Crime News: ಪೊಲೀಸ್ ಜೀಪ್​ನಲ್ಲಿ ಕರೆದೊಯ್ಯುವಾಗ ಸಬ್ ಇನ್​ಸ್ಪೆಕ್ಟರ್ ಕಿವಿ ಕಚ್ಚಿದ ಆಸಾಮಿ!

ಆರೋಪಿ ಸ್ಟೇನಿ ರೋಡ್ರಿಗಸ್ ಬೈಕ್​ನಲ್ಲಿ ಅಪಘಾತ ಮಾಡಿದ್ದು, ಗಸ್ತು ತಿರುಗುತ್ತಿದ್ದ ಪೊಲೀಸ್ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದಿದ್ದರು. ಆತನನ್ನು ಪೊಲೀಸ್ ಠಾಣೆಗೆ ಕರೆದೊಯ್ಯುವಾಗ ಜೀಪ್​ನಲ್ಲಿದ್ದ ಪೊಲೀಸ್ ಅಧಿಕಾರಿಯ ಕಿವಿಯನ್ನು ಕಚ್ಚಿ ಗಾಯಗೊಳಿಸಿದ್ದಾರೆ.

Crime News: ಪೊಲೀಸ್ ಜೀಪ್​ನಲ್ಲಿ ಕರೆದೊಯ್ಯುವಾಗ ಸಬ್ ಇನ್​ಸ್ಪೆಕ್ಟರ್ ಕಿವಿ ಕಚ್ಚಿದ ಆಸಾಮಿ!
ಪೊಲೀಸ್
Image Credit source: Istockphoto.com

Updated on: Feb 04, 2023 | 6:05 PM

ಕಾಸರಗೋಡು: ರಸ್ತೆಯಲ್ಲಿ ವೇಗವಾಗಿ ಹೋಗುತ್ತಿದ್ದಾಗ ಅಪಘಾತ (Road Accident) ಮಾಡಿ, ಪೊಲೀಸರಿಂದ ತಪ್ಪಿಸಿಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ವೇಳೆ ಆತನನ್ನು ಪೊಲೀಸ್ ಜೀಪ್​ನಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ಯುವಾಗ ಆ ವ್ಯಕ್ತಿ ಜೀಪ್​ನಲ್ಲಿದ್ದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ಬಲ ಕಿವಿಯನ್ನು ಕಚ್ಚಿರುವ ಘಟನೆ ಕೇರಳದ (Kerala)  ಕಾಸರಗೋಡಿನಲ್ಲಿ ನಡೆದಿದೆ.

ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಿ ಜೀಪ್​ನಲ್ಲಿ ಕರೆದೊಯ್ಯುತ್ತಿದ್ದಾಗ ಆ ವ್ಯಕ್ತಿ ಎಸ್​ಐ ಕಿವಿಯನ್ನು ಕಚ್ಚಿದ್ದಾರೆ. ಈ ವೇಳೆ ಕಾಸರಗೋಡಿನ ಟೌನ್ ಪೊಲೀಸ್ ಠಾಣೆಯ ಎಸ್‌ಐ ವಿಷ್ಣು ಪ್ರಸಾದ್ ಅವರಿಗೆ ಗಾಯಗೊಂಡಿದ್ದು, ತಕ್ಷಣ ವೈದ್ಯಕೀಯ ಚಿಕಿತ್ಸೆ ಕೊಡಿಸಲಾಗಿದೆ.

ಇದನ್ನೂ ಓದಿ: Bengaluru Crime: ಬೆಂಗಳೂರಿನಲ್ಲೊಂದು ಭೀಕರ ಘಟನೆ; ಗರ್ಲ್​ಫ್ರೆಂಡ್​ನ 3 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿ, ಕೊಲೆ

ಆರೋಪಿ ಸ್ಟೇನಿ ರೋಡ್ರಿಗಸ್ ಬೈಕ್​ನಲ್ಲಿ ಅಪಘಾತ ಮಾಡಿದ್ದು, ಗಸ್ತು ತಿರುಗುತ್ತಿದ್ದ ಪೊಲೀಸ್ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದಿದ್ದರು. ಆತನನ್ನು ಪೊಲೀಸ್ ಠಾಣೆಗೆ ಕರೆದೊಯ್ಯುವಾಗ ಪೊಲೀಸ್ ಸಬ್ ಇನ್​ಸ್ಪೆಕ್ಟರ್ ಜೀಪ್​ನ ಮುಂದಿನ ಸೀಟಿನಲ್ಲಿ ಕುಳಿತಿದ್ದರು.

ತನ್ನನ್ನು ವಶಕ್ಕೆ ಪಡೆದಿದ್ದಕ್ಕೆ ಕೋಪಗೊಂಡಿದ್ದ ಸ್ಟೇನಿ ಕೋಪದ ಭರದಲ್ಲಿ ಹಿಂದಿನ ಸೀಟಿನಿಂದ ಬಗ್ಗಿ ತನ್ನ ಮುಂದೆ ಕುಳಿತಿದ್ದ ಎಸ್​ಐ ಅವರ ಅವರ ಬಲ ಕಿವಿಯನ್ನು ಕಚ್ಚಿ ಗಾಯಗೊಳಿಸಿದ್ದಾರೆ. ನಂತರ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ಧಾವಿಸಿದ ನಂತರ ಎಸ್‌ಐ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಎಸ್​ಐ ಕಿವಿಗೆ ಗಾಯವಾಗಿದ್ದು, ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us