AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾವನಿಂದ ಸೊಸೆ ಮೇಲೆ ಅತ್ಯಾಚಾರ; ಹೆಂಡತಿಯನ್ನೇ ತಾಯಿ ಎಂದ ಗಂಡ!

ತನ್ನ ಹೆಂಡತಿಯ ಮೇಲೆ ತನ್ನ ತಂದೆ ಅತ್ಯಾಚಾರವೆಸಗಿದ್ದಾನೆ ಎಂಬುದು ತಿಳಿಯುತ್ತಿದ್ದಂತೆ ಅಪ್ಪನನ್ನು ಪ್ರಶ್ನೆ ಮಾಡುವ ಬದಲು ಆ ವ್ಯಕ್ತಿ ತನ್ನ 26 ವರ್ಷದ ಪತ್ನಿಯನ್ನೇ ಥಳಿಸಿ ಆಕೆಯನ್ನು ಮನೆಯಿಂದ ಹೊರಹಾಕಿದ್ದಾನೆ. ಈ ವಿಚಿತ್ರ ಘಟನೆ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯಲ್ಲಿ ನಡೆದಿದೆ.

ಮಾವನಿಂದ ಸೊಸೆ ಮೇಲೆ ಅತ್ಯಾಚಾರ; ಹೆಂಡತಿಯನ್ನೇ ತಾಯಿ ಎಂದ ಗಂಡ!
ಅತ್ಯಾಚಾರImage Credit source: India Today
ಸುಷ್ಮಾ ಚಕ್ರೆ
|

Updated on: Sep 14, 2023 | 6:43 PM

Share

ಮುಜಾಫರ್​ನಗರ: ಗಂಡ ಮನೆಯಲ್ಲಿ ಇಲ್ಲದಿದ್ದಾಗ ಮಹಿಳೆಯೊಬ್ಬಳ ಮೇಲೆ ಆಕೆಯ ಗಂಡನ ತಂದೆಯೇ ಅತ್ಯಾಚಾರ ಎಸಗಿದ್ದಾರೆ. ಈ ವಿಷಯ ಯಾರಿಗೂ ಹೇಳದಂತೆ ಆಕೆಗೆ ಜೀವ ಬೆದರಿಕೆಯನ್ನೂ ಹಾಕಿದ್ದಾರೆ. ಆದರೆ, ಆ ಮಹಿಳೆ ಧೈರ್ಯ ಮಾಡಿ ಈ ವಿಷಯವನ್ನು ತನ್ನ ಗಂಡನ ಬಳಿ ಹೇಳಿದಾಗ ಆಕೆಗೆ ಆಘಾತ ಕಾದಿತ್ತು. ‘ನನ್ನ ಅಪ್ಪನ ಜೊತೆ ದೈಹಿಕ ಸಂಬಂಧ ಹೊಂದಿದ ನೀನು ನನ್ನ ಅಮ್ಮನ ಸಮಾನ. ನಿನ್ನೊಂದಿಗೆ ನಾನು ಸಂಸಾರ ಮಾಡಲು ಸಾಧ್ಯವಿಲ್ಲ’ ಎಂದು ಆ ವ್ಯಕ್ತಿ ಅತ್ಯಾಚಾರಕ್ಕೊಳಗಾದ ತನ್ನ ಹೆಂಡತಿಯನ್ನು ಮನೆಯಿಂದ ಹೊರಹಾಕಿದ್ದಾನೆ.

ಈ ವಿಚಿತ್ರ ಘಟನೆ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯಲ್ಲಿ ನಡೆದಿದೆ. ತನ್ನ ಹೆಂಡತಿಯ ಮೇಲೆ ತನ್ನ ತಂದೆ ಅತ್ಯಾಚಾರವೆಸಗಿದ್ದಾನೆ ಎಂಬುದು ತಿಳಿಯುತ್ತಿದ್ದಂತೆ ಅಪ್ಪನನ್ನು ಪ್ರಶ್ನೆ ಮಾಡುವ ಬದಲು ಆ ವ್ಯಕ್ತಿ ತನ್ನ 26 ವರ್ಷದ ಪತ್ನಿಯನ್ನೇ ಥಳಿಸಿ ಆಕೆಯನ್ನು ಮನೆಯಿಂದ ಹೊರಹಾಕಿದ್ದಾನೆ. ಈ ವಿಚಾರವಾಗಿ ನ್ಯಾಯ ಕೋರಿ ಆ ಮಹಿಳೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ.

ಇದನ್ನೂ ಓದಿ: ಪತ್ನಿ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಪತಿ, ಆಡಿಯೋ ಮೆಸೇಜ್​ನಲ್ಲಿ ಹೆಂಡ್ತಿಯ ಕರಾಳ ಮುಖ ಬಿಚ್ಚಿಟ್ಟ

ನನ್ನ ತಂದೆ ನಿನ್ನೊಂದಿಗೆ ಬಲವಂತವಾಗಿ ದೈಹಿಕ ಸಂಬಂಧ ಹೊಂದಿದ್ದಾನೆ. ಈಗ ನೀನು ನನ್ನ ತಂದೆಯ ಹೆಂಡತಿಯಿದ್ದಂತೆ. ಅಂದರೆ, ನನಗೆ ನೀನು ತಾಯಿ ಇದ್ದಂತೆ. ಹೀಗಾಗಿ, ನೀನು ನನ್ನೊಡನೆ ಇರಲು ಸಾಧ್ಯವಿಲ್ಲ ಎಂದು ಆ ವ್ಯಕ್ತಿ ಹೇಳಿರುವುದಾಗಿ ಮಹಿಳೆ ದೂರು ನೀಡಿದ್ದಾಳೆ.

ಕಳೆದ ವರ್ಷ ವಿವಾಹವಾಗಿದ್ದ ಮಹಿಳೆ ಸೆಪ್ಟೆಂಬರ್ 7ರಂದು ಸಲ್ಲಿಸಿದ ದೂರಿನಲ್ಲಿ, ಆಗಸ್ಟ್ 5ರಂದು ನನ್ನ ಪತಿ ಮನೆಯಲ್ಲಿ ಇಲ್ಲದಿದ್ದಾಗ ನನ್ನ ಮಾವ ನನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿದ್ದಾರೆ. ನನ್ನ ಗಂಡ ಅವರ ತಾಯಿಯನ್ನು ವೈದ್ಯರ ಬಳಿ ಕರೆದುಕೊಂಡು ಹೋಗಿದ್ದಾಗ ಮನೆಯಲ್ಲಿ ನಾನು ಮತ್ತು ನನ್ನ ಗಂಡನ ತಂದೆ ಇಬ್ಬರೇ ಇದ್ದೆವು. ಆಗ ಬಲವಂತವಾಗಿ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಬಳಿಕ ನನಗೆ ಬೆದರಿಕೆಯನ್ನೂ ಹಾಕಿದ್ದಾರೆ ಎಂದು ಆಕೆ ಆರೋಪಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಗುಂಡು ಹಾರಿಸಿ ಪತಿಯಿಂದಲೇ ಪತ್ನಿಯ ಕೊಲೆ; ಕಾರಣವೇನು ಗೊತ್ತಾ?

ಆ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆಕೆಯ ಮಾವ ಮತ್ತು ಗಂಡನ ವಿರುದ್ಧ ಕಾನೂನು ಕ್ರಮಗಳನ್ನು ಪ್ರಾರಂಭಿಸಿದ್ದಾರೆ. ಆದರೆ, ಆಕೆಯ ಮಾವ ಈ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಹಣದ ಲಾಭಕ್ಕಾಗಿ ಆಕೆ ತಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ