AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಪೊಲೀಸ್ ಜೀಪ್​ನಲ್ಲಿ ಕರೆದೊಯ್ಯುವಾಗ ಸಬ್ ಇನ್​ಸ್ಪೆಕ್ಟರ್ ಕಿವಿ ಕಚ್ಚಿದ ಆಸಾಮಿ!

ಆರೋಪಿ ಸ್ಟೇನಿ ರೋಡ್ರಿಗಸ್ ಬೈಕ್​ನಲ್ಲಿ ಅಪಘಾತ ಮಾಡಿದ್ದು, ಗಸ್ತು ತಿರುಗುತ್ತಿದ್ದ ಪೊಲೀಸ್ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದಿದ್ದರು. ಆತನನ್ನು ಪೊಲೀಸ್ ಠಾಣೆಗೆ ಕರೆದೊಯ್ಯುವಾಗ ಜೀಪ್​ನಲ್ಲಿದ್ದ ಪೊಲೀಸ್ ಅಧಿಕಾರಿಯ ಕಿವಿಯನ್ನು ಕಚ್ಚಿ ಗಾಯಗೊಳಿಸಿದ್ದಾರೆ.

Crime News: ಪೊಲೀಸ್ ಜೀಪ್​ನಲ್ಲಿ ಕರೆದೊಯ್ಯುವಾಗ ಸಬ್ ಇನ್​ಸ್ಪೆಕ್ಟರ್ ಕಿವಿ ಕಚ್ಚಿದ ಆಸಾಮಿ!
ಪೊಲೀಸ್Image Credit source: Istockphoto.com
ಸುಷ್ಮಾ ಚಕ್ರೆ
|

Updated on: Feb 04, 2023 | 6:05 PM

Share

ಕಾಸರಗೋಡು: ರಸ್ತೆಯಲ್ಲಿ ವೇಗವಾಗಿ ಹೋಗುತ್ತಿದ್ದಾಗ ಅಪಘಾತ (Road Accident) ಮಾಡಿ, ಪೊಲೀಸರಿಂದ ತಪ್ಪಿಸಿಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ವೇಳೆ ಆತನನ್ನು ಪೊಲೀಸ್ ಜೀಪ್​ನಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ಯುವಾಗ ಆ ವ್ಯಕ್ತಿ ಜೀಪ್​ನಲ್ಲಿದ್ದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ಬಲ ಕಿವಿಯನ್ನು ಕಚ್ಚಿರುವ ಘಟನೆ ಕೇರಳದ (Kerala)  ಕಾಸರಗೋಡಿನಲ್ಲಿ ನಡೆದಿದೆ.

ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಿ ಜೀಪ್​ನಲ್ಲಿ ಕರೆದೊಯ್ಯುತ್ತಿದ್ದಾಗ ಆ ವ್ಯಕ್ತಿ ಎಸ್​ಐ ಕಿವಿಯನ್ನು ಕಚ್ಚಿದ್ದಾರೆ. ಈ ವೇಳೆ ಕಾಸರಗೋಡಿನ ಟೌನ್ ಪೊಲೀಸ್ ಠಾಣೆಯ ಎಸ್‌ಐ ವಿಷ್ಣು ಪ್ರಸಾದ್ ಅವರಿಗೆ ಗಾಯಗೊಂಡಿದ್ದು, ತಕ್ಷಣ ವೈದ್ಯಕೀಯ ಚಿಕಿತ್ಸೆ ಕೊಡಿಸಲಾಗಿದೆ.

ಇದನ್ನೂ ಓದಿ: Bengaluru Crime: ಬೆಂಗಳೂರಿನಲ್ಲೊಂದು ಭೀಕರ ಘಟನೆ; ಗರ್ಲ್​ಫ್ರೆಂಡ್​ನ 3 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿ, ಕೊಲೆ

ಆರೋಪಿ ಸ್ಟೇನಿ ರೋಡ್ರಿಗಸ್ ಬೈಕ್​ನಲ್ಲಿ ಅಪಘಾತ ಮಾಡಿದ್ದು, ಗಸ್ತು ತಿರುಗುತ್ತಿದ್ದ ಪೊಲೀಸ್ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದಿದ್ದರು. ಆತನನ್ನು ಪೊಲೀಸ್ ಠಾಣೆಗೆ ಕರೆದೊಯ್ಯುವಾಗ ಪೊಲೀಸ್ ಸಬ್ ಇನ್​ಸ್ಪೆಕ್ಟರ್ ಜೀಪ್​ನ ಮುಂದಿನ ಸೀಟಿನಲ್ಲಿ ಕುಳಿತಿದ್ದರು.

ತನ್ನನ್ನು ವಶಕ್ಕೆ ಪಡೆದಿದ್ದಕ್ಕೆ ಕೋಪಗೊಂಡಿದ್ದ ಸ್ಟೇನಿ ಕೋಪದ ಭರದಲ್ಲಿ ಹಿಂದಿನ ಸೀಟಿನಿಂದ ಬಗ್ಗಿ ತನ್ನ ಮುಂದೆ ಕುಳಿತಿದ್ದ ಎಸ್​ಐ ಅವರ ಅವರ ಬಲ ಕಿವಿಯನ್ನು ಕಚ್ಚಿ ಗಾಯಗೊಳಿಸಿದ್ದಾರೆ. ನಂತರ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ಧಾವಿಸಿದ ನಂತರ ಎಸ್‌ಐ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಎಸ್​ಐ ಕಿವಿಗೆ ಗಾಯವಾಗಿದ್ದು, ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್