AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಿ ಮದುವೆಯಾದವನಿಂದಲೇ ಮಹಿಳಾ ಪೊಲೀಸ್ ಕೊಲೆ; ಸಿಂಧೂರವನ್ನು ಅಳಿಸಿ, ಶವ ಬೆತ್ತಲೆಗೊಳಿಸಿದ ಗಂಡ!

ಶೋಭಾ ಮತ್ತು ಆಕೆಯ ಗಂಡ ಜೆಹಾನಾಬಾದ್‌ನಲ್ಲಿ ನಡೆಸುತ್ತಿದ್ದ ಕೋಚಿಂಗ್ ತರಗತಿಯಲ್ಲಿ ಭೇಟಿಯಾಗಿದ್ದರು. ಬಳಿಕ ಇಬ್ಬರಿಗೂ ಪ್ರೀತಿಯಾಗಿತ್ತು. ನಂತರ ಮನೆಯವರನ್ನು ಒಪ್ಪಿಸಿ ಮದುವೆಯನ್ನೂ ಆಗಿದ್ದರು. ಅವರಿಗೆ ಒಬ್ಬಳು ಮಗಳಿದ್ದಾಳೆ.

ಪ್ರೀತಿಸಿ ಮದುವೆಯಾದವನಿಂದಲೇ ಮಹಿಳಾ ಪೊಲೀಸ್ ಕೊಲೆ; ಸಿಂಧೂರವನ್ನು ಅಳಿಸಿ, ಶವ ಬೆತ್ತಲೆಗೊಳಿಸಿದ ಗಂಡ!
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Oct 22, 2023 | 7:32 PM

Share

ಪಾಟ್ನಾ: ಇತ್ತೀಚೆಗಷ್ಟೇ ನೇಮಕವಾಗಿದ್ದ ಪಾಟ್ನಾದ ಮಹಿಳಾ ಕಾನ್‌ಸ್ಟೆಬಲ್ ಶೋಭಾ ಕುಮಾರಿ ಎಂಬುವವರನ್ನು ಅವರ ಪತಿ ಗಜೇಂದ್ರ ಯಾದವ್ ಕ್ರೂರವಾಗಿ ಹತ್ಯೆ ಮಾಡಿದ್ದಾನೆ. ಆಕೆಗೆ ಕೆಲಸ ಸಿಕ್ಕ ನಂತರ ತನ್ನ ಕುಟುಂಬಕ್ಕೆ ಸಮಯವನ್ನೇ ನೀಡುತ್ತಿರಲಿಲ್ಲ ಎಂಬ ಕಾರಣಕ್ಕೆ ಆಕೆಯ ಗಂಡನಿಗೆ ಆಕೆಯ ಮೇಲೆ ಅಸಮಾಧಾನವಿತ್ತು. ಇದೇ ಕಾರಣಕ್ಕೆ ಮಹಿಳಾ ಪೊಲೀಸ್ ಕಾನ್​ಸ್ಟೆಬಲ್​ಳನ್ನು ಆತ ಕೊಲೆ ಮಾಡಿದ್ದಾನೆ. ಬಳಿಕ ಶವವನ್ನು ಬೆತ್ತಲೆಗೊಳಿಸಿ, ಆಕೆಯ ಸಿಂಧೂರವನ್ನು ಅಳಿಸಿ, ರೂಮಿನಲ್ಲಿ ಬಿಸಾಡಿ ಹೋಗಿದ್ದಾನೆ.

ಶುಕ್ರವಾರ ಪಾಟ್ನಾದ ಹೋಟೆಲ್ ರೂಮಿನಲ್ಲಿ ಶೋಭಾ ಅವರ ಶವವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಆಕೆಯ ಶವದ ಮೇಲೆ ಬಟ್ಟೆಗಳಿರಲಿಲ್ಲ. ಇಡೀ ರೂಮಿನ ತುಂಬ ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದವು. ಬಹುಶಃ ಸಾಯುವ ಮುಂಚೆ ಆಕೆ ಜೋರಾಗಿ ಕಿರುಚಿ, ಗಲಾಟೆ ಮಾಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿರಬಹುದು ಎನ್ನಲಾಗಿದೆ. ಶೋಭಾ ಅವರ ತಲೆಗೆ ಗುಂಡು ಹಾರಿಸಿ ಕೊಲೆ ಮಾಡಲಾಗಿದೆ.

ಇದನ್ನೂ ಓದಿ: ಕಲಬುರಗಿ: ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಕೊಲೆ; ಕಾರಣ?

23 ವರ್ಷದ ಶೋಭಾ ಅವರ ಪತಿ ಜೆಹಾನಾಬಾದ್ ಬಳಿ ವಾಸವಾಗಿದ್ದು, ತನ್ನ ಹೆಂಡತಿ ಕೆಲಸದ ಕಾರಣದಿಂದ ಕುಟುಂಬಕ್ಕೆ ಸಮಯವನ್ನೇ ಕೊಡುತ್ತಿಲ್ಲ ಎಂಬ ಕೋಪ ಅವರಿಗಿತ್ತು. ಈ ಜೋಡಿ ಪ್ರೀತಿಸಿ ಮದುವೆಯಾಗಿದ್ದರು. ಶೋಭಾ ಮತ್ತು ಆಕೆಯ ಗಂಡ ಜೆಹಾನಾಬಾದ್‌ನಲ್ಲಿ ನಡೆಸುತ್ತಿದ್ದ ಕೋಚಿಂಗ್ ತರಗತಿಯಲ್ಲಿ ಭೇಟಿಯಾಗಿದ್ದರು. ಬಳಿಕ ಇಬ್ಬರಿಗೂ ಪ್ರೀತಿಯಾಗಿತ್ತು. ನಂತರ ಮನೆಯವರನ್ನು ಒಪ್ಪಿಸಿ ಮದುವೆಯನ್ನೂ ಆಗಿದ್ದರು. ಅವರಿಗೆ ಒಬ್ಬಳು ಮಗಳಿದ್ದಾಳೆ.

2 ದಿನಗಳ ಹಿಂದೆ ಪಾಟ್ನಾದ ಹೋಟೆಲ್‌ನಲ್ಲಿ ಶೋಭಾ ಅವರ ಶವ ಪತ್ತೆಯಾಗಿತ್ತು. ಆಕೆಯ ಪತಿ ಆ ರೂಮನ್ನು ಬುಕ್ ಮಾಡಿದ್ದರು. ಶೋಭಾ ಅವರನ್ನು ಭೇಟಿ ಮಾಡಲು ಬಂದಿದ್ದರು. ಕೊಲೆಯ ನಂತರ ಪತಿ ತನ್ನ ಫೋನ್ ಸ್ವಿಚ್ ಆಫ್ ಮಾಡುವ ಮೊದಲು 3 ಕರೆಗಳನ್ನು ಮಾಡಿದ್ದ ಎನ್ನಲಾಗಿದೆ. ಆತ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ