AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: 5 ವರ್ಷದ ಮಗಳಿಗೆ ತಂದೆಯಿಂದಲೇ ಲೈಂಗಿಕ ಕಿರುಕುಳ

ಹೆಣ್ಣುಮಕ್ಕಳಿಗೆ ತಮ್ಮ ತಂದೆಯೇ ಮೊದಲ ಹೀರೋ. ತಮ್ಮ ತಂದೆಯ ನೆರಳಿನಲ್ಲೇ ಬೆಳೆಯುವ ಮಕ್ಕಳು ತಾವು ಅಪ್ಪನ ಜೊತೆಗಿದ್ದರೆ ಸುರಕ್ಷಿತವಾಗಿರುತ್ತೇವೆ ಎಂಬ ಭದ್ರತೆಯನ್ನು ಅನುಭವಿಸುತ್ತಾರೆ. ಆದರೆ, ಇಲ್ಲೊಬ್ಬ ತಂದೆ ತನ್ನ 5 ವರ್ಷದ ಪುಟ್ಟ ಹೆಣ್ಣು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ.

Crime News: 5 ವರ್ಷದ ಮಗಳಿಗೆ ತಂದೆಯಿಂದಲೇ ಲೈಂಗಿಕ ಕಿರುಕುಳ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Sep 05, 2024 | 3:50 PM

Share

ಚೆನ್ನೈ: ಹುಡುಗಿಯರು ತಮ್ಮ ತಂದೆಯೊಂದಿಗೆ ಪ್ರೀತಿಯ ಸಂಬಂಧವನ್ನು ಹೊಂದಿರುತ್ತಾರೆ. ಏನೇ ಸಮಸ್ಯೆಯಾದರೂ ಅದನ್ನು ಹೆಣ್ಣುಮಕ್ಕಳು ಧೈರ್ಯದಿಂದ ತಂದೆಯ ಬಳಿ ಹೇಳಿಕೊಳ್ಳುತ್ತಾರೆ. ಕೆಲವು ಸಂದರ್ಭಗಳಲ್ಲಿ, ತಾಯಿ ಮಕ್ಕಳಿಗೆ ಅನುಮತಿ ನೀಡದಿದ್ದರೂ, ಹೆಣ್ಣು ಮಗು ತಂದೆಯ ಮನವೊಲಿಸಿ ತನಗೆ ಬೇಕಾದ್ದನ್ನು ಗಿಟ್ಟಿಸಿಕೊಳ್ಳುತ್ತದೆ. ಆದರೆ, ತಂದೆಯ ನಡವಳಿಕೆಯೇ ಸರಿಯಿಲ್ಲದಿದ್ದರೆ ಆ ಮಗುವಿಗೆ ರಕ್ಷಣೆ ನೀಡುವವರು ಯಾರು? ಚೆನ್ನೈನಲ್ಲಿ 5 ವರ್ಷದ ತನ್ನ ಹೆಣ್ಣು ಮಗುವಿಗೆ ಅಪ್ಪನೇ ಲೈಂಗಿಕ ಕಿರುಕುಳ ನೀಡಿದ್ದಾನೆ.

ಚೆನ್ನೈನಲ್ಲಿ ತನ್ನ 5 ವರ್ಷದ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ತಂದೆಯನ್ನು ಪೋಕ್ಸೋ ಅಡಿಯಲ್ಲಿ ಬಂಧಿಸಲಾಗಿದೆ. ಇಂದಿನ ಯುಗದಲ್ಲಿ ಹೆತ್ತ ತಂದೆಯನ್ನು ಕೂಡ ಕುರುಡಾಗಿ ನಂಬದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ತಂದೆ, ಚಿಕ್ಕಪ್ಪ, ದೊಡ್ಡಪ್ಪ, ಹತ್ತಿರದ ಬಂಧುಗಳು, ಸಹೋದರನಿಂದಲೂ ಹೆಣ್ಣು ಮಕ್ಕಳು ಲೈಂಗಿಕ ಕಿರುಕುಳ ಅನುಭವಿಸುತ್ತಿದ್ದಾರೆ.

ಇದನ್ನೂ ಓದಿ: ಮಹಿಳೆಯ ಮೇಲೆ ಅತ್ಯಾಚಾರ, ಬೆತ್ತಲೆಯಾಗಿ ಡ್ಯಾನ್ಸ್ ಮಾಡಿಸಿದ ಕಾಮುಕರು

ಈ ಮೂಲಕ ಕಳೆದ 6 ತಿಂಗಳಿಂದ ಚೆನ್ನೈನ ತಾಂಬರಂನಲ್ಲಿ ತಂದೆ ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಘಟನೆ ಭಾರೀ ಆಘಾತವನ್ನುಂಟು ಮಾಡಿದೆ. ಪಶ್ಚಿಮ ತಾಂಬರಂನ ಪಟೇಲ್ ನಗರದ ನಿವಾಸಿ ಸೌಂದರರಾಜನ್ (37) ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದು, ಮದುವೆಯಾಗಿ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇದರಲ್ಲಿ 7 ವರ್ಷದ ಹಿರಿಯ ಮಗಳು ತಾಂಬರಂ ಮುನ್ಸಿಪಲ್ ಕಾರ್ಪೊರೇಷನ್ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ಮತ್ತು 5 ವರ್ಷದ ಕಿರಿಯ ಮಗಳು ಅದೇ ಶಾಲೆಯಲ್ಲಿ ಒಂದನೇ ತರಗತಿ ಓದುತ್ತಿದ್ದಾಳೆ.

1ನೇ ಕ್ಲಾಸ್ ಓದುತ್ತಿರುವ ಮಗಳ ಮೇಲೆ ತಂದೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕೆಲವು ದಿನಗಳ ಹಿಂದೆ ಕಿರಿಯ ಮಗಳನ್ನು ಸ್ನಾನಕ್ಕೆ ಕರೆದುಕೊಂಡು ಹೋಗುವಾಗ ಸೌಂದರರಾಜನ್ ತಪ್ಪು ಮಾಡುತ್ತಿದ್ದುದನ್ನು ಕಂಡು ಗಾಬರಿಗೊಂಡ ತಾಯಿ, ಅನುಮಾನಗೊಂಡು ಮಗಳನ್ನು ವಿಚಾರಿಸಿದ್ದಾರೆ.

ಇದನ್ನೂ ಓದಿ: Shocking News: ಅಮ್ಮನ ಪಕ್ಕ ಮಲಗಿದ್ದ ಮಗುವಿಗೆ ಕಚ್ಚಿದ ಹಾವು; ಮೂಢನಂಬಿಕೆಯಿಂದ ಶಿಶುವಿನ ಸಾವು

ಈ ವೇಳೆ ಆ ಮಗಳು ತನ್ನ ತಂದೆ ತನ್ನೊಂದಿಗೆ ಕೆಟ್ಟದಾಗಿ ವರ್ತಿಸುತ್ತಾರೆ ಎಂದು ಹೇಳಿಕೊಂಡಿದ್ದಾಳೆ. ಬಳಿಕ ಬಾಲಕಿಯ ತಾಯಿ ತಾಂಬರಂ ಎಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಪರಾರಿಯಾಗಿದ್ದ ಸೌಂದರರಾಜನನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿ ಜೈಲಿಗಟ್ಟಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?