AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣ್ಣಾದ ಕೈಗಳಿಂದ ಸೈಕಲ್ ಮುಟ್ಟಿದ ಬಾಲಕಿಯ ಕತ್ತು ಸೀಳಿ ಕೊಂದ ಯುವಕ!

ಆರೋಪಿ ದೀಪಕ್ ತನ್ನ ಮನೆಯ ಮುಂದೆ ಸೈಕಲ್ ನಿಲ್ಲಿಸಿದ್ದಾಗ ಅವರ ಪಕ್ಕದ ಮನೆಯಲ್ಲಿ ವಾಸವಾಗಿದ್ದ 5 ವರ್ಷದ ಬಾಲಕಿ ರಿಮ್ಜಿಮ್ ಮಣ್ಣಾದ ಕೈಗಳಿಂದ ಆ ಸೈಕಲ್ ಮುಟ್ಟಿದ್ದಾಳೆ. ಇದರಿಂದ ಕೋಪಗೊಂಡ ದೀಪಕ್ ಚೂಪಾದ ಆಯುಧವನ್ನು ತೆಗೆದು ಬಾಲಕಿಯ ಕತ್ತು ಸೀಳಿ ಕೊಲೆ ಮಾಡಿದ್ದಾರೆ.

ಮಣ್ಣಾದ ಕೈಗಳಿಂದ ಸೈಕಲ್ ಮುಟ್ಟಿದ ಬಾಲಕಿಯ ಕತ್ತು ಸೀಳಿ ಕೊಂದ ಯುವಕ!
ಸಾಂದರ್ಭಿಕ ಚಿತ್ರImage Credit source: iStock
ಸುಷ್ಮಾ ಚಕ್ರೆ
|

Updated on: Sep 21, 2023 | 7:26 PM

Share

ಗೋರಖ್​ಪುರ: ಮನೆಯ ಮುಂದೆ ನಿಲ್ಲಿಸಿದ್ದ ತನ್ನ ಸೈಕಲನ್ನು 5 ವರ್ಷದ ಬಾಲಕಿಯೊಬ್ಬಳು ಮಣ್ಣಿನ ಕೈಗಳಿಂದ ಮುಟ್ಟಿದಳು ಎಂಬ ಕಾರಣಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬರು ಆಕೆಯ ಕುತ್ತಿಗೆ ಸೀಳಿ, ಕೊಲೆ ಮಾಡಿರುವ ಆಘಾತಕಾರಿ ಘಟನೆ ಮಹಾರಾಜ್‌ಗಂಜ್ ಜಿಲ್ಲೆಯ ರಾಮಚಂದ್ರಾಹಿ ಗ್ರಾಮದಲ್ಲಿ ನಡೆದಿದೆ. ಬುಧವಾರ ಸಂಜೆ ಈ ಘಟನೆ ನಡೆದಿದ್ದು, ಆರೋಪಿ ದೀಪಕ್ ತನ್ನ ಮನೆಯ ಮುಂದೆ ಸೈಕಲ್ ನಿಲ್ಲಿಸಿದ್ದಾಗ ಅವರ ಪಕ್ಕದ ಮನೆಯಲ್ಲಿ ವಾಸವಾಗಿದ್ದ ಗಣೇಶ್ ಧನಕರ್ ಅವರ 5 ವರ್ಷದ ಮಗಳು ರಿಮ್ಜಿಮ್ ಮಣ್ಣಾದ ಕೈಗಳಿಂದ ಆ ಸೈಕಲ್ ಮುಟ್ಟಿದ್ದಾಳೆ. ಇದರಿಂದ ಕೋಪಗೊಂಡ ದೀಪಕ್ ಚೂಪಾದ ಆಯುಧವನ್ನು ತೆಗೆದು ಬಾಲಕಿಯ ಕತ್ತು ಸೀಳಿ ಕೊಲೆ ಮಾಡಿದ್ದಾರೆ.

ಕೊಲೆ ಮಾಡಿದ ಆರೋಪಿಯನ್ನು 21 ವರ್ಷದ ದಿಲೀಪ್ ಎಂದು ಗುರುತಿಸಲಾಗಿದ್ದು, ಕೊಲೆ ಮಾಡಿದ ನಂತರ ಭಯದಿಂದ ಅವರು ಪೊಲೀಸರಿಂದ ತಪ್ಪಿಸಿಕೊಳ್ಳಲು ಟೆರೇಸ್​ನಿಂದ ಜಿಗಿದಿದ್ದಾರೆ. ಆ ಸಂದರ್ಭದಲ್ಲಿ ಅವರ ಎರಡೂ ಕಾಲುಗಳು ಮುರಿದಿವೆ. ನಂತರ ಅವರನ್ನು ಬಂಧಿಸಿ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಆಟೋದಲ್ಲಿ ಕಿಡ್ನಾಪ್ ಮಾಡಿಕೊಂಡು ಹೋಗಿ ಕುತ್ತಿಗೆ ಕೊಯ್ದು ಕೊಲೆ

ದೀಪಕ್ ವಿರುದ್ಧ ಮೃತ ಬಾಲಕಿಯ ಕುಟುಂಬಸ್ಥರು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ಮಾಡಿದ್ದಾರೆ. ಆ ಯುವಕನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಘಟನೆಯ ನಂತರ ಇಡೀ ಗ್ರಾಮ ಉದ್ವಿಗ್ನಗೊಂಡಿದೆ. ಕತ್ತು ಸೀಳಿದ್ದರಿಂದ ಸ್ಥಳದಲ್ಲೇ ಮೃತಪಟ್ಟ 5 ವರ್ಷದ ಬಾಲಕಿಯ ಮೃತದೇಹವನ್ನು ನಿಚ್ಲಾಲ್ ಪೊಲೀಸರು ಶವಪರೀಕ್ಷೆಗೆ ಕಳುಹಿಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!