AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಹಸುಗೂಸಿನ ಮೈಗೆ ಬರೆ ಹಾಕಿ ಚಿತ್ರಹಿಂಸೆ ನೀಡಿದ ಬಾಲಕಿ; ಕಾರಣ ಕೇಳಿದ್ರೆ ಶಾಕ್ ಆಗ್ತೀರ

ತಮ್ಮ ಮಗುವಿನ ಮೈಮೇಲೆ ಕೆಂಪು ಬಣ್ಣದ ಗಾಯ ಹೆಚ್ಚಾಗುತ್ತಿರುವುದನ್ನು ನೋಡಿ ಆಕೆಯ ಪೋಷಕರು ಕಂಗಾಲಾಗಿದ್ದರು. ಇದಕ್ಕೆ ಕಾರಣ ಯಾರೆಂಬುದೇ ಅವರಿಗೆ ನಿಗೂಢ ಪ್ರಶ್ನೆಯಾಗಿತ್ತು. ತಮ್ಮ ಕಂದನಿಗೆ ಚಿತ್ರಹಿಂಸೆ ನೀಡಿದ್ದು ತಮ್ಮ 5 ವರ್ಷದ ಮಗಳು ಎಂದು ಗೊತ್ತಾದ ಮೇಲೆ ಅವರಿಬ್ಬರಿಗೂ ಆಘಾತವಾಯಿತು!

Crime News: ಹಸುಗೂಸಿನ ಮೈಗೆ ಬರೆ ಹಾಕಿ ಚಿತ್ರಹಿಂಸೆ ನೀಡಿದ ಬಾಲಕಿ; ಕಾರಣ ಕೇಳಿದ್ರೆ ಶಾಕ್ ಆಗ್ತೀರ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 13, 2021 | 4:56 PM

Share

ಭುವನೇಶ್ವರ: ‘ಹುಟ್ಟುತ್ತಾ ಅಣ್ಣತಮ್ಮಂದಿರು, ಬೆಳೆಯುತ್ತಾ ದಾಯಾದಿಗಳು’ ಎಂಬ ಮಾತೊಂದಿದೆ. ಇದು ಕೇವಲ ಪುರುಷರಿಗೆ ಅನ್ವಯವಾಗುವ ಮಾತಲ್ಲ. ಈ ಮಾತು ಎಲ್ಲರಿಗೂ ಅನ್ವಯವಾಗದಿದ್ದರೂ ಮಕ್ಕಳಲ್ಲಿ ತಮ್ಮ ತಂದೆ-ತಾಯಿ ತನ್ನನ್ನೇ ಹೆಚ್ಚು ಪ್ರೀತಿ ಮಾಡಬೇಕೆಂಬ ಆಸೆ ಇದ್ದೇ ಇರುತ್ತದೆ. ತನಗಿಂತ ತನ್ನ ತಂಗಿಯನ್ನೋ, ತಮ್ಮನನ್ನೋ ಜಾಸ್ತಿ ಪ್ರೀತಿ ಮಾಡುತ್ತಾರೆ ಎಂದು ಮಕ್ಕಳಿಗೆ ಅನಿಸಿದರೆ ಅವರು ಅದನ್ನು ಸಹಿಸುವುದಿಲ್ಲ. ತಂಗಿ ಹುಟ್ಟಿದ ಮೇಲೆ ಅಪ್ಪ-ಅಮ್ಮ ತನ್ನನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂಬ ಅಸೂಯೆಯಿಂದ 5 ವರ್ಷದ ಬಾಲಕಿಯೊಬ್ಬಳು 1 ತಿಂಗಳ ತನ್ನ ತಂಗಿಗೆ ಬಿಸಿಯಾದ ಫೋರ್ಕ್​ನಿಂದ ಬರೆ ಹಾಕಿ ಚಿತ್ರಹಿಂಸೆ ನೀಡಿದ ಘಟನೆ ಘಟನೆ ಒಡಿಶಾದಲ್ಲಿ ನಡೆದಿದೆ.

ಅಪ್ಪ-ಅಮ್ಮ ರೂಮಿನಲ್ಲಿ ಇಲ್ಲದಿದ್ದಾಗ ಆ 5 ವರ್ಷದ ಹುಡುಗಿ ತೊಟ್ಟಿಲಲ್ಲಿ ಮಲಗಿದ್ದ 1 ತಿಂಗಳ ಮಗುವಿನ ಮೇಲೆ ಪ್ರತಿ ದಿನವೂ ಫೋರ್ಕ್ ಅನ್ನು ಬಿಸಿ ಮಾಡಿ ಸುಡುತ್ತಿದ್ದಳು. ಅಪ್ಪ-ಅಮ್ಮ ತನಗಿಂತ ತನ್ನ ತಂಗಿಗೆ ಹೆಚ್ಚು ಪ್ರೀತಿ ತೋರಿಸುತ್ತಾರೆಂದು ಆಕೆ ಕೋಪದಿಂದ ಈ ರೀತಿ ಮಾಡಿದ್ದಳು.

ತಮ್ಮ ಮಗುವಿನ ಮೈಮೇಲೆ ಕೆಂಪು ಬಣ್ಣದ ಗುರುತು ಇರುವುದನ್ನು ನೋಡಿ ಆಕೆಯ ಪೋಷಕರು ಕಂಗಾಲಾಗಿದ್ದರು. ಮಗು ದಿನವೂ ನೋವಿನಿಂದ ಅಳುತ್ತಿರುವುದನ್ನು ಕೂಡ ಏನು ಮಾಡಬೇಕೆಂದು ತೋಚದೆ ಆ ಮಗುವಿನ ತಂದೆ-ತಾಯಿ ವೈದ್ಯರ ಬಳಿ ಕರೆದುಕೊಂಡು ಹೋದರು. ತಮ್ಮ ಮಗುವಿನ ಮೈ ಮೇಲೆ ಹೇಗೆ ಗಾಯಗಳಾಗುತ್ತಿವೆ ಎಂಬುದೇ ಅವರಿಗೆ ನಿಗೂಢ ಪ್ರಶ್ನೆಯಾಗಿತ್ತು.

ಕೊನೆಗೆ ವೈದ್ಯರ ಸಲಹೆಯಂತೆ ಅವರು ತಮ್ಮ ಮನೆಯೊಳಗೆ ಸಿಸಿಟಿವಿ ಕ್ಯಾಮೆರಾವನ್ನು ಅಳವಿಸಿದರು. ಮನೆಯಲ್ಲಿರುವ ಸಿಸಿಟಿವಿ ಫೂಟೇಜ್ ನೋಡಿದಾಗ ಅದರಲ್ಲಿ ತಮ್ಮ ಮಗಳು ಆ ಮಗುವಿನ ಮೈಗೆ ಬಿಸಿಯಾದ ಫೋರ್ಕ್​ನಿಂದ ಬರೆ ಹಾಕುತ್ತಿರುವುದು ಗೊತ್ತಾಯಿತು. ಇದನ್ನು ನೋಡಿ ಅವರು ಆಘಾತಕ್ಕೊಳಗಾದರು. ಸುಮಾರು ಒಂದು ತಿಂಗಳ ನಂತರ ಆ ಮಗುವಿನ ಮೈ ಮೇಲಿನ ಗಾಯದ ರಹಸ್ಯ ಬಯಲಾಯಿತು.

ಟೈಮ್ಸ್ ಆಫ್ ಇಂಡಿಯಾದ ವರದಿ ಪ್ರಕಾರ, ಹೆಣ್ಣು ಮಗು ದಿನವೂ ಜೋರಾಗಿ ಅಳುತ್ತಿತ್ತು. ಆಕೆಯ ಪೋಷಕರು ಆ ಮಗುವನ್ನು ಕಟಕ್‌ನಲ್ಲಿರುವ ಮಕ್ಕಳ ವೈದ್ಯರ ಬಳಿಗೆ ಕರೆದೊಯ್ದರು. ಮಕ್ಕಳ ವೈದ್ಯ ವಿಕ್ರಮ್ ಸಮಲ್ ಮಗುವಿನ ದೇಹದ ಮೇಲೆ ಕೆಲವು ಕೆಂಪು ಕಲೆಗಳನ್ನು ಗಮನಿಸಿದರು. ಆರಂಭದಲ್ಲಿ ಅವರು ಮಗುವಿಗೆ ಸೆಪ್ಸಿಸ್ ಅಥವಾ ಕೆಲವು ಅಲರ್ಜಿಯ ಕಾರಣದಿಂದಾಗಿ ಕಲೆಗಳು ಉಂಟಾಗುತ್ತವೆ ಎಂದು ಭಾವಿಸಿದ್ದರು. ಹೀಗಾಗಿ, ಮಗುವಿಗೆ ಒಂದು ತಿಂಗಳ ಕಾಲ ಚಿಕಿತ್ಸೆ ನೀಡಲಾಯಿತು. ಆದರೆ, ದೇಹದ ಬೇರೆ ಭಾಗಗಳಲ್ಲೂ ಗಾಯಗಳು ಹೆಚ್ಚುತ್ತಲೇ ಇತ್ತು.

ಕೆಲವು ದಿನಗಳಾದಾಗ ಆ ಕೆಂಪು ಗಾಯವಾದ ಜಾಗದಲ್ಲಿ ಸುಟ್ಟು ಒಣಗಿದ ಗುರುತುಗಳಿದ್ದವು. ಹೀಗಾಗಿ, ಇದು ಸುಟ್ಟ ಗಾಯವೆಂದು ವೈದ್ಯರಿಗೆ ಖಚಿತವಾಯಿತು. ಇದು ಯಾರ ಕೆಲಸವೆಂದು ತಿಳಿಯಲು ಮನೆಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಮಗುವಿನ ಪೋಷಕರಿಗೆ ಸೂಚಿಸಿದರು. ತನ್ನ ತಾಯಿ ಮನೆಯ ಕೆಲಸದಲ್ಲಿ ನಿರತರಾಗಿದ್ದಾಗ, ಅಪ್ಪ ಹೊರಗೆ ಹೋಗಿದ್ದಾಗ ಅವರ ದೊಡ್ಡ ಮಗಳು ಅಡುಗೆಮನೆಗೆ ಹೋಗಿ, ಫೋರ್ಕ್ ಅನ್ನು ಬಿಸಿ ಮಾಡಿ ಮಗುವಿನ ದೇಹದ ಮೇಲೆ ಆ ಚಮಚವನ್ನು ಇಡುತ್ತಿದ್ದಳು. ಆಕೆ ಹುಟ್ಟಿದ ಮೇಲೆ ಅಪ್ಪ-ಅಮ್ಮ ತನ್ನ ಬಗ್ಗೆ ಪ್ರೀತಿ ತೋರಿಸುತ್ತಿಲ್ಲ ಎಂದು ಆಕೆ ಈ ರೀತಿ ಮಾಡಿದ್ದಳು.

ಇದನ್ನೂ ಓದಿ: Crime News: ಗಂಡ ಬ್ಲೌಸ್ ಹೊಲಿದಿದ್ದು ಸರಿಯಾಗಿಲ್ಲವೆಂದು ಹೆಂಡತಿ ಆತ್ಮಹತ್ಯೆ!

Crime News: ಪ್ರೇಯಸಿಯ ಗಂಡನನ್ನು ಕೊಂದು, ಶವವನ್ನು ಕತ್ತರಿಸಿ ಬಿಸಾಡಿದ ವ್ಯಕ್ತಿ

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ