AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಮೇಲೆ ಬಾಲ್ಯ ಸ್ನೇಹಿತರಿಂದ ಸಾಮೂಹಿಕ ಅತ್ಯಾಚಾರ

ಹೈದರಾಬಾದ್​ನಲ್ಲಿ ಸಾಫ್ಟ್​ವೇರ್ ಇಂಜಿನಿಯರ್ ಆಗಿರುವ ಯುವತಿಯ ಮೇಲೆ ಆಕೆಯ ಬಾಲ್ಯ ಸ್ನೇಹಿತ ಮತ್ತು ಆತನ ಕಸಿನ್ ಅತ್ಯಾಚಾರ ನಡೆಸಿದ್ದಾರೆ. ಶಾಲೆಯಲ್ಲಿ ತನ್ನ ಸಹಪಾಠಿಯಾಗಿದ್ದ ಸ್ನೇಹಿತ ಮತ್ತು ಆತನ ಸೋದರಸಂಬಂಧಿ ಕುಡಿದ ಅಮಲಿನಲ್ಲಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ.

ಹೈದರಾಬಾದ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಮೇಲೆ ಬಾಲ್ಯ ಸ್ನೇಹಿತರಿಂದ ಸಾಮೂಹಿಕ ಅತ್ಯಾಚಾರ
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Jul 30, 2024 | 8:35 PM

ಹೈದರಾಬಾದ್: ಹೈದರಾಬಾದ್​ನಲ್ಲಿ ಭೀಕರ ಘಟನೆಯೊಂದು ನಡೆದಿದ್ದು, 24 ವರ್ಷದ ಯುವತಿಯ ಮೇಲೆ ಆಕೆಯ ಬಾಲ್ಯದ ಸ್ನೇಹಿತ ಮತ್ತು ಆತನ ಸೋದರ ಸಂಬಂಧಿ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೈದರಾಬಾದ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯ ಮೇಲೆ ಮದ್ಯದ ಅಮಲಿನಲ್ಲಿ ರೆಸ್ಟೋರೆಂಟ್ ರೂಂನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.

ಟೆಕ್ಕಿ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಸೋಮವಾರ ರಾತ್ರಿ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದಿದ್ದಾಳೆ. ಹೊಸ ಕೆಲಸ ಸಿಕ್ಕಿದ್ದರಿಂದ ಬಾಲ್ಯದ ಗೆಳೆಯ ಹಾಗೂ ಶಾಲೆಯಲ್ಲಿ ತನ್ನ ಸಹಪಾಠಿಯಾಗಿದ್ದ ಯುವಕನ ಜೊತೆ ಸಂಭ್ರಮ ಆಚರಿಸಲು ಬಯಸಿದ್ದ ಆಕೆ ಪಾರ್ಟಿಯೊಂದನ್ನು ಆಯೋಜಿಸಿದ್ದಳು. ಆಕೆ ಹೇಳಿದ ರೆಸ್ಟೋರೆಂಟ್​ಗೆ ತನ್ನ ಕಸಿನ್ ಜೊತೆ ಬಂದಿದ್ದ ಆಕೆಯ ಗೆಳೆಯ ಮದ್ಯದ ಅಮಲಿನಲ್ಲಿ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಆಕೆ ಆರೋಪಿಸಿದ್ದಾಳೆ.

ಇದನ್ನೂ ಓದಿ: Crime News: ಚಲಿಸುತ್ತಿದ್ದ ಕಾರಿನಲ್ಲಿ 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಆಕೆಯ ಅಪ್ಪನಿಗೆ ವಿಡಿಯೋ ಕಳಿಸಿ ಬ್ಲಾಕ್​ಮೇಲ್

ವನಸ್ಥಲಿಪುರಂನಲ್ಲಿರುವ ರೆಸ್ಟೋರೆಂಟ್ ಕಮ್-ಬಾರ್‌ಗೆ ಅವರು ತೆರಳಿದ್ದರು. ಮೂವರೂ ರೆಸ್ಟೋರೆಂಟ್‌ನಲ್ಲಿ ಮದ್ಯ ಸೇವಿಸಿದ್ದಾರೆ. ನಂತರ ಆ ವ್ಯಕ್ತಿ ಅವಳನ್ನು ರೆಸ್ಟೋರೆಂಟ್ ಆವರಣದಲ್ಲಿರುವ ಕೋಣೆಗೆ ಕರೆದೊಯ್ದಿದ್ದಾನೆ. ಕುಡಿದ ಮತ್ತಿನಲ್ಲಿದ್ದ ತನ್ನ ಸ್ನೇಹಿತ ಆ ಕೋಣೆಯೊಳಗೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ. ಇದಲ್ಲದೆ, ಆತನ ಸೋದರಸಂಬಂಧಿ ನಂತರ ಕೋಣೆಗೆ ನುಗ್ಗಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ವ್ಯಕ್ತಿಯ ಕುತ್ತಿಗೆಗೆ ಸುತ್ತಿಕೊಂಡು ನುಂಗಲೆತ್ನಿಸಿದ 15 ಅಡಿ ಉದ್ದದ ಹೆಬ್ಬಾವು; ಶಾಕಿಂಗ್ ವಿಡಿಯೋ ವೈರಲ್

ಇದರಿಂದ ಆಘಾತಗೊಂಡ ಆಕೆ ರೂಂನಿಂದ ಹೊರಬಂದ ನಂತರ ತನ್ನ ಸಹೋದರನಿಗೆ ಕರೆ ಮಾಡಿ ಅಈ ವಿಷಯದ ಬಗ್ಗೆ ತಿಳಿಸಿದಳು. ಮಹಿಳೆಯ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ನಡುವೆ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!