AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಮೇಲೆ ಬಾಲ್ಯ ಸ್ನೇಹಿತರಿಂದ ಸಾಮೂಹಿಕ ಅತ್ಯಾಚಾರ

ಹೈದರಾಬಾದ್​ನಲ್ಲಿ ಸಾಫ್ಟ್​ವೇರ್ ಇಂಜಿನಿಯರ್ ಆಗಿರುವ ಯುವತಿಯ ಮೇಲೆ ಆಕೆಯ ಬಾಲ್ಯ ಸ್ನೇಹಿತ ಮತ್ತು ಆತನ ಕಸಿನ್ ಅತ್ಯಾಚಾರ ನಡೆಸಿದ್ದಾರೆ. ಶಾಲೆಯಲ್ಲಿ ತನ್ನ ಸಹಪಾಠಿಯಾಗಿದ್ದ ಸ್ನೇಹಿತ ಮತ್ತು ಆತನ ಸೋದರಸಂಬಂಧಿ ಕುಡಿದ ಅಮಲಿನಲ್ಲಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ.

ಹೈದರಾಬಾದ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಮೇಲೆ ಬಾಲ್ಯ ಸ್ನೇಹಿತರಿಂದ ಸಾಮೂಹಿಕ ಅತ್ಯಾಚಾರ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Jul 30, 2024 | 8:35 PM

Share

ಹೈದರಾಬಾದ್: ಹೈದರಾಬಾದ್​ನಲ್ಲಿ ಭೀಕರ ಘಟನೆಯೊಂದು ನಡೆದಿದ್ದು, 24 ವರ್ಷದ ಯುವತಿಯ ಮೇಲೆ ಆಕೆಯ ಬಾಲ್ಯದ ಸ್ನೇಹಿತ ಮತ್ತು ಆತನ ಸೋದರ ಸಂಬಂಧಿ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೈದರಾಬಾದ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯ ಮೇಲೆ ಮದ್ಯದ ಅಮಲಿನಲ್ಲಿ ರೆಸ್ಟೋರೆಂಟ್ ರೂಂನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.

ಟೆಕ್ಕಿ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಸೋಮವಾರ ರಾತ್ರಿ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದಿದ್ದಾಳೆ. ಹೊಸ ಕೆಲಸ ಸಿಕ್ಕಿದ್ದರಿಂದ ಬಾಲ್ಯದ ಗೆಳೆಯ ಹಾಗೂ ಶಾಲೆಯಲ್ಲಿ ತನ್ನ ಸಹಪಾಠಿಯಾಗಿದ್ದ ಯುವಕನ ಜೊತೆ ಸಂಭ್ರಮ ಆಚರಿಸಲು ಬಯಸಿದ್ದ ಆಕೆ ಪಾರ್ಟಿಯೊಂದನ್ನು ಆಯೋಜಿಸಿದ್ದಳು. ಆಕೆ ಹೇಳಿದ ರೆಸ್ಟೋರೆಂಟ್​ಗೆ ತನ್ನ ಕಸಿನ್ ಜೊತೆ ಬಂದಿದ್ದ ಆಕೆಯ ಗೆಳೆಯ ಮದ್ಯದ ಅಮಲಿನಲ್ಲಿ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಆಕೆ ಆರೋಪಿಸಿದ್ದಾಳೆ.

ಇದನ್ನೂ ಓದಿ: Crime News: ಚಲಿಸುತ್ತಿದ್ದ ಕಾರಿನಲ್ಲಿ 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಆಕೆಯ ಅಪ್ಪನಿಗೆ ವಿಡಿಯೋ ಕಳಿಸಿ ಬ್ಲಾಕ್​ಮೇಲ್

ವನಸ್ಥಲಿಪುರಂನಲ್ಲಿರುವ ರೆಸ್ಟೋರೆಂಟ್ ಕಮ್-ಬಾರ್‌ಗೆ ಅವರು ತೆರಳಿದ್ದರು. ಮೂವರೂ ರೆಸ್ಟೋರೆಂಟ್‌ನಲ್ಲಿ ಮದ್ಯ ಸೇವಿಸಿದ್ದಾರೆ. ನಂತರ ಆ ವ್ಯಕ್ತಿ ಅವಳನ್ನು ರೆಸ್ಟೋರೆಂಟ್ ಆವರಣದಲ್ಲಿರುವ ಕೋಣೆಗೆ ಕರೆದೊಯ್ದಿದ್ದಾನೆ. ಕುಡಿದ ಮತ್ತಿನಲ್ಲಿದ್ದ ತನ್ನ ಸ್ನೇಹಿತ ಆ ಕೋಣೆಯೊಳಗೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ. ಇದಲ್ಲದೆ, ಆತನ ಸೋದರಸಂಬಂಧಿ ನಂತರ ಕೋಣೆಗೆ ನುಗ್ಗಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ವ್ಯಕ್ತಿಯ ಕುತ್ತಿಗೆಗೆ ಸುತ್ತಿಕೊಂಡು ನುಂಗಲೆತ್ನಿಸಿದ 15 ಅಡಿ ಉದ್ದದ ಹೆಬ್ಬಾವು; ಶಾಕಿಂಗ್ ವಿಡಿಯೋ ವೈರಲ್

ಇದರಿಂದ ಆಘಾತಗೊಂಡ ಆಕೆ ರೂಂನಿಂದ ಹೊರಬಂದ ನಂತರ ತನ್ನ ಸಹೋದರನಿಗೆ ಕರೆ ಮಾಡಿ ಅಈ ವಿಷಯದ ಬಗ್ಗೆ ತಿಳಿಸಿದಳು. ಮಹಿಳೆಯ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ನಡುವೆ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್