AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಪ್ರೀತಿಯ ನಾಯಿಗೆ ಊಟ ಹಾಕದಿದ್ದಕ್ಕೆ ಕಸಿನ್​ಗೆ ಹೊಡೆದು ಕೊಂದ ಯುವಕ!

ಹರ್ಷದ್​ ಮೈಮೇಲೆ ಆಗಿರುವ ಗಾಯವನ್ನು ನೋಡಿ ಇದು ಯಾರೋ ಹೊಡೆದಿದ್ದರಿಂದ ಆದ ಗಾಯವೆಂದು ವೈದ್ಯರಿಗೆ ಖಚಿತವಾಗಿತ್ತು. ಹೀಗಾಗಿ, ಅನುಮಾನಗೊಂಡ ಅವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

Crime News: ಪ್ರೀತಿಯ ನಾಯಿಗೆ ಊಟ ಹಾಕದಿದ್ದಕ್ಕೆ ಕಸಿನ್​ಗೆ ಹೊಡೆದು ಕೊಂದ ಯುವಕ!
ಸಾಂದರ್ಭಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Nov 07, 2022 | 1:27 PM

Share

ಪಲಕ್ಕಾಡ್: ತಾನು ಪ್ರೀತಿಯಿಂದ ಸಾಕಿದ್ದ ನಾಯಿಗೆ ಊಟ ಹಾಕಿಲ್ಲ ಎಂಬ ಕಾರಣಕ್ಕೆ ಕೇರಳದ ಪಲಕ್ಕಾಡ್‌ನಲ್ಲಿ (Palakkad) 27 ವರ್ಷದ ಯುವಕನೊಬ್ಬ ತನ್ನ 21 ವರ್ಷದ ಸೋದರಸಂಬಂಧಿಯನ್ನು (ಕಸಿನ್) ಹೊಡೆದು, ಕೊಂದಿರುವ ಆಘಾತಕಾರಿ ಘಟನೆ (Shocking News) ನಡೆದಿದೆ. ಅಕ್ಟೋಬರ್ 4ರಂದು ರಾತ್ರಿ ಪಲಕ್ಕಾಡ್ ಜಿಲ್ಲೆಯ ಮುಲಯಂಕಾವು ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ತನ್ನ ಕಸಿನ್ ತಾನು ಸಾಕಿದ್ದ ನಾಯಿಗೆ ಊಟ ನೀಡದ ಕಾರಣ ಕೋಪಗೊಂಡ ಆರೋಪಿ ಆತನನ್ನು ಹೊಡೆದು ಕೊಂದಿದ್ದಾನೆ.

ಕೊಲೆಯಾದ ವ್ಯಕ್ತಿಯನ್ನು 21 ವರ್ಷದ ಹರ್ಷದ್ ಎಂದು ಗುರುತಿಸಲಾಗಿದೆ. ಆತನ ಕಸಿನ್ 27 ವರ್ಷದ ಹಕೀಂನನ್ನು ಕೊಪ್ಪಂ ಪೊಲೀಸರು ಬಂಧಿಸಿದ್ದಾರೆ. ಕೋಪದಿಂದ ಹೊಡೆದ ಬಳಿಕ ರಕ್ತದಲ್ಲಿ ಬಿದ್ದು ಒದ್ದಾಡುತ್ತಿದ್ದ ಕಸಿನ್​ ಹರ್ಷದ್​​ನನ್ನು ಕಂಡು ಆತಂಕಗೊಂಡ ಹಕೀಂ ತನ್ನ ಸ್ನೇಹಿತರ ಜತೆ ಸೇರಿ ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಅಲ್ಲಿ ಆತನಿಗೆ ಏನಾಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ಕೇಳಿದಾಗ ತಮ್ಮ ಮನೆಯ ಟೆರೇಸಿನಿಂದ ಬಿದ್ದು ಆತನಿಗೆ ಗಾಯವಾಗಿದೆ ಎಂದು ಸುಳ್ಳು ಹೇಳಿದ್ದಾರೆ.

ಇದನ್ನೂ ಓದಿ: Shocking News: ಕೆಲಸದಿಂದ ತೆಗೆದಿದ್ದಕ್ಕೆ ಕತ್ತು ಸೀಳಿ ದಂಪತಿಯ ಹತ್ಯೆ; ಬೆಡ್​ಶೀಟ್​ನಡಿ ಅಡಗಿ ಕುಳಿತು ಬಚಾವಾಯ್ತು ಮಗು!

ಆದರೆ, ಹರ್ಷದ್​ ಮೈಮೇಲೆ ಆಗಿರುವ ಗಾಯವನ್ನು ನೋಡಿ ಇದು ಯಾರೋ ಹೊಡೆದಿದ್ದರಿಂದ ಆದ ಗಾಯವೆಂದು ವೈದ್ಯರಿಗೆ ಖಚಿತವಾಗಿತ್ತು. ಹೀಗಾಗಿ, ಅನುಮಾನಗೊಂಡ ಅವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಹರ್ಷದ್ ಮತ್ತು ಹಕೀಂ ಇಬ್ಬರೂ ಅಕ್ಕ-ತಂಗಿಯ ಮಕ್ಕಳಾಗಿದ್ದು, ಒಟ್ಟಿಗೇ ಕೇಬಲ್ ಕೆಲಸ ಮಾಡುತ್ತಿದ್ದರು. ವೈದ್ಯರು ಚಿಕಿತ್ಸೆ ನೀಡಿದರೂ ಗಂಭೀರ ಗಾಯಗಳಾಗಿದ್ದರಿಂದ ಹಾಗೂ ಎಲುಬು ಮುರಿದಿದ್ದರಿಂದ ಹರ್ಷದ್ ಬದುಕುಳಿಯಲಿಲ್ಲ. ಆಸ್ಪತ್ರೆ ವೈದ್ಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಪೊಲೀಸರು ವಿಚಾರಣೆ ನಡೆಸಿದಾಗ ಹಕೀಂ ತಾನೇ ತನ್ನ ಕಸಿನ್​ಗೆ ಹೊಡೆದಿರುವುದಾಗಿ ಒಪ್ಪಿಕೊಂಡಿದ್ದಾನೆ.

ಪೊಲೀಸ್ ವಿಚಾರಣೆ ವೇಳೆ ಶುಕ್ರವಾರ ಹಕೀಂ ತನ್ನ ನಾಯಿಗೆ ಆಹಾರ ನೀಡದಿದ್ದಕ್ಕೆ ಹರ್ಷದ್‌ಗೆ ಥಳಿಸಿರುವುದು ಪತ್ತೆಯಾಗಿದೆ. ಇದರಿಂದ ಕೋಪಗೊಂಡ ಹಕೀಂ ನಾಯಿಯ ಬೆಲ್ಟ್ ಮತ್ತು ಮರದ ಕೋಲಿನಿಂದ ಹಕೀಂನನ್ನು ಥಳಿಸಿದ್ದಾನೆ. ಇದರ ಆಧಾರದ ಮೇಲೆ ಕೊಪ್ಪಂ ಪೊಲೀಸರು ಹಕೀಂನನ್ನು ವಶಕ್ಕೆ ಪಡೆದು ನಂತರ ಬಂಧಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?