Shocking News: ಹೆಂಡತಿ ಜೊತೆ ಲೈಂಗಿಕ ಕ್ರಿಯೆ ನಡೆಸಿದ ಗಂಡನಿಗೆ 7 ವರ್ಷ ಜೈಲು ಶಿಕ್ಷೆ!

ಉತ್ತರ ಪ್ರದೇಶದಲ್ಲಿ ಈ ವಿಚಿತ್ರವಾದ ಘಟನೆ ನಡೆದಿದೆ. 2015ರಲ್ಲಿ ತನ್ನ ಅಪ್ರಾಪ್ತ ವಯಸ್ಸಿನ ಪತ್ನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ 30 ವರ್ಷದ ವ್ಯಕ್ತಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಅಷ್ಟಕ್ಕೂ ಏನು ಈ ವಿಚಿತ್ರ ಪ್ರಕರಣ? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

Shocking News: ಹೆಂಡತಿ ಜೊತೆ ಲೈಂಗಿಕ ಕ್ರಿಯೆ ನಡೆಸಿದ ಗಂಡನಿಗೆ 7 ವರ್ಷ ಜೈಲು ಶಿಕ್ಷೆ!
ಸಾಂದರ್ಭಿಕ ಚಿತ್ರ
Follow us
|

Updated on: Jul 08, 2024 | 10:46 PM

ಮೀರತ್: 2015ರಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ (ಈಗ 22 ವರ್ಷ) ಅತ್ಯಾಚಾರ ಎಸಗಿದ 30 ವರ್ಷದ ವ್ಯಕ್ತಿಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಆ ಯುವತಿ 9 ವರ್ಷಗಳ ಹಿಂದೆ ಆತನನ್ನು ಪ್ರೀತಿಸಿ, ಆತನೊಂದಿಗೆ ಓಡಿಹೋಗಿ ವಿವಾಹವಾಗಿದ್ದಳು. ಆಗ ಆಕೆಗೆ ಇನ್ನೂ 18 ವರ್ಷ ತುಂಬಿರಲಿಲ್ಲ. ಮದುವೆಯಾದ ಎರಡು ತಿಂಗಳ ನಂತರ ಆ ಬಾಲಕಿ ತನ್ನ ಪೋಷಕರ ಬಳಿಗೆ ವಾಪಾಸ್ ಹೋಗಿದ್ದಳು. ಆದರೆ ನಂತರ ಮತ್ತೆ ತನ್ನ ಗಂಡನ ಮನೆಗೆ ಮರಳಿದಳು. ಈ ದಂಪತಿಗೆ ಈಗ ಇಬ್ಬರು ಮಕ್ಕಳಿದ್ದು, ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಬರೇಲಿ ವಿಚಾರಣಾ ನ್ಯಾಯಾಲಯದ ಆದೇಶ ಬುಧವಾರ ಪ್ರಕಟವಾಗಿದ್ದು, ವಿಚಿತ್ರವೆಂದರೆ ಈ ದಂಪತಿ ಇದೀಗ ಸುಖ ದಾಂಪತ್ಯ ನಡೆಸುತ್ತಿದ್ದಾರೆ. 9 ವರ್ಷಗಳ ಹಿಂದಿನ ಪ್ರಕರಣದಲ್ಲಿ ಇದೀಗ ತೀರ್ಪು ಪ್ರಕಟವಾಗಿದೆ. ಆಗ ದೂರು ನೀಡಿದ್ದ ಯುವತಿ ಇದೀಗ 3ನೇ ಬಾರಿಗೆ ಗರ್ಭಿಣಿಯಾಗಿದ್ದು, ಈ ಸಮಯದಲ್ಲಿ ಗಂಡ ಜೈಲು ಶಿಕ್ಷೆ ಅನುಭವಿಸಬೇಕೆಂದು ತೀರ್ಪು ಬಂದಿರುವುದರಿಂದ ಆಕೆ ಈ ತೀರ್ಪಿನ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲು ಯೋಜಿಸಿದ್ದಾರೆ.

ಇದನ್ನೂ ಓದಿ: Crime News: ಪ್ರೇಮಿಯ ಮೇಲಿನ ಕೋಪಕ್ಕೆ 7 ವರ್ಷದ ಮಗುವನ್ನು ಗೋಡೆಗೆ ಬಡಿದು ಕೊಲೆ

ಏನಿದು ಘಟನೆ?:

2015ರ ಫೆಬ್ರವರಿಯಲ್ಲಿ ಮನೆಯವರಿಗೆ ಹೇಳದೆ ಓಡಿಹೋದ ನಂತರ ಆ ಹುಡುಗಿ ಮದುವೆಯಾಗಿದ್ದಳು. ನಂತರ ಮೇ 2015ರಲ್ಲಿ ಹಿಂದಿರುಗಿದಳು. ಅದರ ನಂತರ ಆಕೆಯ ತಂದೆ ಬರೇಲಿಯಲ್ಲಿ ತನ್ನ ಅಳಿಯನ ವಿರುದ್ಧ ಅಪಹರಣದ ದೂರು ದಾಖಲಿಸಿದರು. ಐಪಿಸಿ ಸೆಕ್ಷನ್ 363 (ಅಪಹರಣ) ಮತ್ತು 366 (ಅಪಹರಣ, ಅಪಹರಣ ಅಥವಾ ಮಹಿಳೆಯ ಮದುವೆಗೆ ಒತ್ತಾಯಿಸಲು ಪ್ರೇರೇಪಿಸುವುದು ಇತ್ಯಾದಿ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಪೊಲೀಸರು ಅಪ್ರಾಪ್ತ ಬಾಲಕಿಯ ವೈದ್ಯಕೀಯ ಪರೀಕ್ಷೆಯನ್ನು ನಡೆಸಿದರು, ಅದರ ನಂತರ ಸಮಾಲೋಚಕ ವೈದ್ಯರು ಆಕೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಲಾಗಿದೆ ಎಂದು ವರದಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅತ್ಯಾಚಾರದ ಕೇಸ್ ಕೂಡ ದಾಖಲಿಸಲಾಗಿತ್ತು.

ಆಗ ತನಿಖೆಯ ಸಮಯದಲ್ಲಿ, ಪೊಲೀಸರು ಸಿಆರ್‌ಪಿಸಿ ಸೆಕ್ಷನ್ 161ರ ಅಡಿಯಲ್ಲಿ ಅಪ್ರಾಪ್ತ ಬಾಲಕಿಯ ಹೇಳಿಕೆಯನ್ನು ತೆಗೆದುಕೊಂಡರು. ನಂತರ ಪೋಕ್ಸೊ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳು ಮತ್ತು ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಅನ್ನು ಎಫ್‌ಐಆರ್‌ಗೆ ಸೇರಿಸಲಾಗಿತ್ತು. ಆದರೆ, ಮ್ಯಾಜಿಸ್ಟ್ರೇಟ್ ಮುಂದೆ CrPC ಸೆಕ್ಷನ್ 164ರ ಅಡಿಯಲ್ಲಿ ದಾಖಲಿಸಲಾದ ತನ್ನ ಹೇಳಿಕೆಯಲ್ಲಿ ಆ ಹುಡುಗಿ, “ನಾನು ಓಡಿಹೋಗಿ ಮದುವೆಯಾಗಿದ್ದೇನೆ ಮತ್ತು ನನ್ನ ಸ್ವಂತ ಇಚ್ಛೆಯ ಮೇರೆಗೆ ಮದುವೆಯಾಗಿದ್ದೇನೆ. ಅವರು ನನ್ನನ್ನು ಯಾವುದಕ್ಕೂ ಒತ್ತಾಯಿಸಲಿಲ್ಲ ಮತ್ತು ನಾನು ಅವರೊಂದಿಗೆ ಸಂತೋಷದ ವೈವಾಹಿಕ ಜೀವನವನ್ನು ನಡೆಸುತ್ತಿದ್ದೇನೆ ಮತ್ತು ಅವನೊಂದಿಗೆ ಮಾತ್ರ ಬದುಕಲು ಬಯಸುತ್ತೇನೆ.” ಎಂದಿದ್ದಳು.

ಇದನ್ನೂ ಓದಿ: Crime News: ಅಶ್ಲೀಲ ವಿಡಿಯೋ ನೋಡಿ ಬಾಲಕನ ಮೇಲೆ ಅತ್ಯಾಚಾರವೆಸಗಿ ಕೊಂದ ಮದರಸಾ ಶಿಕ್ಷಕ

ಆದರೆ, ಅಪ್ರಾಪ್ತ ವಯಸ್ಸಿನವಳಾಗಿರುವುದರಿಂದ ನ್ಯಾಯಾಲಯದಲ್ಲಿ ಆಕೆಯ ಹೇಳಿಕೆ ಸ್ವೀಕಾರಾರ್ಹವಾಗಿರಲಿಲ್ಲ. ವಿಚಾರಣೆಯ ಸಂದರ್ಭದಲ್ಲಿ, ಮಹಿಳಾ ಕಾನ್‌ಸ್ಟೆಬಲ್ ಖಾಲಿ ಕಾಗದದ ಮೇಲೆ ತನ್ನ ಸಹಿ ಹಾಕುವಂತೆ ಒತ್ತಾಯಿಸಿದರು ಎಂದು ಮಹಿಳೆ ಹೇಳಿಕೊಂಡಿದ್ದಾಳೆ. “ವಿಚಾರಣೆಯ ಉದ್ದಕ್ಕೂ, ಅವಳು ಅಪಹರಣ ಮತ್ತು ಅತ್ಯಾಚಾರದ ಪ್ರಾಸಿಕ್ಯೂಷನ್ ಸಿದ್ಧಾಂತವನ್ನು ನಿರಾಕರಿಸಿದಳು” ಎಂದು ವಕೀಲ ಮೊಹಮ್ಮದ್ ಫಿರೋಜ್ ಹೇಳಿದ್ದಾರೆ. ಇದೀಗ ಆ ದಂಪತಿ ಸುಖೀ ದಾಂಪತ್ಯ ನಡೆಸುತ್ತಿದ್ದು, ಈ ತೀರ್ಪಿನಿಂದ ಅವರು ಶಾಕ್ ಆಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?