AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲಾಸ್​ರೂಂನಲ್ಲಿ ರಕ್ತದೋಕುಳಿ; ಟೀಚರ್​ಗೆ ಚಾಕುವಿನಿಂದ ಚುಚ್ಚಿ ಕೊಂದ ವಿದ್ಯಾರ್ಥಿ

ಅಸ್ಸಾಂನ ಶಿವಸಾಗರ್‌ನಲ್ಲಿರುವ ಕೋಚಿಂಗ್ ಸೆಂಟರ್‌ನಲ್ಲಿ 16 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನಿಗೆ ಕ್ಲಾಸ್​ ರೂಂನಲ್ಲೇ ಇರಿದು ಕೊಂದಿರುವ ಭಯಾನಕ ಘಟನೆ ನಡೆದಿದೆ. ಇಂದು ತರಗತಿ ನಡೆದ ಬಳಿಕ ಈ ಕೊಲೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕ್ಲಾಸ್​ರೂಂನಲ್ಲಿ ರಕ್ತದೋಕುಳಿ; ಟೀಚರ್​ಗೆ ಚಾಕುವಿನಿಂದ ಚುಚ್ಚಿ ಕೊಂದ ವಿದ್ಯಾರ್ಥಿ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Jul 06, 2024 | 10:07 PM

Share

ನವದೆಹಲಿ: ತನ್ನನ್ನು ಬೈದಿದ್ದಕ್ಕೆ ಕೋಪಗೊಂಡ ವಿದ್ಯಾರ್ಥಿ ಕ್ಲಾಸ್​ ರೂಂನಲ್ಲೇ ತನ್ನ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದಿರುವ ಆಘಾತಕಾರಿ ಘಟನೆ ಅಸ್ಸಾಂನಲ್ಲಿ ನಡೆದಿದೆ. ಕೊಲೆ ಮಾಡಿದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿಯನ್ನು ಶಿವಸಾಗರದ ಸ್ಥಳೀಯ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಪೊಲೀಸರ ಪ್ರಕಾರ, ಕೊಲೆಗೀಡಾದ ಶಿಕ್ಷಕ ಪ್ರಥಮ ಪಿಯುಸಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಯನ್ನು ಹಿಂದಿನ ದಿನ ಯಾವುದೋ ವಿಷಯಕ್ಕೆ ಗದರಿಸಿದ್ದರು.

ಇದೇ ಕಾರಣಕ್ಕೆ ಆ ಶಿಕ್ಷಕನನ್ನು ವಿದ್ಯಾರ್ಥಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ಚಾಕು ಇರಿತದ ಘಟನೆಯ ಮಾಹಿತಿ ಪಡೆದ ನಾವು ಕೋಚಿಂಗ್ ಸೆಂಟರ್ ತಲುಪಿದ್ದೇವೆ. ಪ್ರಾಥಮಿಕ ಮಾಹಿತಿ ಪ್ರಕಾರ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕರಿಗೆ ಚಾಕುವಿನಿಂದ ಇರಿದಿದ್ದಾನೆ. ತರಗತಿಯಲ್ಲಿ ರಕ್ತ ತುಂಬಿತ್ತು. ಅಲ್ಲಿ ಚಾಕು ಕೂಡ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Triple Murder: ಕಸದ ರಾಶಿಯಲ್ಲಿದ್ದ ಟಿಕೆಟ್​ನಿಂದ ತ್ರಿವಳಿ ಕೊಲೆಯ ಸುಳಿವು; ಭೀಕರ ಹತ್ಯೆ ಹಿಂದೆ ಲವ್ ಸ್ಟೋರಿ

ಚಾಕು ಇರಿತದಿಂದ ಗಂಭೀರ ಸ್ಥಿತಿಯಲ್ಲಿದ್ದ ಶಿಕ್ಷಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಲ್ಲಿ ಅವರು ಸಾವನ್ನಪ್ಪಿದ್ದಾರೆ. ಈ ಘಟನೆ ದಿನದ ಕೊನೆಯ ಪಿರಿಯಡ್​ನಲ್ಲಿ ಸಂಭವಿಸಿದೆ ಎಂದು ಅಧಿಕಾರಿ ಹೇಳಿದರು. ಅಷ್ಟರಲ್ಲಾಗಲೇ ಇತರ ಶಿಕ್ಷಕರು ಮನೆಗೆ ತೆರಳಿದ್ದರು.

ನಾವು ವಿದ್ಯಾರ್ಥಿಯನ್ನು ವಶಕ್ಕೆ ತೆಗೆದುಕೊಂಡು ಬಂದಿದ್ದೇವೆ. ಈ ಘಟನೆಗೆ ಕಾರಣವೇನು ಎಂಬುದು ನಮಗೆ ಇನ್ನೂ ತಿಳಿದಿಲ್ಲ. ನಾವು ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸುವ ಪ್ರಕ್ರಿಯೆಯಲ್ಲಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಹಿಂದಿನ ದಿನ ಯಾವುದೋ ವಿಷಯಕ್ಕೆ ಶಿಕ್ಷಕರು ಆತನಿಗೆ ಗದರಿಸಿದ್ದರು ಎಂದು ಆರೋಪಿಯ ಸಹಪಾಠಿಯೊಬ್ಬರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್