AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣ್ಣಾದ ಕೈಗಳಿಂದ ಸೈಕಲ್ ಮುಟ್ಟಿದ ಬಾಲಕಿಯ ಕತ್ತು ಸೀಳಿ ಕೊಂದ ಯುವಕ!

ಆರೋಪಿ ದೀಪಕ್ ತನ್ನ ಮನೆಯ ಮುಂದೆ ಸೈಕಲ್ ನಿಲ್ಲಿಸಿದ್ದಾಗ ಅವರ ಪಕ್ಕದ ಮನೆಯಲ್ಲಿ ವಾಸವಾಗಿದ್ದ 5 ವರ್ಷದ ಬಾಲಕಿ ರಿಮ್ಜಿಮ್ ಮಣ್ಣಾದ ಕೈಗಳಿಂದ ಆ ಸೈಕಲ್ ಮುಟ್ಟಿದ್ದಾಳೆ. ಇದರಿಂದ ಕೋಪಗೊಂಡ ದೀಪಕ್ ಚೂಪಾದ ಆಯುಧವನ್ನು ತೆಗೆದು ಬಾಲಕಿಯ ಕತ್ತು ಸೀಳಿ ಕೊಲೆ ಮಾಡಿದ್ದಾರೆ.

ಮಣ್ಣಾದ ಕೈಗಳಿಂದ ಸೈಕಲ್ ಮುಟ್ಟಿದ ಬಾಲಕಿಯ ಕತ್ತು ಸೀಳಿ ಕೊಂದ ಯುವಕ!
ಸಾಂದರ್ಭಿಕ ಚಿತ್ರImage Credit source: iStock
ಸುಷ್ಮಾ ಚಕ್ರೆ
|

Updated on: Sep 21, 2023 | 7:26 PM

Share

ಗೋರಖ್​ಪುರ: ಮನೆಯ ಮುಂದೆ ನಿಲ್ಲಿಸಿದ್ದ ತನ್ನ ಸೈಕಲನ್ನು 5 ವರ್ಷದ ಬಾಲಕಿಯೊಬ್ಬಳು ಮಣ್ಣಿನ ಕೈಗಳಿಂದ ಮುಟ್ಟಿದಳು ಎಂಬ ಕಾರಣಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬರು ಆಕೆಯ ಕುತ್ತಿಗೆ ಸೀಳಿ, ಕೊಲೆ ಮಾಡಿರುವ ಆಘಾತಕಾರಿ ಘಟನೆ ಮಹಾರಾಜ್‌ಗಂಜ್ ಜಿಲ್ಲೆಯ ರಾಮಚಂದ್ರಾಹಿ ಗ್ರಾಮದಲ್ಲಿ ನಡೆದಿದೆ. ಬುಧವಾರ ಸಂಜೆ ಈ ಘಟನೆ ನಡೆದಿದ್ದು, ಆರೋಪಿ ದೀಪಕ್ ತನ್ನ ಮನೆಯ ಮುಂದೆ ಸೈಕಲ್ ನಿಲ್ಲಿಸಿದ್ದಾಗ ಅವರ ಪಕ್ಕದ ಮನೆಯಲ್ಲಿ ವಾಸವಾಗಿದ್ದ ಗಣೇಶ್ ಧನಕರ್ ಅವರ 5 ವರ್ಷದ ಮಗಳು ರಿಮ್ಜಿಮ್ ಮಣ್ಣಾದ ಕೈಗಳಿಂದ ಆ ಸೈಕಲ್ ಮುಟ್ಟಿದ್ದಾಳೆ. ಇದರಿಂದ ಕೋಪಗೊಂಡ ದೀಪಕ್ ಚೂಪಾದ ಆಯುಧವನ್ನು ತೆಗೆದು ಬಾಲಕಿಯ ಕತ್ತು ಸೀಳಿ ಕೊಲೆ ಮಾಡಿದ್ದಾರೆ.

ಕೊಲೆ ಮಾಡಿದ ಆರೋಪಿಯನ್ನು 21 ವರ್ಷದ ದಿಲೀಪ್ ಎಂದು ಗುರುತಿಸಲಾಗಿದ್ದು, ಕೊಲೆ ಮಾಡಿದ ನಂತರ ಭಯದಿಂದ ಅವರು ಪೊಲೀಸರಿಂದ ತಪ್ಪಿಸಿಕೊಳ್ಳಲು ಟೆರೇಸ್​ನಿಂದ ಜಿಗಿದಿದ್ದಾರೆ. ಆ ಸಂದರ್ಭದಲ್ಲಿ ಅವರ ಎರಡೂ ಕಾಲುಗಳು ಮುರಿದಿವೆ. ನಂತರ ಅವರನ್ನು ಬಂಧಿಸಿ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಆಟೋದಲ್ಲಿ ಕಿಡ್ನಾಪ್ ಮಾಡಿಕೊಂಡು ಹೋಗಿ ಕುತ್ತಿಗೆ ಕೊಯ್ದು ಕೊಲೆ

ದೀಪಕ್ ವಿರುದ್ಧ ಮೃತ ಬಾಲಕಿಯ ಕುಟುಂಬಸ್ಥರು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ಮಾಡಿದ್ದಾರೆ. ಆ ಯುವಕನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಘಟನೆಯ ನಂತರ ಇಡೀ ಗ್ರಾಮ ಉದ್ವಿಗ್ನಗೊಂಡಿದೆ. ಕತ್ತು ಸೀಳಿದ್ದರಿಂದ ಸ್ಥಳದಲ್ಲೇ ಮೃತಪಟ್ಟ 5 ವರ್ಷದ ಬಾಲಕಿಯ ಮೃತದೇಹವನ್ನು ನಿಚ್ಲಾಲ್ ಪೊಲೀಸರು ಶವಪರೀಕ್ಷೆಗೆ ಕಳುಹಿಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​