಇಬ್ಬರ ನಡುವೆ ಇದೇ ವಿಚಾರದಿಂದ ಸಣ್ಣ ಪುಟ್ಟ ಜಗಳಗಳಾಗುತ್ತಿತ್ತು.

ಗಂಡ ಇದ್ದರೆ ತನ್ನ ಸೋಷಿಯಲ್ ಮೀಡಿಯಾ ಹುಚ್ಚಾಟಕ್ಕೆ ಅವಕಾಶವಿಲ್ಲ ಎಂದರಿತು ಪ್ರೇಮಿಕಾ ಗಂಡನನ್ನೇ ಮುಗಿಸಲು ಪ್ಲ್ಯಾನ್ ರೂಪಿಸಿದ್ದಳು. ಇದರ ನಡುವೆ ಪ್ರೇಮಿಕಾಗೆ ಶಂಕರ್ ಪಟೇಲ್ ಎಂಬ ವ್ಯಕ್ತಿಯ ಪರಿಚಯವಾಗಿತ್ತು. ಇಬ್ಬರ ನಡುವೆ ಅನೈತಿಕ ಸಂಬಂಧ ಕೂಡ ಬೆಳೆದಿದೆ. ಅತ್ತ ಶಂಕರ್​ಗೆ ಪ್ರೇಮಿಕಾ ಬೇಕಿದ್ದರೆ, ಇತ್ತ ಪ್ರೇಮಿಕಾಗೆ ಗಂಡ ರಮೇಶ್ ಪಟೇಲ್ ದೂರವಾಗಬೇಕಿತ್ತು. ಹೀಗಾಗಿ ಗಂಡನನ್ನೇ ಮುಗಿಸಲು ತನ್ನ ಪ್ರಿಯತಮನಿಗೆ ತಿಳಿಸಿದಳು.

ಇದನ್ನೂ ಓದಿ
Image
Lady Singham: ಕೊನೆಗೂ ಲೇಡಿ ಸಿಂಗಮ್ ಅರೆಸ್ಟ್​..!
Image
Viral Video: ಒಳಗೆ ಸೇರಿದರೆ ಗುಂಡು…ಕುಡಿದ ಮತ್ತಿನಲ್ಲಿ ರಸ್ತೆಯಲ್ಲೇ ಯುವತಿಯ ರಂಪಾಟ..!
Image
Crime Story: ಪೊಲೀಸ್ ಮಗ, ಎಲ್​ಎಲ್​ಬಿ ಪದವೀಧರ: ಯಾರು ಈ ಡಾನ್ ಲಾರೆನ್ಸ್ ಬಿಷ್ಣೋಯ್?
Image
Crime Story: ಕಿಂಗ್ ಆಫ್ ಕ್ರೈಮ್: ದಾವೂದ್ ಇಬ್ರಾಹಿಂಗೆ ನಡುಕ ಹುಟ್ಟಿಸಿದ್ದ ಸ್ಲಂ ಡಾನ್

ಇತ್ತ ಕಾಮದ ಅಮಲಿನಲ್ಲಿದ್ದ ಶಂಕರ್ ಪಟೇಲ್ ಕೊಲೆಗೆ ಸ್ಕೆಚ್ ರೂಪಿಸಿ ದೆಹಲಿಯಿಂದ ಹಳೆಯ ಎಸ್​ಯುವಿ ಕಾರೊಂದನ್ನು ಖರೀದಿಸಿದ್ದ. ಅಲ್ಲದೆ ರಮೇಶ್ ಪಟೇಲ್​ ಅವರ ಚಲನವಲನಗಳ ಬಗ್ಗೆ ಪ್ರೇಮಿಕಾಳಿಂದ ಅಪ್​ಡೇಟ್ ಪಡೆದುಕೊಳ್ಳುತ್ತಿದ್ದ. ಅದರಂತೆ ಜುಲೈ 17 ರಂದು ರಮೇಶ್ ಪಟೇಲ್ ತನ್ನ ಸೋದರಸಂಬಂಧಿ ಕವಿತಾರನ್ನು ಕರೆದುಕೊಂಡು ಲುನಿಯಿಂದ ಜೋಧ್‌ಪುರಕ್ಕೆ ಬೈಕ್‌ನಲ್ಲಿ ಹೊರಟಿದ್ದರು. ಲುನಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದಿಂದ ಹೊರಡುತ್ತಿದ್ದಂತೆಯೇ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಏನಾಗ್ತಿದೆ ಎಂದು ನೋಡುವಷ್ಟರಲ್ಲಿ ಸುಮಾರು 200 ಮೀಟರ್‌ ವರೆಗೆ ಇಬ್ಬರನ್ನು ಕಾರು ಎಳೆದೊಯ್ದಿದೆ. ಪರಿಣಾಮ ರಮೇಶ್ ಹಾಗೂ ಕವಿತಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಭೀಕರ ಅಪಘಾತ ಸಂಭವಿಸಿದರೂ ಯಾಕಾಗಿ ಈ ಕೊಲೆ ನಡೆದಿದೆ ಎಂಬುದರ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಅದರಲ್ಲೂ ಇಬ್ಬರ ಕೊಲೆಯನ್ನು ಯಾರು ಮಾಡಿದ್ದಾರೆ ಎಂಬುದೇ ದೊಡ್ಡ ಪ್ರಶ್ನೆಯಾಗಿತ್ತು. ಇತ್ತ ಕಡೆಯಿಂದ  ರಮೇಶ್ ಪಟೇಲ್ ಅವರ ಕುಟುಂಬಸ್ಥರಿಂದ ಪೊಲೀಸರಿಗೆ ಒತ್ತಡ ಹೆಚ್ಚಾಯಿತು. ಹೀಗಾಗಿ ತನಿಖೆಯನ್ನು ಚುರುಕುಗೊಳಿಸಿದ ಪೊಲೀಸರು ಅಂತಿಮವಾಗಿ ಬಂದು ನಿಂತಿದ್ದು ರಮೇಶ್ ಪಟೇಲ್ ಅವರ ಮನೆಯ ಮುಂದೆ ಎಂಬುದು ವಿಶೇಷ.

ಏಕೆಂದರೆ ಘಟನೆ ನಡೆದ ಸ್ಥಳದಲ್ಲಿ ಕಾರ್ಯ ನಿರ್ವಹಿಸಿದ್ದ ಮೊಬೈಲ್​ನಿಂದಲೇ ಪ್ರೇಮಿಕಾಳಿಗೂ ಕರೆ ಹೋಗಿರುವುದು ಗೊತ್ತಾಗಿದೆ. ಹೀಗಾಗಿ ಪ್ರೇಮಿಕಾಳನ್ನು ವಶಕ್ಕೆ ಪಡೆದ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಗಂಡನ ನಡುವೆ ಇನ್​ಸ್ಟಾಗ್ರಾಮ್ ರೀಲ್ಸ್​ ವಿಚಾರಕ್ಕೆ ಜಗಳವಾಗುತ್ತಿರುವ ವಿಚಾರ ಬಾಯಿಬಿಟ್ಟಿದ್ದಾಳೆ. ಅಷ್ಟೇ ಅಲ್ಲದೆ ಮತ್ತಷ್ಟು ವಿಚಾರಣೆಗೊಳಪಡಿಸಿದಾಗ ಶಂಕರ್ ಜೊತೆ ಅನೈತಿಕ ಸಂಬಂಧ ಹೊಂದಿರುವುದನ್ನು ಹೇಳಿದ್ದಾಳೆ.

ಅಲ್ಲಿಗೆ ಪೊಲೀಸರಿಗೆ ಪ್ರೀ ಪ್ಲ್ಯಾನ್ ಮರ್ಡರ್ ಯಾಕೆ ಮಾಡಿದ್ದರು ಎಂಬುದಕ್ಕೆ ಸ್ಪಷ್ಟತೆ ಸಿಕ್ಕಿದೆ. ಇದಾಗ್ಯೂ ಕವಿತಾಳನ್ನು ಯಾಕೆ ಕೊಂದ್ರಿ ಎಂಬ ಪ್ರಶ್ನೆಗೆ ಸಿಕ್ಕ ಉತ್ತರ, ರಮೇಶ್ ಪಟೇಲ್​ರನ್ನು ಕೊಲೆ ಮಾಡಲು ಮಾತ್ರ ಪ್ಲ್ಯಾನ್ ರೂಪಿಸಿದ್ದೆವು. ಆದರೆ ಅಂದು ಕವಿತಾ ಕೂಡ ಅವರ ಜೊತೆ ಹೋಗಿದ್ದಳು. ಹೀಗಾಗಿ ಅವಳನ್ನು ಕೂಡ ಕೊಲೆ ಮಾಡಲಾಗಿದೆ ಎಂದಿದ್ದಾಳೆ. ಇದೀಗ ಪ್ರೇಮಿಕಾ ಸೇರಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮತ್ತೋರ್ವ ಪ್ರಮುಖ ಆರೋಪಿ ಶಂಕರ್​ಗಾಗಿ ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ