AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣ್ಣಾದ ಕೈಗಳಿಂದ ಸೈಕಲ್ ಮುಟ್ಟಿದ ಬಾಲಕಿಯ ಕತ್ತು ಸೀಳಿ ಕೊಂದ ಯುವಕ!

ಆರೋಪಿ ದೀಪಕ್ ತನ್ನ ಮನೆಯ ಮುಂದೆ ಸೈಕಲ್ ನಿಲ್ಲಿಸಿದ್ದಾಗ ಅವರ ಪಕ್ಕದ ಮನೆಯಲ್ಲಿ ವಾಸವಾಗಿದ್ದ 5 ವರ್ಷದ ಬಾಲಕಿ ರಿಮ್ಜಿಮ್ ಮಣ್ಣಾದ ಕೈಗಳಿಂದ ಆ ಸೈಕಲ್ ಮುಟ್ಟಿದ್ದಾಳೆ. ಇದರಿಂದ ಕೋಪಗೊಂಡ ದೀಪಕ್ ಚೂಪಾದ ಆಯುಧವನ್ನು ತೆಗೆದು ಬಾಲಕಿಯ ಕತ್ತು ಸೀಳಿ ಕೊಲೆ ಮಾಡಿದ್ದಾರೆ.

ಮಣ್ಣಾದ ಕೈಗಳಿಂದ ಸೈಕಲ್ ಮುಟ್ಟಿದ ಬಾಲಕಿಯ ಕತ್ತು ಸೀಳಿ ಕೊಂದ ಯುವಕ!
ಸಾಂದರ್ಭಿಕ ಚಿತ್ರImage Credit source: iStock
ಸುಷ್ಮಾ ಚಕ್ರೆ
|

Updated on: Sep 21, 2023 | 7:26 PM

Share

ಗೋರಖ್​ಪುರ: ಮನೆಯ ಮುಂದೆ ನಿಲ್ಲಿಸಿದ್ದ ತನ್ನ ಸೈಕಲನ್ನು 5 ವರ್ಷದ ಬಾಲಕಿಯೊಬ್ಬಳು ಮಣ್ಣಿನ ಕೈಗಳಿಂದ ಮುಟ್ಟಿದಳು ಎಂಬ ಕಾರಣಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬರು ಆಕೆಯ ಕುತ್ತಿಗೆ ಸೀಳಿ, ಕೊಲೆ ಮಾಡಿರುವ ಆಘಾತಕಾರಿ ಘಟನೆ ಮಹಾರಾಜ್‌ಗಂಜ್ ಜಿಲ್ಲೆಯ ರಾಮಚಂದ್ರಾಹಿ ಗ್ರಾಮದಲ್ಲಿ ನಡೆದಿದೆ. ಬುಧವಾರ ಸಂಜೆ ಈ ಘಟನೆ ನಡೆದಿದ್ದು, ಆರೋಪಿ ದೀಪಕ್ ತನ್ನ ಮನೆಯ ಮುಂದೆ ಸೈಕಲ್ ನಿಲ್ಲಿಸಿದ್ದಾಗ ಅವರ ಪಕ್ಕದ ಮನೆಯಲ್ಲಿ ವಾಸವಾಗಿದ್ದ ಗಣೇಶ್ ಧನಕರ್ ಅವರ 5 ವರ್ಷದ ಮಗಳು ರಿಮ್ಜಿಮ್ ಮಣ್ಣಾದ ಕೈಗಳಿಂದ ಆ ಸೈಕಲ್ ಮುಟ್ಟಿದ್ದಾಳೆ. ಇದರಿಂದ ಕೋಪಗೊಂಡ ದೀಪಕ್ ಚೂಪಾದ ಆಯುಧವನ್ನು ತೆಗೆದು ಬಾಲಕಿಯ ಕತ್ತು ಸೀಳಿ ಕೊಲೆ ಮಾಡಿದ್ದಾರೆ.

ಕೊಲೆ ಮಾಡಿದ ಆರೋಪಿಯನ್ನು 21 ವರ್ಷದ ದಿಲೀಪ್ ಎಂದು ಗುರುತಿಸಲಾಗಿದ್ದು, ಕೊಲೆ ಮಾಡಿದ ನಂತರ ಭಯದಿಂದ ಅವರು ಪೊಲೀಸರಿಂದ ತಪ್ಪಿಸಿಕೊಳ್ಳಲು ಟೆರೇಸ್​ನಿಂದ ಜಿಗಿದಿದ್ದಾರೆ. ಆ ಸಂದರ್ಭದಲ್ಲಿ ಅವರ ಎರಡೂ ಕಾಲುಗಳು ಮುರಿದಿವೆ. ನಂತರ ಅವರನ್ನು ಬಂಧಿಸಿ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಆಟೋದಲ್ಲಿ ಕಿಡ್ನಾಪ್ ಮಾಡಿಕೊಂಡು ಹೋಗಿ ಕುತ್ತಿಗೆ ಕೊಯ್ದು ಕೊಲೆ

ದೀಪಕ್ ವಿರುದ್ಧ ಮೃತ ಬಾಲಕಿಯ ಕುಟುಂಬಸ್ಥರು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ಮಾಡಿದ್ದಾರೆ. ಆ ಯುವಕನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಘಟನೆಯ ನಂತರ ಇಡೀ ಗ್ರಾಮ ಉದ್ವಿಗ್ನಗೊಂಡಿದೆ. ಕತ್ತು ಸೀಳಿದ್ದರಿಂದ ಸ್ಥಳದಲ್ಲೇ ಮೃತಪಟ್ಟ 5 ವರ್ಷದ ಬಾಲಕಿಯ ಮೃತದೇಹವನ್ನು ನಿಚ್ಲಾಲ್ ಪೊಲೀಸರು ಶವಪರೀಕ್ಷೆಗೆ ಕಳುಹಿಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ