AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಹಣಕ್ಕಾಗಿ ವಾಗ್ವಾದ; ತಾಯಿಯ ತಲೆ ಕತ್ತರಿಸಿ ಕೊಂದ ಮಗ

ತ್ರಿಪುರದಲ್ಲಿ ಅತ್ಯಂತ ಆಘಾತಕಾರಿ ಘಟನೆಯೊಂದು ನಡೆದಿದ್ದು, ಅಮ್ಮ- ಮಗನ ನಡುವೆ ಹಣದ ವಿಷಯಕ್ಕೆ ವಾಗ್ವಾದ ನಡೆದಿದೆ. ಈ ವೇಳೆ ಗಲಾಟೆ ಹೆಚ್ಚಾಗಿ ವಿವಾದದ ನಂತರ ಯುವಕ ತನ್ನ ತಾಯಿಯ ತಲೆ ಕತ್ತರಿಸಿರುವ ಭಯಾನಕ ಘಟನೆ ನಡೆದಿದೆ. ಆ ಯುವಕನನ್ನು ಬಂಧಿಸಲಾಗಿದೆ.

Crime News: ಹಣಕ್ಕಾಗಿ ವಾಗ್ವಾದ; ತಾಯಿಯ ತಲೆ ಕತ್ತರಿಸಿ ಕೊಂದ ಮಗ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on:Jul 19, 2024 | 5:57 PM

Share

ತ್ರಿಪುರ: ಆಘಾತಕಾರಿ ಘಟನೆಯೊಂದರಲ್ಲಿ ಹಣದ ವಿವಾದದ ಹಿನ್ನೆಲೆಯಲ್ಲಿ ತ್ರಿಪುರದ ಖೋವೈ ಜಿಲ್ಲೆಯ ರತನ್‌ಪುರದಲ್ಲಿ 24 ವರ್ಷದ ಯುವಕನೊಬ್ಬ ತನ್ನ 55 ವರ್ಷದ ತಾಯಿಯ ತಲೆಯನ್ನು ಕತ್ತರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆ ಮಹಿಳೆಯ ಕುಟುಂಬಸ್ಥರು ನೀಡಿದ ದೂರಿನ ಆಧಾರದಲ್ಲಿ ಆಕೆಯನ್ನು ಬಂಧಿಸಲಾಗಿದೆ.

ಪೊಲೀಸ್ ಅಧಿಕಾರಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದು, ಹರಿಚರಣ್ ಝರಾ ತನ್ನ ತಾಯಿ ಪರ್ಬತಿ ಝರಾ ಅವರ ಬಳಿ ಹಣ ಕೇಳಿದ್ದರು. ಅದು ಇಬ್ಬರ ನಡುವೆ ಜಗಳಕ್ಕೆ ಕಾರಣವಾಯಿತು. ಅದೇ ಜಗಳದಿಂದಾಗಿ ಆತ ತಾಯಿಯ ಶಿರಚ್ಛೇದ ಮಾಡಿದ್ದಾನೆ ಎಂದಿದ್ದಾರೆ.

ಇದನ್ನೂ ಓದಿ: ಹೆತ್ತ ತಾಯಿಯನ್ನೇ ಕೊಂದು ನೇಣು ಹಾಕಿದ ಮಕ್ಕಳು; ಆ ಒಂದು ತಪ್ಪಿನಿಂದ ಕೊಲೆ ಬಯಲು 

ಮಂಗಳವಾರ ತಡರಾತ್ರಿ ಹರಿಚರಣ್ ಪರ್ಬತಿಯ ತಲೆಯ ಮೇಲೆ ಚೂಪಾದ ಆಯುಧದಿಂದ ಹೊಡೆದು ಕತ್ತರಿಸಿದ್ದಾನೆ ಎಂದು ಹೇಳಲಾಗಿದೆ. ನಾವು ಹರಿಚರಣ್‌ನನ್ನು ಹತ್ಯೆಗೈದ ಆಯುಧದೊಂದಿಗೆ ಬಂಧಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಆ ಮನೆಯಲ್ಲಿ ರಕ್ತದ ಮಡುವಿನಲ್ಲಿ ಪಾರ್ಬತಿ ಅವರ ಶವ ಪತ್ತೆಯಾಗಿದೆ. ಫೋರೆನ್ಸಿಕ್ ತಂಡವು ಸ್ಥಳಕ್ಕೆ ಭೇಟಿ ನೀಡಿದ್ದು, ಅಪರಾಧ ನಡೆದ ಸ್ಥಳದಿಂದ ಮಾದರಿಗಳನ್ನು ಸಂಗ್ರಹಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:29 pm, Fri, 19 July 24

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More