AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ವೇಷದಲ್ಲಿ ನುಗ್ಗಿ ಕೆಫೆ ಮಾಲೀಕನ ಮನೆಯಿಂದ 25 ಲಕ್ಷ ರೂ. ದೋಚಿದ ಕಳ್ಳರು

ತಾವು ಕ್ರೈಂ ಬ್ರಾಂಚ್‌ ಅಧಿಕಾರಿಗಳು ಎಂದು ಹೇಳಿಕೊಂಡು ಮುಂಬೈನ ಸಿಯಾನ್ ಪ್ರದೇಶದಲ್ಲಿ ಕೆಫೆ ಮಾಲೀಕನ ಮನೆಗೆ ನುಗ್ಗಿದ 6 ಜನರು 25 ಲಕ್ಷ ರೂ. ಹಣವನ್ನು ದೋಚಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರ ವೇಷದಲ್ಲಿ ನುಗ್ಗಿ ಕೆಫೆ ಮಾಲೀಕನ ಮನೆಯಿಂದ 25 ಲಕ್ಷ ರೂ. ದೋಚಿದ ಕಳ್ಳರು
ಪೊಲೀಸರು
ಸುಷ್ಮಾ ಚಕ್ರೆ
|

Updated on: May 16, 2024 | 4:54 PM

Share

ಮುಂಬೈ: ಮಹಾರಾಷ್ಟ್ರದ (Maharashtra) ಮುಂಬೈ ನಗರದ ಮಾಟುಂಗಾ ಪ್ರದೇಶದಲ್ಲಿ ಜನಪ್ರಿಯ ಕೆಫೆ ನಡೆಸುತ್ತಿರುವ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿದ 6 ದರೋಡೆಕೋರರು ತಾವು ಮುಂಬೈ ಕ್ರೈಂ ಬ್ರಾಂಚ್ (Mumbai Crime Branch) ಸಿಬ್ಬಂದಿ ಎಂದು ಹೇಳಿ ಸಿಯಾನ್ ಆಸ್ಪತ್ರೆ ಬಳಿಯ ಆ ಮಾಲೀಕರ ಮನೆಗೆ ಹೋಗಿ 25 ಲಕ್ಷ ರೂ. ಹಣ ದೋಚಿರುವ ಘಟನೆ ನಡೆದಿದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಪೋಲೀಸರಂತೆ ಪೋಸು ಕೊಟ್ಟು ಕೆಫೆ ಮಾಲೀಕರ ಮನೆಗೆ ನುಗ್ಗಿದ ಆರು ಮಂದಿ 25 ಲಕ್ಷ ರೂ. ಹಣ ಕದ್ದಿದ್ದಾರೆ. ಅವರಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕ್ರೈಂ ಬ್ರಾಂಚ್‌ನವರು ಎಂದು ಹೇಳಿಕೊಂಡ 6 ಮಂದಿ ಮುಂಬೈನ ಸಿಯೋನ್ ಪ್ರದೇಶದಲ್ಲಿ ಕೆಫೆ ಮಾಲೀಕರ ಮನೆಗೆ ನುಗ್ಗಿ 25 ಲಕ್ಷ ರೂಪಾಯಿಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಇದನ್ನೂ ಓದಿ: ‘ಇದು ದರೋಡೆ ಪ್ಲ್ಯಾನ್​’: ಬೆಂಗಳೂರಿನಲ್ಲಿ ನಡೆದ ಹಲ್ಲೆ ಬಗ್ಗೆ ವಿವರ ನೀಡಿದ ಹರ್ಷಿಕಾ

ನಮ್ಮನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ನೀವು ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಹಣ ಇಟ್ಟುಕೊಂಡಿದ್ದೀರಿ ಎಂಬ ಮಾಹಿತಿ ಇದೆ ಎಂದು ಆ ಪೊಲೀಸರ ವೇಷದಲ್ಲಿ ಬಂದ ದರೋಡೆಕೋರರು ಹೇಳಿದ್ದಾರೆ. ಇದನ್ನು ಕೇಳಿ ಗಾಬರಿಯಾದ ಕೆಫೆ ಮಾಲೀಕರು ತಮ್ಮ ಮನೆಯನ್ನು ಸರ್ಚ್ ಮಾಡಲು ಅವಕಾಶ ನೀಡಿದ್ದಾರೆ. ಈ ವೇಳೆ ಅವರು 25 ಲಕ್ಷ ರೂ. ಹಣ ದೋಚಿಕೊಂಡು ಹೋಗಿದ್ದಾರೆ ಎಂದು ದೂರು ನೀಡಲಾಗಿದೆ.

ಮುಂಬೈನಲ್ಲಿ ಮೇ 20ರಂದು ಐದನೇ ಹಂತದ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ನಡೆಯಲಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮನೆಗೆ ನುಗ್ಗಿ ಗನ್ ತೋರಿಸಿ 40 ಲಕ್ಷ ಹಣ ದರೋಡೆ

ಕೆಫೆ ವ್ಯಾಪಾರದಿಂದ ಸಂಗ್ರಹವಾಗಿದ್ದ 25 ಲಕ್ಷ ರೂ. ಹಣ ಮಾತ್ರ ನಮ್ಮ ಮನೆಯಲ್ಲಿದೆ. ಇದು ನನ್ನ ಸ್ವಂತ ದುಡ್ಡು. ಚುನಾವಣೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕೆಫೆ ಮಾಲೀಕರು ದರೋಡೆಕೋರರಿಗೆ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ. ತನಿಖೆಯ ವೇಳೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಅಪರಾಧದಲ್ಲಿ ನಿವೃತ್ತ ಪೊಲೀಸ್ ಪೇದೆ ಮತ್ತು ಪೊಲೀಸ್ ಮೋಟಾರು ಸಾರಿಗೆ ಇಲಾಖೆಯ ಸಿಬ್ಬಂದಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು