AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ನಿದ್ರೆಯಲ್ಲಿದ್ದಾಗಲೇ ಗರ್ಭಿಣಿ ಪತ್ನಿ, 4 ವರ್ಷದ ಮಗಳ ಕತ್ತು ಹಿಸುಕಿ ಕೊಂದ ಸೈನಿಕ

ಗರ್ಭಿಣಿಯಾಗಿದ್ದ ತನ್ನ ಹೆಂಡತಿಯನ್ನು ಕೊಂದ ನಂತರ ಆರೋಪಿ 4 ವರ್ಷದ ಮಗಳನ್ನು ಕೊಂದಿದ್ದಾರೆ. ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಕಂದಹಾರ್ ತಾಲೂಕಿನ ಬೋರಿ ಗ್ರಾಮದಲ್ಲಿ ಈ ಮನಕಲಕುವ ಘಟನೆ ನಡೆದಿದೆ.

Crime News: ನಿದ್ರೆಯಲ್ಲಿದ್ದಾಗಲೇ ಗರ್ಭಿಣಿ ಪತ್ನಿ, 4 ವರ್ಷದ ಮಗಳ ಕತ್ತು ಹಿಸುಕಿ ಕೊಂದ ಸೈನಿಕ
ಕೊಲೆ ಮಾಡಿದ ಸೈನಿಕ, ಕೊಲೆಯಾದ ಆತನ ಹೆಂಡತಿ
ಸುಷ್ಮಾ ಚಕ್ರೆ
|

Updated on: Sep 13, 2023 | 6:17 PM

Share

ನಾಂದೇಡ್: ಭಾರತೀಯ ಸೇನೆಯ ಸೈನಿಕರು ಗಡಿಯಲ್ಲಿ ದೇಶವನ್ನು ರಕ್ಷಿಸುತ್ತಿದ್ದಾರೆ. ಭಾರತೀಯ ಸೈನಿಕರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ದೇಶವನ್ನು ರಕ್ಷಿಸುತ್ತಾರೆ. ಸೈನಿಕರು ತಾವು ಕರ್ತವ್ಯದಲ್ಲಿರುವಾಗ, ದೇಶದಲ್ಲಿ ಯಾವುದೇ ಬಿಕ್ಕಟ್ಟು ಎದುರಾದಾಗ ಹಿಂದೆ ಸರಿಯುವುದಿಲ್ಲ. ಅವರು ಭಯೋತ್ಪಾದಕರ ವಿರುದ್ಧ ಪ್ರಾಣದ ಹಂಗು ತೊರೆದು ಹೋರಾಡುತ್ತಾರೆ. ಆದರೆ, ಕಂದಹಾರ್​ನಲ್ಲಿ ಸೈನಿಕನೊಬ್ಬರು ತನ್ನ ಗರ್ಭಿಣಿ ಪತ್ನಿ ಹಾಗೂ 4 ವರ್ಷದ ಮಗಳನ್ನು ಕೊಲೆ ಮಾಡಿದ್ದಾರೆ.

ಭಾರತೀಯ ಸೇನೆಯ ಯೋಧ ಏಕನಾಥ್ ಜೈಭಾಯೇ ರಾತ್ರಿ ಮಲಗಿದ್ದ ತನ್ನ ಪತ್ನಿ ಮತ್ತು ಮಗಳನ್ನು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ. ಗರ್ಭಿಣಿಯಾಗಿದ್ದ ತನ್ನ ಹೆಂಡತಿಯನ್ನು ಕೊಂದ ನಂತರ ಆರೋಪಿ 4 ವರ್ಷದ ಮಗಳನ್ನು ಕೊಂದಿದ್ದಾರೆ. ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಕಂದಹಾರ್ ತಾಲೂಕಿನ ಬೋರಿ ಗ್ರಾಮದಲ್ಲಿ ಈ ಮನಕಲಕುವ ಘಟನೆ ನಡೆದಿದೆ.

ಇದನ್ನೂ ಓದಿ: ತನ್ನ ಮಗಳನ್ನು ಪ್ರೀತಿಸುತ್ತಿದ್ದ ಬಾಲಕನನ್ನು ಹೊಡೆದು ಕೊಲೆ ಮಾಡಿದ ತಂದೆ ಅರೆಸ್ಟ್

ಕೊಲೆ ಮಾಡಿದ ನಂತರ ಆರೋಪಿ ಏಕನಾಥ್ ಜಯಭಯೆ ಮಲಕೋಲಿ ಪೊಲೀಸ್ ಠಾಣೆ ಹಜಾರ್ ಝಾಲಾಕ್ಕೆ ತೆರಳಿ ಸ್ವಯಂಪ್ರೇರಿತವಾಗಿ ಪೊಲೀಸರ ಮುಂದೆ ತಾನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಆ ಸೈನಿಕ 8 ತಿಂಗಳ ಗರ್ಭಿಣಿಯಾಗಿದ್ದ ಹೆಂಡತಿ ಹಾಗೂ 4 ವರ್ಷದ ಮಗಳನ್ನು ಕೊಲ್ಲುವಂತಹ ಕಾರಣವಾದರೂ ಏನಿತ್ತು? ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಫ್ಲಾಟ್​ ಒಂದರ ವಿಷಯಕ್ಕೆ ಗಂಡ-ಹೆಂಡತಿ ನಡುವೆ ಜಗಳ ನಡೆದು ಈ ಕೊಲೆಯಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಧಾರವಾಡ: ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದ ಪತ್ನಿಯನ್ನು ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ

23 ವರ್ಷದ ಭಾಗ್ಯಶ್ರೀ ಮತ್ತು ಆಕೆಯ 4 ವರ್ಷದ ಮಗಳು ಸರಸ್ವತಿಯನ್ನು ಆರೋಪಿ ಸೈನಿಕ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಮಲಕೋಳಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ದಾಖಲಾಗಿದೆ. ಸದ್ಯಕ್ಕೆ ಆ ಸೈನಿಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನಿಖೆಯ ಬಳಿಕ ಕೊಲೆಯ ಹಿಂದಿರುವ ನಿಜವಾದ ಕಾರಣ ತಿಳಿಯಬೇಕಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?