AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಸೆಕ್ಯುರಿಟಿಯನ್ನು ಕೊಂದು ಪರಾರಿಯಾದ ಜೀವಾವಧಿ ಶಿಕ್ಷೆಗೊಳಗಾಗಿದ್ದ ಅತ್ಯಾಚಾರಿ

Crime News: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಅತ್ಯಾಚಾರ ಆರೋಪಿ ಜಾರ್ಖಂಡ್ ಪೊಲೀಸರನ್ನು ಯಾಮಾರಿಸಿ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದಾನೆ. ಬಳಿಕ ಭದ್ರತಾ ಸಿಬ್ಬಂದಿಯನ್ನು ಕೊಂದು ಪರಾರಿಯಾಗಿದ್ದಾನೆ. ಆಸ್ಪತ್ರೆಯಿಂದ ಪರಾರಿಯಾಗಿರುವ ಕೈದಿ ಶಾಹಿದ್ ಅನ್ಸಾರಿಯನ್ನು ಸೆರೆಹಿಡಿಯಲು ಶೋಧ ಕಾರ್ಯ ನಡೆಯುತ್ತಿದೆ.

Shocking News: ಸೆಕ್ಯುರಿಟಿಯನ್ನು ಕೊಂದು ಪರಾರಿಯಾದ ಜೀವಾವಧಿ ಶಿಕ್ಷೆಗೊಳಗಾಗಿದ್ದ ಅತ್ಯಾಚಾರಿ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Aug 12, 2024 | 9:00 PM

Share

ರಾಂಚಿ: ಜಾರ್ಖಂಡ್‌ನ ಹಜಾರಿಬಾಗ್‌ನ ಆಸ್ಪತ್ರೆಯೊಂದರಲ್ಲಿ ಭದ್ರತಾ ಸಿಬ್ಬಂದಿಯನ್ನು ಕೊಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಯೊಬ್ಬ ಪೊಲೀಸ್ ಕಸ್ಟಡಿಯಿಂದ ಪರಾರಿಯಾಗಿದ್ದಾನೆ. ಆರೋಪಿ ಶಾಹಿದ್ ಅನ್ಸಾರಿ ಚಿಕಿತ್ಸೆ ಪಡೆಯುತ್ತಿದ್ದ ಶೇಖ್ ಭಿಖಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.

ಕಬ್ಬಿಣದ ರಾಡ್‌ ಹಿಡಿದುಕೊಂಡು ಪರಾರಿಯಾಗಲು ಪ್ರಯತ್ನಿಸಿದ್ದ ಶಾಹಿದ್ ಅನ್ಸಾರಿ ಘಟನಾ ಸ್ಥಳದಿಂದ ಪರಾರಿಯಾಗುವ ಮೊದಲು ಸಿಬ್ಬಂದಿ ಮೇಲೆ ದಾಳಿ ಮಾಡಿ ಕೊಂದಿದ್ದಾನೆ. ಹಜಾರಿಬಾಗ್ ಪೊಲೀಸ್ ವರಿಷ್ಠಾಧಿಕಾರಿ ಅರವಿಂದ್ ಕುಮಾರ್ ಸಿಂಗ್, ಉಪ ವಿಭಾಗಾಧಿಕಾರಿ (SDO) ಮತ್ತು ಇತರ ಅಧಿಕಾರಿಗಳು ತನಿಖೆಯ ಮೇಲ್ವಿಚಾರಣೆಗಾಗಿ ಆಸ್ಪತ್ರೆಗೆ ತಲುಪಿದರು. ಸಹಾಯಕ್ಕಾಗಿ ಫೋರೆನ್ಸಿಕ್ ತಂಡಗಳನ್ನು ಕರೆಯಲಾಗಿದೆ ಮತ್ತು ಪರಾರಿಯಾದವರನ್ನು ಹಿಡಿಯಲು ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ದೆಹಲಿ ಕೋರ್ಟ್​ ಆವರಣದಲ್ಲಿ ವಕೀಲರಿಂದ ಯುವತಿ ಮೇಲೆ ಅತ್ಯಾಚಾರ, ಪ್ರಕರಣ ದಾಖಲು

ಧನಬಾದ್ ಮೂಲದ ಶಾಹಿದ್ ಅನ್ಸಾರಿಯನ್ನು ಧನಬಾದ್ ಜೈಲಿನಿಂದ ಹಜಾರಿಬಾಗ್ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಲಾಗಿತ್ತು. ಈತ ಧನಬಾದ್‌ನಲ್ಲಿ ಎರಡು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಒಂದು ಪ್ರಕರಣದಲ್ಲಿ, ಆತನ ಮೇಲೆ ಅತ್ಯಾಚಾರ ಮತ್ತು ಪೋಕ್ಸೊ ಕಾಯ್ದೆ ಸೇರಿದಂತೆ ಹಲವಾರು ಗಂಭೀರ ಅಪರಾಧಗಳ ಆರೋಪ ಹೊರಿಸಲಾಗಿದ್ದು, ಇನ್ನೊಂದು ಪ್ರಕರಣದಲ್ಲಿ ಕೊಲೆ ಮತ್ತು ಇತರ ಗಂಭೀರ ಅಪರಾಧಗಳ ಆರೋಪ ಹೊರಿಸಲಾಗಿತ್ತು. ನ್ಯಾಯಾಲಯ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಇದನ್ನೂ ಓದಿ: 3 ವರ್ಷದ ಬಾಲಕಿ ಮೇಲೆ ನರ್ಸರಿ ಸ್ಕೂಲ್ ವ್ಯಾನ್ ಚಾಲಕನಿಂದ ಅತ್ಯಾಚಾರ!

ಕಳೆದ 14 ದಿನಗಳಿಂದ ಅನ್ಸಾರಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆತನ ದೇಹದ ಬಲಭಾಗದಲ್ಲಿ ಮರಗಟ್ಟುವಿಕೆ ಉಂಟಾಗಿದ್ದರಿಂದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತ ದಾಖಲಾಗಿದ್ದ ವೈದ್ಯಕೀಯ ಕಾಲೇಜಿನ ಸಿಸಿಟಿವಿ ದೃಶ್ಯಾವಳಿಯಲ್ಲಿ ಅನ್ಸಾರಿ ಅಪರಾಧ ಎಸಗಿ ಆವರಣದಿಂದ ಓಡಿ ಹೋಗುತ್ತಿರುವುದನ್ನು ನೋಡಬಹುದು.

ಆತ ಪರಾರಿಯಾಗುವ ಸಮಯದಲ್ಲಿ ಯಾವುದೇ ಭದ್ರತಾ ಸಿಬ್ಬಂದಿ ಆಸ್ಪತ್ರೆಯ ಹೊರಗೆ ನಿಂತಿರಲಿಲ್ಲ. ಪೊಲೀಸ್ ಅಧಿಕಾರಿಗಳು ತಮ್ಮ ತನಿಖೆಯನ್ನು ಮುಂದುವರೆಸಿದ್ದು, ಶಾಹಿದ್ ಅನ್ಸಾರಿಯನ್ನು ಸೆರೆಹಿಡಿಯುವ ಪ್ರಯತ್ನಗಳು ಮುಂದುವರೆದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ