AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಪಿಸ್ತೂಲ್ ತೋರಿಸಿ ಸಿನಿಮೀಯ ರೀತಿ ದರೋಡೆ, ಬಾರ್​ನಲ್ಲಿದ್ದ ಕಾಣಿಕೆ ಡಬ್ಬಿ ಕಳವು, ಹುಲಿಹೈದರ್ ಗ್ರಾಮದಲ್ಲಿ ಮತ್ತೆ ದೌರ್ಜನ್ಯ

ಲಸಿಕೆ ಹಾಕುವುದಾಗಿ ಸಂಪತ್ ಸಿಂಗ್ ಎಂಬುವವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಪಿಸ್ತೂಲ್ ತೋರಿಸಿ 50 ಗ್ರಾಂ ಚಿನ್ನಾಭರಣ ದೋಚಿ, ಪರಾರಿಯಾಗಿದ್ದಾರೆ

Crime News: ಪಿಸ್ತೂಲ್ ತೋರಿಸಿ ಸಿನಿಮೀಯ ರೀತಿ ದರೋಡೆ, ಬಾರ್​ನಲ್ಲಿದ್ದ ಕಾಣಿಕೆ ಡಬ್ಬಿ ಕಳವು, ಹುಲಿಹೈದರ್ ಗ್ರಾಮದಲ್ಲಿ ಮತ್ತೆ ದೌರ್ಜನ್ಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 29, 2021 | 10:13 PM

Share

ಬೆಂಗಳೂರು: ವೈದ್ಯಕೀಯ ಸಿಬ್ಬಂದಿ ಸೋಗಿನಲ್ಲಿ ಬಂದಿದ್ದ ಮೂವರು ಪಿಸ್ತೂಲ್​ ತೋರಿಸಿ ಸಿನಿಮೀಯ ರೀತಿ ದರೋಡೆ ಮಾಡಿರುವ ಘಟನೆ ಯಶವಂತಪುರ ಠಾಣಾ ವ್ಯಾಪ್ತಿಯ ಎಸ್​ಬಿಎಂ ಕಾಲೊನಿಯಲ್ಲಿ ನಡೆದಿದೆ. ಲಸಿಕೆ ಹಾಕುವುದಾಗಿ ಸಂಪತ್ ಸಿಂಗ್ ಎಂಬುವವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಪಿಸ್ತೂಲ್ ತೋರಿಸಿ 50 ಗ್ರಾಂ ಚಿನ್ನಾಭರಣ ದೋಚಿ, ಪರಾರಿಯಾಗಿದ್ದಾರೆ. ಘಟನೆ ನಡೆದಾಗ ಮನೆಯಲ್ಲಿ ಸಂಪತ್ ಸಿಂಗ್ ಅವರು ಮನೆಯಲ್ಲಿ ಇರಲಿಲ್ಲ. ಅವರ ತಾಯಿ ಹಾಗೂ ಪತ್ನಿ ಇಬ್ಬರೇ ಮನೆಯಲ್ಲಿದ್ದರು. ಕಾರು ಹಾಗೂ ಬೈಕಿನಲ್ಲಿ ದುಷ್ಕರ್ಮಿಗಳು ಮನೆಗೆ ಬಂದಿದ್ದರು. ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾರ್​ನಲ್ಲಿದ್ದ ಕಾಣಿಕೆ ಡಬ್ಬಿ ಕಳವು ಚಿಕ್ಕಮಗಳೂರು: ಬಾರ್‌ಗೆ ನುಗ್ಗಿ ದೇವರಿಗೆ ಇಟ್ಟಿದ್ದ ಕಾಣಿಕೆ ಡಬ್ಬಿ ಕಳ್ಳತನ ಮಾಡಿರುವ ಘಟನೆ ಮೂಡಿಗೆರೆ ತಾಲ್ಲೂಕು ಬಣಕಲ್‌ ಗ್ರಾಮದ ಸಂಭ್ರಮ್ ಬಾರ್‌ನಲ್ಲಿ ನಡೆದಿದೆ. ಕ್ಯಾಶ್ ಕೌಂಟರ್‌ನಲ್ಲಿ ಹಣ ಸಿಗದಿದ್ದಾಗ ಕಾಣಿಕೆ ಡಬ್ಬಿ ಕಳವು ಮಾಡಿ ಕಳ್ಳರು ಪರಾರಿಯಾಗಿದ್ದಾರೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭತ್ತ ಕಟಾವು ಯಂತ್ರ ಕಳವು ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಕುಪ್ಪಿ ಗ್ರಾಮದಲ್ಲಿ ಭತ್ತ ಕಟಾವು ಮಾಡುವ ಯಂತ್ರವನ್ನು ಕಳ್ಳತನ ಮಾಡಲಾಗಿದೆ. ಭಾನುವಾರ (ನ.28) ರಾತ್ರಿ ಜಮೀನು ಬಳಿ ನಿಲ್ಲಿಸಿದ್ದ ಹುಣಸಗಿ ತಾಂಡಾದ ರಾಜು ಎಂಬುವರಿಗೆ ಸೇರಿದ ಯಂತ್ರ ಕಳುವಾಗಿದೆ. ಹುಣಸಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳುವಾಗಿರುವ ಭತ್ತದ ಕಟಾವು ಯಂತ್ರವು ಲಕ್ಷಾಂತರ ರೂಪಾಯಿ ಬೆಳೆಬಾಳುತ್ತದೆ. ಹುಣಸಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟ್ರ್ಯಾಕ್ಟರ್ ಡಿಕ್ಕಿ: ಮಹಿಳೆ ಸಾವು ಮಂಡ್ಯ: ಟ್ರ್ಯಾಕ್ಟರ್ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಜಕ್ಕನಹಳ್ಳಿಯಲ್ಲಿ ನಡೆದಿದೆ. ಮಂಗನಹೊಸಳ್ಳಿ ನಿವಾಸಿ ಮಂಜಮ್ಮ (45) ಮೃತ ದುರ್ದೈವಿ. ಕಿಕ್ಕೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹುಲಿಹೈದರ್ ಗ್ರಾಮದಲ್ಲಿ ಮತ್ತೆ ದೌರ್ಜನ್ಯ ಕೊಪ್ಪಳ: ರಾಜ್ಯದಲ್ಲಿ ಸದ್ದು ಮಾಡಿದ್ದ ಯಲ್ಲಾಲಿಂಗ ಕೊಲೆ ಪ್ರಕರಣದ ಆರೋಪಿ ಹನುಮೇಶ್ ಸೋದರರಿಂದ ಹುಲಿಹೈದರ್ ಗ್ರಾಮದಲ್ಲಿ ಮತ್ತೆ ದೌರ್ಜನ್ಯ ನಡೆದಿದೆ. ಆರೋಪಿಗಳಾದ ಹನುಮೇಶ್ ನಾಯಕ್​ ಸೋದರ ನರಸಿಂಹ ನಾಯಕ್, ಉಮೇಶ್ ನಾಯಕ್, ಅಶೋಕ ನಾಯಕ್, ಹನುಮೇಶ್​​ ಸೋದರಿಯ ಪತಿ ಮಾರುತಿಯಿಂದಲೂ ಹಲ್ಲೆ ನಡೆದಿದೆ. ಗ್ರಾಮ ಪಂಚಾಯಿತಿ ಕಚೇರಿಗೆ ನುಗ್ಗಿದ 20ಕ್ಕೂ ಹೆಚ್ಚು ಜನರು ಉಪಾಧ್ಯಕ್ಷ ಶಿವಶಂಕರ ಚನ್ನದಾಸರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಕಚೇರಿಯಲ್ಲಿ ಲಸಿಕಾ ಕಾರ್ಯಕ್ರಮ ನಡೆಯುತ್ತಿತ್ತು. ಉಪಾಧ್ಯಕ್ಷರನ್ನು ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ. ಹನುಮೇಶ್, ಸೋದರರು ಮತ್ತು ಮಗನ ಗಡಿಪಾರು ಮಾಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಶಿವಶಂಕರ್ ಮನವಿ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಜಾಗದ ವಿಚಾರಕ್ಕೆ ಅಕ್ಕನ ಕೊಲೆಗೆ ಸುಪಾರಿ ನೀಡಿದ್ದ ತಮ್ಮ! 7 ತಿಂಗಳ ಹಿಂದೆ ನಡೆದ ಕೊಲೆಯ ರಹಸ್ಯವನ್ನು ಖಾಕಿ ಭೇದಿಸಿದ್ದೇಗೆ? ಇದನ್ನೂ ಓದಿ: Crime News: ಪೊಲೀಸರು ಅಪಘಾತವೆಂದು ನಂಬಿದ್ದ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್​; ಉದ್ಯಮಿಯ ಜೀವ ತೆಗೆದ ಗೆಳೆಯ !

Published On - 7:33 pm, Mon, 29 November 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ