AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಹುಟ್ಟುಹಬ್ಬದ ದಿನವೇ ಮಹಿಳೆಗೆ ಡ್ರಗ್ಸ್ ನೀಡಿ ಅತ್ಯಾಚಾರ

ತನ್ನ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಮಹಿಳೆಗೆ ಆ ದಿನವೇ ಕರಾಳ ದಿನವಾಗಿ ಮಾರ್ಪಟ್ಟಿದೆ. ಆಕೆಗೆ ಮಾದಕ ದ್ರವ್ಯ ನೀಡಿ, ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಹೀನಕೃತ್ಯ ಮಹಾರಾಷ್ಟ್ರದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ.

Crime News: ಹುಟ್ಟುಹಬ್ಬದ ದಿನವೇ ಮಹಿಳೆಗೆ ಡ್ರಗ್ಸ್ ನೀಡಿ ಅತ್ಯಾಚಾರ
ಅತ್ಯಾಚಾರ
ಸುಷ್ಮಾ ಚಕ್ರೆ
|

Updated on: Sep 06, 2024 | 10:09 PM

Share

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದ ಹುಟ್ಟುಹಬ್ಬದ ಪಾರ್ಟಿಯಲ್ಲಿ 22 ವರ್ಷದ ಮಹಿಳೆಗೆ ಡ್ರಗ್ಸ್ ನೀಡಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಓರ್ವ ಮಹಿಳೆ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಇಂದು ಪಿಟಿಐ ವರದಿ ಮಾಡಿದೆ.

ಬುಧವಾರ ಮತ್ತು ಗುರುವಾರ ಮಧ್ಯರಾತ್ರಿ ಬದ್ಲಾಪುರದ ಶಿರ್ಗಾಂವ್ ಪ್ರದೇಶದ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳಾದ ಸಂತೋಷ್ ಶಿವರಾಮ್ ರೂಪವತೆ (40), ಶಿವಂ ಸಂಜಯ್ ರಾಜೇ (23), ಮತ್ತು ಅಲಿಸ್ಕಾ ಅಲಿಯಾಸ್ ಭೂಮಿಕಾ ರವೀಂದ್ರ ಮೆಶ್ರಾಮ್ (20) ಅವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: Crime News: ಮಹಿಳೆಯ ಮೇಲೆ ಅತ್ಯಾಚಾರ, ಬೆತ್ತಲೆಯಾಗಿ ಡ್ಯಾನ್ಸ್ ಮಾಡಿಸಿದ ಕಾಮುಕರು

ಅತ್ಯಾಚಾರಕ್ಕೊಳಗಾದ ಮಹಿಳೆಯ ಗೆಳತಿ ಅಲಿಸ್ಕಾ ಆಕೆಯ ಹುಟ್ಟುಹಬ್ಬ ಆಚರಿಸುವುದಾಗಿ ಆಕೆಯನ್ನು ತನ್ನ ಮನೆಗೆ ಆಹ್ವಾನಿಸಿದ್ದಳು. ಈ ವೇಳೆ ಇತರ ಇಬ್ಬರು ಆರೋಪಿಗಳು ಅಲ್ಲಿ ಹಾಜರಿದ್ದರು. ಪಾರ್ಟಿಯ ನಂತರ ಇಬ್ಬರು ವ್ಯಕ್ತಿಗಳು ಮಲಗುವ ಕೋಣೆಯಲ್ಲಿ ಮದ್ಯ ಸೇವಿಸಲು ಪ್ರಾರಂಭಿಸಿದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಈ ವೇಳೆ ಪಾರ್ಟಿ ಮುಗಿಸಿ ಮಹಿಳೆ ಹೊರಡಲು ಎದ್ದಾಗ, ಆಕೆಯ ಗೆಳತಿ ಅಲಿಸ್ಕಾ ಇನ್ನೂ ಸ್ವಲ್ಪ ಹೊತ್ತು ಇದ್ದು ಹೋಗುವಂತೆ ಹೇಳಿದಳು. ನನಗೆ ಸುಸ್ತಾಗುತ್ತಿದೆ ಎಂದು ಆಕೆ ಹೇಳಿದಾಗ ನಿಂಬೆ ಹಣ್ಣಿನ ಪಾನಕ ಮಾಡಿಕೊಡುವುದಾಗಿ ಅಡುಗೆಮನೆಗೆ ಹೋಗಿ ಆ ಜ್ಯೂಸ್​ನಲ್ಲಿ ಡ್ರಗ್ಸ್​ ಬೆರೆಸಿದ್ದಾಳೆ. ಅದನ್ನು ಸೇವಿಸಿದ ನಂತರ ಆ ಮಹಿಳೆ ತಲೆತಿರುಗುವಿಕೆಯನ್ನು ಅನುಭವಿಸಲು ಪ್ರಾರಂಭಿಸಿದಳು ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಮಹಿಳೆಗೆ ಮದ್ಯ ಕುಡಿಸಿ ಬೆಳ್ಳಂಬೆಳಗ್ಗೆ ರಸ್ತೆಯಲ್ಲೇ ಅತ್ಯಾಚಾರ

ಆಗ ಆಕೆಯನ್ನು ಕುಡಿದ ಅಮಲಿನಲ್ಲಿದ್ದ ಇಬ್ಬರು ರೂಮಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾರೆ. ನಂತರ ಪ್ರಜ್ಞಾಹೀನಳಾಗಿದ್ದ ಆಕೆಯನ್ನು ಬಾತ್​ರೂಮಿನಲ್ಲಿ ಮಲಗಿಸಿ ಅಲ್ಲಿಂದ ಪರಾರಿಯಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ