AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಪೊಲೀಸ್ ಜೀಪ್​ನಲ್ಲಿ ಕರೆದೊಯ್ಯುವಾಗ ಸಬ್ ಇನ್​ಸ್ಪೆಕ್ಟರ್ ಕಿವಿ ಕಚ್ಚಿದ ಆಸಾಮಿ!

ಆರೋಪಿ ಸ್ಟೇನಿ ರೋಡ್ರಿಗಸ್ ಬೈಕ್​ನಲ್ಲಿ ಅಪಘಾತ ಮಾಡಿದ್ದು, ಗಸ್ತು ತಿರುಗುತ್ತಿದ್ದ ಪೊಲೀಸ್ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದಿದ್ದರು. ಆತನನ್ನು ಪೊಲೀಸ್ ಠಾಣೆಗೆ ಕರೆದೊಯ್ಯುವಾಗ ಜೀಪ್​ನಲ್ಲಿದ್ದ ಪೊಲೀಸ್ ಅಧಿಕಾರಿಯ ಕಿವಿಯನ್ನು ಕಚ್ಚಿ ಗಾಯಗೊಳಿಸಿದ್ದಾರೆ.

Crime News: ಪೊಲೀಸ್ ಜೀಪ್​ನಲ್ಲಿ ಕರೆದೊಯ್ಯುವಾಗ ಸಬ್ ಇನ್​ಸ್ಪೆಕ್ಟರ್ ಕಿವಿ ಕಚ್ಚಿದ ಆಸಾಮಿ!
ಪೊಲೀಸ್Image Credit source: Istockphoto.com
ಸುಷ್ಮಾ ಚಕ್ರೆ
|

Updated on: Feb 04, 2023 | 6:05 PM

Share

ಕಾಸರಗೋಡು: ರಸ್ತೆಯಲ್ಲಿ ವೇಗವಾಗಿ ಹೋಗುತ್ತಿದ್ದಾಗ ಅಪಘಾತ (Road Accident) ಮಾಡಿ, ಪೊಲೀಸರಿಂದ ತಪ್ಪಿಸಿಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ವೇಳೆ ಆತನನ್ನು ಪೊಲೀಸ್ ಜೀಪ್​ನಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ಯುವಾಗ ಆ ವ್ಯಕ್ತಿ ಜೀಪ್​ನಲ್ಲಿದ್ದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ಬಲ ಕಿವಿಯನ್ನು ಕಚ್ಚಿರುವ ಘಟನೆ ಕೇರಳದ (Kerala)  ಕಾಸರಗೋಡಿನಲ್ಲಿ ನಡೆದಿದೆ.

ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಿ ಜೀಪ್​ನಲ್ಲಿ ಕರೆದೊಯ್ಯುತ್ತಿದ್ದಾಗ ಆ ವ್ಯಕ್ತಿ ಎಸ್​ಐ ಕಿವಿಯನ್ನು ಕಚ್ಚಿದ್ದಾರೆ. ಈ ವೇಳೆ ಕಾಸರಗೋಡಿನ ಟೌನ್ ಪೊಲೀಸ್ ಠಾಣೆಯ ಎಸ್‌ಐ ವಿಷ್ಣು ಪ್ರಸಾದ್ ಅವರಿಗೆ ಗಾಯಗೊಂಡಿದ್ದು, ತಕ್ಷಣ ವೈದ್ಯಕೀಯ ಚಿಕಿತ್ಸೆ ಕೊಡಿಸಲಾಗಿದೆ.

ಇದನ್ನೂ ಓದಿ: Bengaluru Crime: ಬೆಂಗಳೂರಿನಲ್ಲೊಂದು ಭೀಕರ ಘಟನೆ; ಗರ್ಲ್​ಫ್ರೆಂಡ್​ನ 3 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿ, ಕೊಲೆ

ಆರೋಪಿ ಸ್ಟೇನಿ ರೋಡ್ರಿಗಸ್ ಬೈಕ್​ನಲ್ಲಿ ಅಪಘಾತ ಮಾಡಿದ್ದು, ಗಸ್ತು ತಿರುಗುತ್ತಿದ್ದ ಪೊಲೀಸ್ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದಿದ್ದರು. ಆತನನ್ನು ಪೊಲೀಸ್ ಠಾಣೆಗೆ ಕರೆದೊಯ್ಯುವಾಗ ಪೊಲೀಸ್ ಸಬ್ ಇನ್​ಸ್ಪೆಕ್ಟರ್ ಜೀಪ್​ನ ಮುಂದಿನ ಸೀಟಿನಲ್ಲಿ ಕುಳಿತಿದ್ದರು.

ತನ್ನನ್ನು ವಶಕ್ಕೆ ಪಡೆದಿದ್ದಕ್ಕೆ ಕೋಪಗೊಂಡಿದ್ದ ಸ್ಟೇನಿ ಕೋಪದ ಭರದಲ್ಲಿ ಹಿಂದಿನ ಸೀಟಿನಿಂದ ಬಗ್ಗಿ ತನ್ನ ಮುಂದೆ ಕುಳಿತಿದ್ದ ಎಸ್​ಐ ಅವರ ಅವರ ಬಲ ಕಿವಿಯನ್ನು ಕಚ್ಚಿ ಗಾಯಗೊಳಿಸಿದ್ದಾರೆ. ನಂತರ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ಧಾವಿಸಿದ ನಂತರ ಎಸ್‌ಐ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಎಸ್​ಐ ಕಿವಿಗೆ ಗಾಯವಾಗಿದ್ದು, ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!