AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ವೇಷದಲ್ಲಿ ನುಗ್ಗಿ ಕೆಫೆ ಮಾಲೀಕನ ಮನೆಯಿಂದ 25 ಲಕ್ಷ ರೂ. ದೋಚಿದ ಕಳ್ಳರು

ತಾವು ಕ್ರೈಂ ಬ್ರಾಂಚ್‌ ಅಧಿಕಾರಿಗಳು ಎಂದು ಹೇಳಿಕೊಂಡು ಮುಂಬೈನ ಸಿಯಾನ್ ಪ್ರದೇಶದಲ್ಲಿ ಕೆಫೆ ಮಾಲೀಕನ ಮನೆಗೆ ನುಗ್ಗಿದ 6 ಜನರು 25 ಲಕ್ಷ ರೂ. ಹಣವನ್ನು ದೋಚಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರ ವೇಷದಲ್ಲಿ ನುಗ್ಗಿ ಕೆಫೆ ಮಾಲೀಕನ ಮನೆಯಿಂದ 25 ಲಕ್ಷ ರೂ. ದೋಚಿದ ಕಳ್ಳರು
ಪೊಲೀಸರು
ಸುಷ್ಮಾ ಚಕ್ರೆ
|

Updated on: May 16, 2024 | 4:54 PM

Share

ಮುಂಬೈ: ಮಹಾರಾಷ್ಟ್ರದ (Maharashtra) ಮುಂಬೈ ನಗರದ ಮಾಟುಂಗಾ ಪ್ರದೇಶದಲ್ಲಿ ಜನಪ್ರಿಯ ಕೆಫೆ ನಡೆಸುತ್ತಿರುವ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿದ 6 ದರೋಡೆಕೋರರು ತಾವು ಮುಂಬೈ ಕ್ರೈಂ ಬ್ರಾಂಚ್ (Mumbai Crime Branch) ಸಿಬ್ಬಂದಿ ಎಂದು ಹೇಳಿ ಸಿಯಾನ್ ಆಸ್ಪತ್ರೆ ಬಳಿಯ ಆ ಮಾಲೀಕರ ಮನೆಗೆ ಹೋಗಿ 25 ಲಕ್ಷ ರೂ. ಹಣ ದೋಚಿರುವ ಘಟನೆ ನಡೆದಿದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಪೋಲೀಸರಂತೆ ಪೋಸು ಕೊಟ್ಟು ಕೆಫೆ ಮಾಲೀಕರ ಮನೆಗೆ ನುಗ್ಗಿದ ಆರು ಮಂದಿ 25 ಲಕ್ಷ ರೂ. ಹಣ ಕದ್ದಿದ್ದಾರೆ. ಅವರಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕ್ರೈಂ ಬ್ರಾಂಚ್‌ನವರು ಎಂದು ಹೇಳಿಕೊಂಡ 6 ಮಂದಿ ಮುಂಬೈನ ಸಿಯೋನ್ ಪ್ರದೇಶದಲ್ಲಿ ಕೆಫೆ ಮಾಲೀಕರ ಮನೆಗೆ ನುಗ್ಗಿ 25 ಲಕ್ಷ ರೂಪಾಯಿಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಇದನ್ನೂ ಓದಿ: ‘ಇದು ದರೋಡೆ ಪ್ಲ್ಯಾನ್​’: ಬೆಂಗಳೂರಿನಲ್ಲಿ ನಡೆದ ಹಲ್ಲೆ ಬಗ್ಗೆ ವಿವರ ನೀಡಿದ ಹರ್ಷಿಕಾ

ನಮ್ಮನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ನೀವು ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಹಣ ಇಟ್ಟುಕೊಂಡಿದ್ದೀರಿ ಎಂಬ ಮಾಹಿತಿ ಇದೆ ಎಂದು ಆ ಪೊಲೀಸರ ವೇಷದಲ್ಲಿ ಬಂದ ದರೋಡೆಕೋರರು ಹೇಳಿದ್ದಾರೆ. ಇದನ್ನು ಕೇಳಿ ಗಾಬರಿಯಾದ ಕೆಫೆ ಮಾಲೀಕರು ತಮ್ಮ ಮನೆಯನ್ನು ಸರ್ಚ್ ಮಾಡಲು ಅವಕಾಶ ನೀಡಿದ್ದಾರೆ. ಈ ವೇಳೆ ಅವರು 25 ಲಕ್ಷ ರೂ. ಹಣ ದೋಚಿಕೊಂಡು ಹೋಗಿದ್ದಾರೆ ಎಂದು ದೂರು ನೀಡಲಾಗಿದೆ.

ಮುಂಬೈನಲ್ಲಿ ಮೇ 20ರಂದು ಐದನೇ ಹಂತದ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ನಡೆಯಲಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮನೆಗೆ ನುಗ್ಗಿ ಗನ್ ತೋರಿಸಿ 40 ಲಕ್ಷ ಹಣ ದರೋಡೆ

ಕೆಫೆ ವ್ಯಾಪಾರದಿಂದ ಸಂಗ್ರಹವಾಗಿದ್ದ 25 ಲಕ್ಷ ರೂ. ಹಣ ಮಾತ್ರ ನಮ್ಮ ಮನೆಯಲ್ಲಿದೆ. ಇದು ನನ್ನ ಸ್ವಂತ ದುಡ್ಡು. ಚುನಾವಣೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕೆಫೆ ಮಾಲೀಕರು ದರೋಡೆಕೋರರಿಗೆ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ. ತನಿಖೆಯ ವೇಳೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಅಪರಾಧದಲ್ಲಿ ನಿವೃತ್ತ ಪೊಲೀಸ್ ಪೇದೆ ಮತ್ತು ಪೊಲೀಸ್ ಮೋಟಾರು ಸಾರಿಗೆ ಇಲಾಖೆಯ ಸಿಬ್ಬಂದಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ