AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಪ್ರೀತಿಯ ನಾಯಿಗೆ ಊಟ ಹಾಕದಿದ್ದಕ್ಕೆ ಕಸಿನ್​ಗೆ ಹೊಡೆದು ಕೊಂದ ಯುವಕ!

ಹರ್ಷದ್​ ಮೈಮೇಲೆ ಆಗಿರುವ ಗಾಯವನ್ನು ನೋಡಿ ಇದು ಯಾರೋ ಹೊಡೆದಿದ್ದರಿಂದ ಆದ ಗಾಯವೆಂದು ವೈದ್ಯರಿಗೆ ಖಚಿತವಾಗಿತ್ತು. ಹೀಗಾಗಿ, ಅನುಮಾನಗೊಂಡ ಅವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

Crime News: ಪ್ರೀತಿಯ ನಾಯಿಗೆ ಊಟ ಹಾಕದಿದ್ದಕ್ಕೆ ಕಸಿನ್​ಗೆ ಹೊಡೆದು ಕೊಂದ ಯುವಕ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 07, 2022 | 1:27 PM

Share

ಪಲಕ್ಕಾಡ್: ತಾನು ಪ್ರೀತಿಯಿಂದ ಸಾಕಿದ್ದ ನಾಯಿಗೆ ಊಟ ಹಾಕಿಲ್ಲ ಎಂಬ ಕಾರಣಕ್ಕೆ ಕೇರಳದ ಪಲಕ್ಕಾಡ್‌ನಲ್ಲಿ (Palakkad) 27 ವರ್ಷದ ಯುವಕನೊಬ್ಬ ತನ್ನ 21 ವರ್ಷದ ಸೋದರಸಂಬಂಧಿಯನ್ನು (ಕಸಿನ್) ಹೊಡೆದು, ಕೊಂದಿರುವ ಆಘಾತಕಾರಿ ಘಟನೆ (Shocking News) ನಡೆದಿದೆ. ಅಕ್ಟೋಬರ್ 4ರಂದು ರಾತ್ರಿ ಪಲಕ್ಕಾಡ್ ಜಿಲ್ಲೆಯ ಮುಲಯಂಕಾವು ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ತನ್ನ ಕಸಿನ್ ತಾನು ಸಾಕಿದ್ದ ನಾಯಿಗೆ ಊಟ ನೀಡದ ಕಾರಣ ಕೋಪಗೊಂಡ ಆರೋಪಿ ಆತನನ್ನು ಹೊಡೆದು ಕೊಂದಿದ್ದಾನೆ.

ಕೊಲೆಯಾದ ವ್ಯಕ್ತಿಯನ್ನು 21 ವರ್ಷದ ಹರ್ಷದ್ ಎಂದು ಗುರುತಿಸಲಾಗಿದೆ. ಆತನ ಕಸಿನ್ 27 ವರ್ಷದ ಹಕೀಂನನ್ನು ಕೊಪ್ಪಂ ಪೊಲೀಸರು ಬಂಧಿಸಿದ್ದಾರೆ. ಕೋಪದಿಂದ ಹೊಡೆದ ಬಳಿಕ ರಕ್ತದಲ್ಲಿ ಬಿದ್ದು ಒದ್ದಾಡುತ್ತಿದ್ದ ಕಸಿನ್​ ಹರ್ಷದ್​​ನನ್ನು ಕಂಡು ಆತಂಕಗೊಂಡ ಹಕೀಂ ತನ್ನ ಸ್ನೇಹಿತರ ಜತೆ ಸೇರಿ ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಅಲ್ಲಿ ಆತನಿಗೆ ಏನಾಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ಕೇಳಿದಾಗ ತಮ್ಮ ಮನೆಯ ಟೆರೇಸಿನಿಂದ ಬಿದ್ದು ಆತನಿಗೆ ಗಾಯವಾಗಿದೆ ಎಂದು ಸುಳ್ಳು ಹೇಳಿದ್ದಾರೆ.

ಇದನ್ನೂ ಓದಿ: Shocking News: ಕೆಲಸದಿಂದ ತೆಗೆದಿದ್ದಕ್ಕೆ ಕತ್ತು ಸೀಳಿ ದಂಪತಿಯ ಹತ್ಯೆ; ಬೆಡ್​ಶೀಟ್​ನಡಿ ಅಡಗಿ ಕುಳಿತು ಬಚಾವಾಯ್ತು ಮಗು!

ಆದರೆ, ಹರ್ಷದ್​ ಮೈಮೇಲೆ ಆಗಿರುವ ಗಾಯವನ್ನು ನೋಡಿ ಇದು ಯಾರೋ ಹೊಡೆದಿದ್ದರಿಂದ ಆದ ಗಾಯವೆಂದು ವೈದ್ಯರಿಗೆ ಖಚಿತವಾಗಿತ್ತು. ಹೀಗಾಗಿ, ಅನುಮಾನಗೊಂಡ ಅವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಹರ್ಷದ್ ಮತ್ತು ಹಕೀಂ ಇಬ್ಬರೂ ಅಕ್ಕ-ತಂಗಿಯ ಮಕ್ಕಳಾಗಿದ್ದು, ಒಟ್ಟಿಗೇ ಕೇಬಲ್ ಕೆಲಸ ಮಾಡುತ್ತಿದ್ದರು. ವೈದ್ಯರು ಚಿಕಿತ್ಸೆ ನೀಡಿದರೂ ಗಂಭೀರ ಗಾಯಗಳಾಗಿದ್ದರಿಂದ ಹಾಗೂ ಎಲುಬು ಮುರಿದಿದ್ದರಿಂದ ಹರ್ಷದ್ ಬದುಕುಳಿಯಲಿಲ್ಲ. ಆಸ್ಪತ್ರೆ ವೈದ್ಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಪೊಲೀಸರು ವಿಚಾರಣೆ ನಡೆಸಿದಾಗ ಹಕೀಂ ತಾನೇ ತನ್ನ ಕಸಿನ್​ಗೆ ಹೊಡೆದಿರುವುದಾಗಿ ಒಪ್ಪಿಕೊಂಡಿದ್ದಾನೆ.

ಪೊಲೀಸ್ ವಿಚಾರಣೆ ವೇಳೆ ಶುಕ್ರವಾರ ಹಕೀಂ ತನ್ನ ನಾಯಿಗೆ ಆಹಾರ ನೀಡದಿದ್ದಕ್ಕೆ ಹರ್ಷದ್‌ಗೆ ಥಳಿಸಿರುವುದು ಪತ್ತೆಯಾಗಿದೆ. ಇದರಿಂದ ಕೋಪಗೊಂಡ ಹಕೀಂ ನಾಯಿಯ ಬೆಲ್ಟ್ ಮತ್ತು ಮರದ ಕೋಲಿನಿಂದ ಹಕೀಂನನ್ನು ಥಳಿಸಿದ್ದಾನೆ. ಇದರ ಆಧಾರದ ಮೇಲೆ ಕೊಪ್ಪಂ ಪೊಲೀಸರು ಹಕೀಂನನ್ನು ವಶಕ್ಕೆ ಪಡೆದು ನಂತರ ಬಂಧಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ