AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ರಾಮಲಿಂಗಾರೆಡ್ಡಿ ಮನೆಯ ಎದುರೇ ವ್ಯಕ್ತಿಯ ಬರ್ಬರ ಹತ್ಯೆ: ಹಳೆ ದ್ವೇಷ ಶಂಕೆ

ಸಚಿವ ರಾಮಲಿಂಗಾರೆಡ್ಡಿ ಮನೆಯ ಎದುರೇ ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ನಗರದ ಲಕ್ಕಸಂದ್ರದಲ್ಲಿ ಸಂಜೆ ಏಳು ಗಂಟೆ ಸುಮಾರಿಗೆ ನಡೆದಿದೆ. ಹಳೆ ದ್ವೇಷ ಹಿನ್ನೆಲೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಆಡುಗೋಡಿ ಠಾಣೆಯ ಪೊಲೀಸರು ದೌಡಾಯಿಸಿದ್ದಾರೆ. 

ಸಚಿವ ರಾಮಲಿಂಗಾರೆಡ್ಡಿ ಮನೆಯ ಎದುರೇ ವ್ಯಕ್ತಿಯ ಬರ್ಬರ ಹತ್ಯೆ: ಹಳೆ ದ್ವೇಷ ಶಂಕೆ
ಮೃತ ವ್ಯಕ್ತಿ ಜೈಪ್ರಕಾಶ್ ಅಲಿಯಾಸ್ ನಾಯಿ ಅಪ್ಪಿ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Dec 24, 2023 | 9:02 PM

Share

ಬೆಂಗಳೂರು, ಡಿಸೆಂಬರ್​ 24: ಸಚಿವ ರಾಮಲಿಂಗಾರೆಡ್ಡಿ (Ramalingareddy) ಮನೆಯ ಎದುರೇ ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ನಗರದ ಲಕ್ಕಸಂದ್ರದಲ್ಲಿ ಸಂಜೆ ಏಳು ಗಂಟೆ ಸುಮಾರಿಗೆ ನಡೆದಿದೆ. ಜೈಪ್ರಕಾಶ್ ಅಲಿಯಾಸ್ ನಾಯಿ ಅಪ್ಪಿ ಮೃತ ವ್ಯಕ್ತಿ. 2006ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೈಪ್ರಕಾಶ್ ಆರೋಪಿಯಾಗಿದ್ದ. ಹಳೆ ದ್ವೇಷ ಹಿನ್ನೆಲೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಆಡುಗೋಡಿ ಠಾಣೆಯ ಪೊಲೀಸರು ದೌಡಾಯಿಸಿದ್ದಾರೆ.

ಇಂದು ಹನುಮಜಯಂತಿ ಹಿನ್ನೆಲೆ ಲಕ್ಕಸಂದ್ರ ಬಸ್ ನಿಲ್ದಾಣ ಬಳಿಯ ಆಂಜಿನೇಯ ದೇವಸ್ಥಾನದ ಅನ್ನದಾನ ಕಾರ್ಯಕ್ರಮದಲ್ಲಿ ಮೃತ ಜೈಪ್ರಕಾಶ್ ಭಾಗಿಯಾಗಿದ್ದ. ಈ ವೇಳೆ ಕೆಲ ಹೊತ್ತು ಜೈ ಪ್ರಕಾಶ್​ನನ್ನ ನಾಲ್ಕೈದು ಜನ ಆರೋಪಿಗಳು ಅಬ್ಸರ್ವ್ ಮಾಡಿದ್ದಾರೆ.

ಇದನ್ನೂ ಓದಿ: ಎರಡು ಕಾರುಗಳ ಮಧ್ಯೆ ಡಿಕ್ಕಿ: ಯಾದಗಿರಿ ಮೂಲದ ಮೂವರು ಸೇರಿದಂತೆ ಐವರ ದುರ್ಮರಣ

ಏಳು ಗಂಟೆ ಸುಮಾರಿಗೆ ಏಕಾ ಏಕಿ ಮಾರಕಾಸ್ತ್ರಗಳಿಂದ ಅಟ್ಯಾಕ್ ಮಾಡಿದ್ದಾರೆ. ತಪ್ಪಿಸಿಕೊಳ್ಳೋಕೆ ಕೆಲ ದೂರ ಓಡಿದ್ದಾನೆ. ಈ ವೇಳೆ ವಿಜಯ ಸಾಗರ ಹೋಟೆಲ್​ಗೆ ಜೈಪ್ರಕಾಶ್ ನುಗ್ಗಿದ್ದು, ಹಿಂಬಾಲಿಸಿಕೊಂಡು ಬಂದ ಆರೋಪಿಗಳು ಹೋಟೆಲ್​ನಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ, ಎಸ್ಕೇಪ್ ಆಗಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಐದು ತಂಡ ರಚಿಸಿ ಆರೋಪಿಗಳ ಹುಡುಕಾಟ: ಡಿಸಿಪಿ ಸಿಕೆ ಬಾಬ 

ಆಗ್ನೇಯ ವಿಭಾಗದ ಡಿಸಿಪಿ ಸಿಕೆ ಬಾಬ ಹೇಳಿಕೆ ನೀಡಿದ್ದು, ಸಂಜೆ‌ 6.30-6.40ಸುಮಾರಿಗೆ ಘಟನೆ ನಡೆದಿದೆ. ಜಯಪ್ರಕಾಶ್ ಎಂಬಾತ ಸಂಜೆ ಅನ್ನದಾನ ಕಾರ್ಯಕ್ರಮ ಮಾಡುತ್ತಿದ್ದ. ಅಲ್ಲಿಂದ ಓಡಿಸ್ಕೊಂಡು ಬಂದು ನಾಲ್ಕರಿಂದ ಐದು ಜನ ಆರೋಪಿಗಳು ಹೋಟೆಲ್ ಒಳಗಡೆ ಹತ್ಯೆ ಮಾಡಿದಾರೆ. ಈ ಹಿಂದೆ 2005-6ರಲ್ಲಿ ಕೊಲೆಯಾದವನ ಮೇಲೆ ಕೇಸ್ ಇದೆ.

ಇದನ್ನೂ ಓದಿ: ಲವ್ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಿಯತಮೆ ಬೆಂಕಿ ಹಚ್ಚಿದ ಪ್ರಕರಣ; ಆರೋಪಿ ಬಂಧನ

ಅದಾದ ಮೇಲೆ ಈತ ಆಟೋ ಓಡಿಸ್ಕೊಂಡು ಬೇರೆ ಏರಿಯಾದಲ್ಲಿ ವಾಸವಾಗಿದ್ದ. ಈ ಹಿಂದೆ ಮರ್ಡರ್ ಕೇಸ್​ ಒಂದರಲ್ಲಿ ಭಾಗಿಯಾಗಿದ್ದ. ನಂತರ ಆ್ಯಕ್ಟೀವ್ ಆಗಿರುವುದರ ಬಗ್ಗೆ ಮಾಹಿತಿ ಸದ್ಯಕ್ಕಿಲ್ಲ. ಹಳೆ ದ್ವೇಷ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ಇದೆ. ಐದು ತಂಡ ರಚಿಸಿ ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:48 pm, Sun, 24 December 23

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​