Crime News: ಪ್ರೀತಿಯ ನಾಯಿಗೆ ಊಟ ಹಾಕದಿದ್ದಕ್ಕೆ ಕಸಿನ್​ಗೆ ಹೊಡೆದು ಕೊಂದ ಯುವಕ!

ಹರ್ಷದ್​ ಮೈಮೇಲೆ ಆಗಿರುವ ಗಾಯವನ್ನು ನೋಡಿ ಇದು ಯಾರೋ ಹೊಡೆದಿದ್ದರಿಂದ ಆದ ಗಾಯವೆಂದು ವೈದ್ಯರಿಗೆ ಖಚಿತವಾಗಿತ್ತು. ಹೀಗಾಗಿ, ಅನುಮಾನಗೊಂಡ ಅವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

Crime News: ಪ್ರೀತಿಯ ನಾಯಿಗೆ ಊಟ ಹಾಕದಿದ್ದಕ್ಕೆ ಕಸಿನ್​ಗೆ ಹೊಡೆದು ಕೊಂದ ಯುವಕ!
ಸಾಂದರ್ಭಿಕ ಚಿತ್ರ
Follow us
| Updated By: ಸುಷ್ಮಾ ಚಕ್ರೆ

Updated on: Nov 07, 2022 | 1:27 PM

ಪಲಕ್ಕಾಡ್: ತಾನು ಪ್ರೀತಿಯಿಂದ ಸಾಕಿದ್ದ ನಾಯಿಗೆ ಊಟ ಹಾಕಿಲ್ಲ ಎಂಬ ಕಾರಣಕ್ಕೆ ಕೇರಳದ ಪಲಕ್ಕಾಡ್‌ನಲ್ಲಿ (Palakkad) 27 ವರ್ಷದ ಯುವಕನೊಬ್ಬ ತನ್ನ 21 ವರ್ಷದ ಸೋದರಸಂಬಂಧಿಯನ್ನು (ಕಸಿನ್) ಹೊಡೆದು, ಕೊಂದಿರುವ ಆಘಾತಕಾರಿ ಘಟನೆ (Shocking News) ನಡೆದಿದೆ. ಅಕ್ಟೋಬರ್ 4ರಂದು ರಾತ್ರಿ ಪಲಕ್ಕಾಡ್ ಜಿಲ್ಲೆಯ ಮುಲಯಂಕಾವು ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ತನ್ನ ಕಸಿನ್ ತಾನು ಸಾಕಿದ್ದ ನಾಯಿಗೆ ಊಟ ನೀಡದ ಕಾರಣ ಕೋಪಗೊಂಡ ಆರೋಪಿ ಆತನನ್ನು ಹೊಡೆದು ಕೊಂದಿದ್ದಾನೆ.

ಕೊಲೆಯಾದ ವ್ಯಕ್ತಿಯನ್ನು 21 ವರ್ಷದ ಹರ್ಷದ್ ಎಂದು ಗುರುತಿಸಲಾಗಿದೆ. ಆತನ ಕಸಿನ್ 27 ವರ್ಷದ ಹಕೀಂನನ್ನು ಕೊಪ್ಪಂ ಪೊಲೀಸರು ಬಂಧಿಸಿದ್ದಾರೆ. ಕೋಪದಿಂದ ಹೊಡೆದ ಬಳಿಕ ರಕ್ತದಲ್ಲಿ ಬಿದ್ದು ಒದ್ದಾಡುತ್ತಿದ್ದ ಕಸಿನ್​ ಹರ್ಷದ್​​ನನ್ನು ಕಂಡು ಆತಂಕಗೊಂಡ ಹಕೀಂ ತನ್ನ ಸ್ನೇಹಿತರ ಜತೆ ಸೇರಿ ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಅಲ್ಲಿ ಆತನಿಗೆ ಏನಾಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ಕೇಳಿದಾಗ ತಮ್ಮ ಮನೆಯ ಟೆರೇಸಿನಿಂದ ಬಿದ್ದು ಆತನಿಗೆ ಗಾಯವಾಗಿದೆ ಎಂದು ಸುಳ್ಳು ಹೇಳಿದ್ದಾರೆ.

ಇದನ್ನೂ ಓದಿ: Shocking News: ಕೆಲಸದಿಂದ ತೆಗೆದಿದ್ದಕ್ಕೆ ಕತ್ತು ಸೀಳಿ ದಂಪತಿಯ ಹತ್ಯೆ; ಬೆಡ್​ಶೀಟ್​ನಡಿ ಅಡಗಿ ಕುಳಿತು ಬಚಾವಾಯ್ತು ಮಗು!

ಆದರೆ, ಹರ್ಷದ್​ ಮೈಮೇಲೆ ಆಗಿರುವ ಗಾಯವನ್ನು ನೋಡಿ ಇದು ಯಾರೋ ಹೊಡೆದಿದ್ದರಿಂದ ಆದ ಗಾಯವೆಂದು ವೈದ್ಯರಿಗೆ ಖಚಿತವಾಗಿತ್ತು. ಹೀಗಾಗಿ, ಅನುಮಾನಗೊಂಡ ಅವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಹರ್ಷದ್ ಮತ್ತು ಹಕೀಂ ಇಬ್ಬರೂ ಅಕ್ಕ-ತಂಗಿಯ ಮಕ್ಕಳಾಗಿದ್ದು, ಒಟ್ಟಿಗೇ ಕೇಬಲ್ ಕೆಲಸ ಮಾಡುತ್ತಿದ್ದರು. ವೈದ್ಯರು ಚಿಕಿತ್ಸೆ ನೀಡಿದರೂ ಗಂಭೀರ ಗಾಯಗಳಾಗಿದ್ದರಿಂದ ಹಾಗೂ ಎಲುಬು ಮುರಿದಿದ್ದರಿಂದ ಹರ್ಷದ್ ಬದುಕುಳಿಯಲಿಲ್ಲ. ಆಸ್ಪತ್ರೆ ವೈದ್ಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಪೊಲೀಸರು ವಿಚಾರಣೆ ನಡೆಸಿದಾಗ ಹಕೀಂ ತಾನೇ ತನ್ನ ಕಸಿನ್​ಗೆ ಹೊಡೆದಿರುವುದಾಗಿ ಒಪ್ಪಿಕೊಂಡಿದ್ದಾನೆ.

ಪೊಲೀಸ್ ವಿಚಾರಣೆ ವೇಳೆ ಶುಕ್ರವಾರ ಹಕೀಂ ತನ್ನ ನಾಯಿಗೆ ಆಹಾರ ನೀಡದಿದ್ದಕ್ಕೆ ಹರ್ಷದ್‌ಗೆ ಥಳಿಸಿರುವುದು ಪತ್ತೆಯಾಗಿದೆ. ಇದರಿಂದ ಕೋಪಗೊಂಡ ಹಕೀಂ ನಾಯಿಯ ಬೆಲ್ಟ್ ಮತ್ತು ಮರದ ಕೋಲಿನಿಂದ ಹಕೀಂನನ್ನು ಥಳಿಸಿದ್ದಾನೆ. ಇದರ ಆಧಾರದ ಮೇಲೆ ಕೊಪ್ಪಂ ಪೊಲೀಸರು ಹಕೀಂನನ್ನು ವಶಕ್ಕೆ ಪಡೆದು ನಂತರ ಬಂಧಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ