AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರತಕ್ಷತೆಗೆ ಸಿದ್ದತೆಯಲ್ಲಿದ್ದ ಯುವತಿಯನ್ನು ಕಿಡ್ನಾಪ್ ಮಾಡಿದ ಕಾರ್ಪೋರೆಟರ್? ನ್ಯಾಯಕ್ಕಾಗಿ ಅಂಗಲಾಚುತ್ತಿರುವ ಯುವತಿ

ಆರತಕ್ಷತೆಗೆ ಸಿದ್ದತೆಯಲ್ಲಿದ್ದ ಯುವತಿಯನ್ನು ಕಿಡ್ನಾಪ್ ಮಾಡಿದ ಆರೋಪ ಕಾರ್ಪೋರೆಟರ್ ವಿರುದ್ಧ ಕೇಳಿಬಂದಿದ್ದು, ನ್ಯಾಯಕ್ಕಾಗಿ ಯುವತಿ ಅಂಗಲಾಚುತ್ತಿದ್ದಾಳೆ.

ಆರತಕ್ಷತೆಗೆ ಸಿದ್ದತೆಯಲ್ಲಿದ್ದ ಯುವತಿಯನ್ನು ಕಿಡ್ನಾಪ್ ಮಾಡಿದ ಕಾರ್ಪೋರೆಟರ್? ನ್ಯಾಯಕ್ಕಾಗಿ ಅಂಗಲಾಚುತ್ತಿರುವ ಯುವತಿ
ಚೇತನ್ ಹಿರೇಕೆರೂರು ಮತ್ತು ಸಹನಾ ದಂಪತಿ
TV9 Web
| Edited By: |

Updated on:Jun 28, 2022 | 9:22 AM

Share

ಹುಬ್ಬಳ್ಳಿ: ಆರತಕ್ಷತೆಗೆ ಸಿದ್ದತೆಯಲ್ಲಿದ್ದ ಯುವತಿಯನ್ನು ಕಿಡ್ನಾಪ್ (Kidnap) ಮಾಡಿದ ಆರೋಪ ಕಾರ್ಪೋರೆಟರ್ ವಿರುದ್ಧ ಕೇಳಿಬಂದಿದ್ದು, ಪೊಲೀಸ್ ಠಾಣೆಯಲ್ಲಿ ನ್ಯಾಯ ಸಿಗದ ಹಿನ್ನೆಲೆ ದಂಪತಿ, ಕೋರ್ಟ್ ಮೆಟ್ಟಿಲೇರಲು ಮುಂದಾಗಿದ್ದಾರೆ. ಸದ್ಯ ಕಾರ್ಪೋರೆಟರ್ ಚೇತನ ಹಿರೇಕೆರೂರು ಸೇರಿ ಮೂವರ ವಿರುದ್ದ ಕಿಡ್ನಾಪ್ ದೂರು ನೀಡಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಲಾಗಿದೆ.

ಮನೆಯವರ ವಿರೋಧವನ್ನು ಲೆಕ್ಕಿಸದೆ 7 ತಿಂಗಳ ಹಿಂದೆ ನಿಖಿಲ್ ದಾಂಡೇಲಿ ಎಂಬವರನ್ನು ಸಹನಾ ಮದುವೆಯಾಗಿದ್ದು, ಜೂನ್ 26ರಂದು ಆರಕ್ಷತೆ ಕಾರ್ಯಕ್ರಮವನ್ನು ಇಟ್ಟುಕೊಂಡಿದ್ದರು. ಈ ಹಿನ್ನೆಲೆ ತಂದೆತಾಯಿಯ ಆಶೀರ್ವಾದ ಪಡೆಯಲು ತವರಿಗೆ ಹೋಗಿದ್ದಾಗ ಸಹನಾಳ ಕಿಡ್ನಾಪ್ ಆಗಿದೆ.

ಇದನ್ನೂ ಓದಿ: Lady Singham: ಕೊನೆಗೂ ಲೇಡಿ ಸಿಂಗಮ್ ಅರೆಸ್ಟ್​..!

ಹುಬ್ಬಳ್ಳಿಯ ಅಕ್ಷಯ್ ಪಾರ್ಕ್ ಬಳಿ ಪೋಷಕರನ್ನು ಭೇಟಿಯಾಗಲು ಹೋಗಿದ್ದಾಗ ಕಾರ್ಪೋರೆಟರ್ ಚೇತನ ಹೀರೇಕೆರೂರು, ಯುವತಿ ತಂದೆ ಶಿವು ಹೀರೆಕೇರೂರ ಮತ್ತು ಕುಟುಂಬದವರು ಸಹನಾಳನ್ನು ಕಿಡ್ನಾಪ್ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಿಖಿಲ್ ಗೋಕುಲ ರೋಡ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿದ ಖಾಕಿ ಸುಮ್ಮನಾಗಿರುವ ಹಿನ್ನೆಲೆ ಜೀವಭಯದಲ್ಲೇ ನವದಂಪತಿ ಓಡಾಡುವಂತಾಗಿದೆ.

ಕಿಡ್ನಾಪ್ ಮಾಡಿ ಬೆದರಿಕೆ ಹಾಕಿದ್ದ ಬಗ್ಗೆ ದೂರು ನೀಡಿದ್ದರೂ ಪೊಲೀಸರು ಕಿಡ್ನಾಪ್ ಮಾಸ್ಟರ್ ಮೈಂಡ್ ವಿರುದ್ಧ ಕ್ರಮಕೈಗೊಳ್ಳಲು ಹಿಂದೇಟು ಹಾಕುತ್ತಿರುವುದೇಕೆ ಎಂದು ಪ್ರಶ್ನಿಸುತ್ತಿರುವ ದಂಪತಿ, ನ್ಯಾಯಕ್ಕಾಗಿ ಕೋರ್ಟ್ ಮೊರೆ ಹೋಗಲು ಮುಂದಾಗಿದ್ದಾರೆ. ಅಲ್ಲದೆ ಮುಂದೆ ಯಾವುದೇ ಅನಾಹುತಗಳಿಗೆ ಪೊಲೀಸರೇ ಕಾರಣ ಎಂದು ಸಹನಾ ಮತ್ತು ನಿಖೀಲ್ ಹೇಳಿದ್ದಾರೆ.

ಗೋವಾದಲ್ಲಿ ಯುವತಿಯ ರಕ್ಷಣೆ, ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲು

ಕಿಡ್ನಾಪ್ ಪ್ರಕರಣ ಸಂಬಂಧ ಸಹನಾಳನ್ನು ಪೊಲೀಸರು ಗೋವಾದಿಂದ ರಕ್ಷಿಸಿ ಕರೆತಂದಿದ್ದಾರೆ. ದೂರು ನೀಡಿದ್ರೂ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದ ಆರೋಪ ಹಿನ್ನೆಲೆ ಪೊಲೀಸ್ ಆಯುಕ್ತರನ್ನು ಭೇಟಿಯಾದ ದಂಪತಿ, ತಮಗೆ ರಕ್ಷಣೆಗೆ ಕೊಡುವಂತೆ ಹಾಗೂ ಅಪಹರಣಕಾರರನ್ನು ಬಂಧಿಸುವಂತೆ ಮನವಿ ಮಾಡಿದ್ದಾರೆ. ಸದ್ಯ ಹುಬ್ಬಳ್ಳಿ ಧಾರವಾಡ ಪಾಲಿಕೆ ಕಾರ್ಪೋರೇಟರ್ ಸೇರಿ ಮೂವರ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಯುವತಿಯ ಹೇಳಿಕೆಯನ್ನು ವಕೀಲರು ನ್ಯಾಯಾಧೀಶರ ಮುಂದೆ ದಾಖಲಿಸಿದ್ದಾರೆ.

ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಸ್ನೇಹಿತನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಆರೋಪಿ ಬಂಧನ

Published On - 8:21 am, Tue, 28 June 22

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್