AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ವೇಷದಲ್ಲಿ ನುಗ್ಗಿ ಕೆಫೆ ಮಾಲೀಕನ ಮನೆಯಿಂದ 25 ಲಕ್ಷ ರೂ. ದೋಚಿದ ಕಳ್ಳರು

ತಾವು ಕ್ರೈಂ ಬ್ರಾಂಚ್‌ ಅಧಿಕಾರಿಗಳು ಎಂದು ಹೇಳಿಕೊಂಡು ಮುಂಬೈನ ಸಿಯಾನ್ ಪ್ರದೇಶದಲ್ಲಿ ಕೆಫೆ ಮಾಲೀಕನ ಮನೆಗೆ ನುಗ್ಗಿದ 6 ಜನರು 25 ಲಕ್ಷ ರೂ. ಹಣವನ್ನು ದೋಚಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರ ವೇಷದಲ್ಲಿ ನುಗ್ಗಿ ಕೆಫೆ ಮಾಲೀಕನ ಮನೆಯಿಂದ 25 ಲಕ್ಷ ರೂ. ದೋಚಿದ ಕಳ್ಳರು
ಪೊಲೀಸರು
ಸುಷ್ಮಾ ಚಕ್ರೆ
|

Updated on: May 16, 2024 | 4:54 PM

Share

ಮುಂಬೈ: ಮಹಾರಾಷ್ಟ್ರದ (Maharashtra) ಮುಂಬೈ ನಗರದ ಮಾಟುಂಗಾ ಪ್ರದೇಶದಲ್ಲಿ ಜನಪ್ರಿಯ ಕೆಫೆ ನಡೆಸುತ್ತಿರುವ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿದ 6 ದರೋಡೆಕೋರರು ತಾವು ಮುಂಬೈ ಕ್ರೈಂ ಬ್ರಾಂಚ್ (Mumbai Crime Branch) ಸಿಬ್ಬಂದಿ ಎಂದು ಹೇಳಿ ಸಿಯಾನ್ ಆಸ್ಪತ್ರೆ ಬಳಿಯ ಆ ಮಾಲೀಕರ ಮನೆಗೆ ಹೋಗಿ 25 ಲಕ್ಷ ರೂ. ಹಣ ದೋಚಿರುವ ಘಟನೆ ನಡೆದಿದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಪೋಲೀಸರಂತೆ ಪೋಸು ಕೊಟ್ಟು ಕೆಫೆ ಮಾಲೀಕರ ಮನೆಗೆ ನುಗ್ಗಿದ ಆರು ಮಂದಿ 25 ಲಕ್ಷ ರೂ. ಹಣ ಕದ್ದಿದ್ದಾರೆ. ಅವರಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕ್ರೈಂ ಬ್ರಾಂಚ್‌ನವರು ಎಂದು ಹೇಳಿಕೊಂಡ 6 ಮಂದಿ ಮುಂಬೈನ ಸಿಯೋನ್ ಪ್ರದೇಶದಲ್ಲಿ ಕೆಫೆ ಮಾಲೀಕರ ಮನೆಗೆ ನುಗ್ಗಿ 25 ಲಕ್ಷ ರೂಪಾಯಿಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಇದನ್ನೂ ಓದಿ: ‘ಇದು ದರೋಡೆ ಪ್ಲ್ಯಾನ್​’: ಬೆಂಗಳೂರಿನಲ್ಲಿ ನಡೆದ ಹಲ್ಲೆ ಬಗ್ಗೆ ವಿವರ ನೀಡಿದ ಹರ್ಷಿಕಾ

ನಮ್ಮನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ನೀವು ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಹಣ ಇಟ್ಟುಕೊಂಡಿದ್ದೀರಿ ಎಂಬ ಮಾಹಿತಿ ಇದೆ ಎಂದು ಆ ಪೊಲೀಸರ ವೇಷದಲ್ಲಿ ಬಂದ ದರೋಡೆಕೋರರು ಹೇಳಿದ್ದಾರೆ. ಇದನ್ನು ಕೇಳಿ ಗಾಬರಿಯಾದ ಕೆಫೆ ಮಾಲೀಕರು ತಮ್ಮ ಮನೆಯನ್ನು ಸರ್ಚ್ ಮಾಡಲು ಅವಕಾಶ ನೀಡಿದ್ದಾರೆ. ಈ ವೇಳೆ ಅವರು 25 ಲಕ್ಷ ರೂ. ಹಣ ದೋಚಿಕೊಂಡು ಹೋಗಿದ್ದಾರೆ ಎಂದು ದೂರು ನೀಡಲಾಗಿದೆ.

ಮುಂಬೈನಲ್ಲಿ ಮೇ 20ರಂದು ಐದನೇ ಹಂತದ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ನಡೆಯಲಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮನೆಗೆ ನುಗ್ಗಿ ಗನ್ ತೋರಿಸಿ 40 ಲಕ್ಷ ಹಣ ದರೋಡೆ

ಕೆಫೆ ವ್ಯಾಪಾರದಿಂದ ಸಂಗ್ರಹವಾಗಿದ್ದ 25 ಲಕ್ಷ ರೂ. ಹಣ ಮಾತ್ರ ನಮ್ಮ ಮನೆಯಲ್ಲಿದೆ. ಇದು ನನ್ನ ಸ್ವಂತ ದುಡ್ಡು. ಚುನಾವಣೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕೆಫೆ ಮಾಲೀಕರು ದರೋಡೆಕೋರರಿಗೆ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ. ತನಿಖೆಯ ವೇಳೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಅಪರಾಧದಲ್ಲಿ ನಿವೃತ್ತ ಪೊಲೀಸ್ ಪೇದೆ ಮತ್ತು ಪೊಲೀಸ್ ಮೋಟಾರು ಸಾರಿಗೆ ಇಲಾಖೆಯ ಸಿಬ್ಬಂದಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ