AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಿ ಮದುವೆಯಾದವನಿಂದಲೇ ಮಹಿಳಾ ಪೊಲೀಸ್ ಕೊಲೆ; ಸಿಂಧೂರವನ್ನು ಅಳಿಸಿ, ಶವ ಬೆತ್ತಲೆಗೊಳಿಸಿದ ಗಂಡ!

ಶೋಭಾ ಮತ್ತು ಆಕೆಯ ಗಂಡ ಜೆಹಾನಾಬಾದ್‌ನಲ್ಲಿ ನಡೆಸುತ್ತಿದ್ದ ಕೋಚಿಂಗ್ ತರಗತಿಯಲ್ಲಿ ಭೇಟಿಯಾಗಿದ್ದರು. ಬಳಿಕ ಇಬ್ಬರಿಗೂ ಪ್ರೀತಿಯಾಗಿತ್ತು. ನಂತರ ಮನೆಯವರನ್ನು ಒಪ್ಪಿಸಿ ಮದುವೆಯನ್ನೂ ಆಗಿದ್ದರು. ಅವರಿಗೆ ಒಬ್ಬಳು ಮಗಳಿದ್ದಾಳೆ.

ಪ್ರೀತಿಸಿ ಮದುವೆಯಾದವನಿಂದಲೇ ಮಹಿಳಾ ಪೊಲೀಸ್ ಕೊಲೆ; ಸಿಂಧೂರವನ್ನು ಅಳಿಸಿ, ಶವ ಬೆತ್ತಲೆಗೊಳಿಸಿದ ಗಂಡ!
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Oct 22, 2023 | 7:32 PM

ಪಾಟ್ನಾ: ಇತ್ತೀಚೆಗಷ್ಟೇ ನೇಮಕವಾಗಿದ್ದ ಪಾಟ್ನಾದ ಮಹಿಳಾ ಕಾನ್‌ಸ್ಟೆಬಲ್ ಶೋಭಾ ಕುಮಾರಿ ಎಂಬುವವರನ್ನು ಅವರ ಪತಿ ಗಜೇಂದ್ರ ಯಾದವ್ ಕ್ರೂರವಾಗಿ ಹತ್ಯೆ ಮಾಡಿದ್ದಾನೆ. ಆಕೆಗೆ ಕೆಲಸ ಸಿಕ್ಕ ನಂತರ ತನ್ನ ಕುಟುಂಬಕ್ಕೆ ಸಮಯವನ್ನೇ ನೀಡುತ್ತಿರಲಿಲ್ಲ ಎಂಬ ಕಾರಣಕ್ಕೆ ಆಕೆಯ ಗಂಡನಿಗೆ ಆಕೆಯ ಮೇಲೆ ಅಸಮಾಧಾನವಿತ್ತು. ಇದೇ ಕಾರಣಕ್ಕೆ ಮಹಿಳಾ ಪೊಲೀಸ್ ಕಾನ್​ಸ್ಟೆಬಲ್​ಳನ್ನು ಆತ ಕೊಲೆ ಮಾಡಿದ್ದಾನೆ. ಬಳಿಕ ಶವವನ್ನು ಬೆತ್ತಲೆಗೊಳಿಸಿ, ಆಕೆಯ ಸಿಂಧೂರವನ್ನು ಅಳಿಸಿ, ರೂಮಿನಲ್ಲಿ ಬಿಸಾಡಿ ಹೋಗಿದ್ದಾನೆ.

ಶುಕ್ರವಾರ ಪಾಟ್ನಾದ ಹೋಟೆಲ್ ರೂಮಿನಲ್ಲಿ ಶೋಭಾ ಅವರ ಶವವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಆಕೆಯ ಶವದ ಮೇಲೆ ಬಟ್ಟೆಗಳಿರಲಿಲ್ಲ. ಇಡೀ ರೂಮಿನ ತುಂಬ ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದವು. ಬಹುಶಃ ಸಾಯುವ ಮುಂಚೆ ಆಕೆ ಜೋರಾಗಿ ಕಿರುಚಿ, ಗಲಾಟೆ ಮಾಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿರಬಹುದು ಎನ್ನಲಾಗಿದೆ. ಶೋಭಾ ಅವರ ತಲೆಗೆ ಗುಂಡು ಹಾರಿಸಿ ಕೊಲೆ ಮಾಡಲಾಗಿದೆ.

ಇದನ್ನೂ ಓದಿ: ಕಲಬುರಗಿ: ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಕೊಲೆ; ಕಾರಣ?

23 ವರ್ಷದ ಶೋಭಾ ಅವರ ಪತಿ ಜೆಹಾನಾಬಾದ್ ಬಳಿ ವಾಸವಾಗಿದ್ದು, ತನ್ನ ಹೆಂಡತಿ ಕೆಲಸದ ಕಾರಣದಿಂದ ಕುಟುಂಬಕ್ಕೆ ಸಮಯವನ್ನೇ ಕೊಡುತ್ತಿಲ್ಲ ಎಂಬ ಕೋಪ ಅವರಿಗಿತ್ತು. ಈ ಜೋಡಿ ಪ್ರೀತಿಸಿ ಮದುವೆಯಾಗಿದ್ದರು. ಶೋಭಾ ಮತ್ತು ಆಕೆಯ ಗಂಡ ಜೆಹಾನಾಬಾದ್‌ನಲ್ಲಿ ನಡೆಸುತ್ತಿದ್ದ ಕೋಚಿಂಗ್ ತರಗತಿಯಲ್ಲಿ ಭೇಟಿಯಾಗಿದ್ದರು. ಬಳಿಕ ಇಬ್ಬರಿಗೂ ಪ್ರೀತಿಯಾಗಿತ್ತು. ನಂತರ ಮನೆಯವರನ್ನು ಒಪ್ಪಿಸಿ ಮದುವೆಯನ್ನೂ ಆಗಿದ್ದರು. ಅವರಿಗೆ ಒಬ್ಬಳು ಮಗಳಿದ್ದಾಳೆ.

2 ದಿನಗಳ ಹಿಂದೆ ಪಾಟ್ನಾದ ಹೋಟೆಲ್‌ನಲ್ಲಿ ಶೋಭಾ ಅವರ ಶವ ಪತ್ತೆಯಾಗಿತ್ತು. ಆಕೆಯ ಪತಿ ಆ ರೂಮನ್ನು ಬುಕ್ ಮಾಡಿದ್ದರು. ಶೋಭಾ ಅವರನ್ನು ಭೇಟಿ ಮಾಡಲು ಬಂದಿದ್ದರು. ಕೊಲೆಯ ನಂತರ ಪತಿ ತನ್ನ ಫೋನ್ ಸ್ವಿಚ್ ಆಫ್ ಮಾಡುವ ಮೊದಲು 3 ಕರೆಗಳನ್ನು ಮಾಡಿದ್ದ ಎನ್ನಲಾಗಿದೆ. ಆತ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ