AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಹಣಕ್ಕಾಗಿ ವಾಗ್ವಾದ; ತಾಯಿಯ ತಲೆ ಕತ್ತರಿಸಿ ಕೊಂದ ಮಗ

ತ್ರಿಪುರದಲ್ಲಿ ಅತ್ಯಂತ ಆಘಾತಕಾರಿ ಘಟನೆಯೊಂದು ನಡೆದಿದ್ದು, ಅಮ್ಮ- ಮಗನ ನಡುವೆ ಹಣದ ವಿಷಯಕ್ಕೆ ವಾಗ್ವಾದ ನಡೆದಿದೆ. ಈ ವೇಳೆ ಗಲಾಟೆ ಹೆಚ್ಚಾಗಿ ವಿವಾದದ ನಂತರ ಯುವಕ ತನ್ನ ತಾಯಿಯ ತಲೆ ಕತ್ತರಿಸಿರುವ ಭಯಾನಕ ಘಟನೆ ನಡೆದಿದೆ. ಆ ಯುವಕನನ್ನು ಬಂಧಿಸಲಾಗಿದೆ.

Crime News: ಹಣಕ್ಕಾಗಿ ವಾಗ್ವಾದ; ತಾಯಿಯ ತಲೆ ಕತ್ತರಿಸಿ ಕೊಂದ ಮಗ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on:Jul 19, 2024 | 5:57 PM

Share

ತ್ರಿಪುರ: ಆಘಾತಕಾರಿ ಘಟನೆಯೊಂದರಲ್ಲಿ ಹಣದ ವಿವಾದದ ಹಿನ್ನೆಲೆಯಲ್ಲಿ ತ್ರಿಪುರದ ಖೋವೈ ಜಿಲ್ಲೆಯ ರತನ್‌ಪುರದಲ್ಲಿ 24 ವರ್ಷದ ಯುವಕನೊಬ್ಬ ತನ್ನ 55 ವರ್ಷದ ತಾಯಿಯ ತಲೆಯನ್ನು ಕತ್ತರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆ ಮಹಿಳೆಯ ಕುಟುಂಬಸ್ಥರು ನೀಡಿದ ದೂರಿನ ಆಧಾರದಲ್ಲಿ ಆಕೆಯನ್ನು ಬಂಧಿಸಲಾಗಿದೆ.

ಪೊಲೀಸ್ ಅಧಿಕಾರಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದು, ಹರಿಚರಣ್ ಝರಾ ತನ್ನ ತಾಯಿ ಪರ್ಬತಿ ಝರಾ ಅವರ ಬಳಿ ಹಣ ಕೇಳಿದ್ದರು. ಅದು ಇಬ್ಬರ ನಡುವೆ ಜಗಳಕ್ಕೆ ಕಾರಣವಾಯಿತು. ಅದೇ ಜಗಳದಿಂದಾಗಿ ಆತ ತಾಯಿಯ ಶಿರಚ್ಛೇದ ಮಾಡಿದ್ದಾನೆ ಎಂದಿದ್ದಾರೆ.

ಇದನ್ನೂ ಓದಿ: ಹೆತ್ತ ತಾಯಿಯನ್ನೇ ಕೊಂದು ನೇಣು ಹಾಕಿದ ಮಕ್ಕಳು; ಆ ಒಂದು ತಪ್ಪಿನಿಂದ ಕೊಲೆ ಬಯಲು 

ಮಂಗಳವಾರ ತಡರಾತ್ರಿ ಹರಿಚರಣ್ ಪರ್ಬತಿಯ ತಲೆಯ ಮೇಲೆ ಚೂಪಾದ ಆಯುಧದಿಂದ ಹೊಡೆದು ಕತ್ತರಿಸಿದ್ದಾನೆ ಎಂದು ಹೇಳಲಾಗಿದೆ. ನಾವು ಹರಿಚರಣ್‌ನನ್ನು ಹತ್ಯೆಗೈದ ಆಯುಧದೊಂದಿಗೆ ಬಂಧಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಆ ಮನೆಯಲ್ಲಿ ರಕ್ತದ ಮಡುವಿನಲ್ಲಿ ಪಾರ್ಬತಿ ಅವರ ಶವ ಪತ್ತೆಯಾಗಿದೆ. ಫೋರೆನ್ಸಿಕ್ ತಂಡವು ಸ್ಥಳಕ್ಕೆ ಭೇಟಿ ನೀಡಿದ್ದು, ಅಪರಾಧ ನಡೆದ ಸ್ಥಳದಿಂದ ಮಾದರಿಗಳನ್ನು ಸಂಗ್ರಹಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:29 pm, Fri, 19 July 24

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?